ದೆಹಲಿ ಸಾಮೂಹಿಕ ಆತ್ಮಹತ್ಯೆ: ಪೋಸ್ಟ್ ಮಾರ್ಟಮ್ ವರದಿ ಏನು ಹೇಳುತ್ತೆ?
ದೆಹಲಿ, ಜುಲೈ 11: ಕುತೂಹಲ ಕೆರಳಿಸಿರುವ ದೆಹಲಿಯ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿಗಳು ಬಂದಿದ್ದು, ಹನ್ನೊಂದರಲ್ಲಿ 10 ಜನ ನೇಣು ಬಿಗಿದುಕೊಂಡೇ ಸತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಕುಟುಂಬದ ಹಿರಿಯ ಮಹಿಳೆ ನಾರಾಯಣ ದೇವಿ ಅವರ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. 10 ಜನರ ದೇಹದ ಮೇಲೂ ಯಾವುದೇ ರೀತಿಯ ಗಾಯದ ಗುರುತುಗಳು ಕಂಡು ಬಂದಿಲ್ಲವಾದ್ದರಿಂದ ಇದನ್ನು ಆತ್ಮಹತ್ಯೆ ಎಂದೇ ಪೋಸ್ಟ್ ಮಾರ್ಟಮ್ ವರದಿಗಳು ಹೇಳುತ್ತಿವೆ.
ಆದರೆ ನಾರಾಯಣ ದೇವಿ(77)ಯವರ ದೇಹ ಮಾತ್ರ ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಕಂಡುಬಂದಿತ್ತಾದ್ದರಿಂದ ಅವರದ್ದು ಸಹಜ ಸಾವು ಹೌದೋ, ಅಲ್ಲವೋ ಎಂಬ ತನಿಖೆ ನಡೆಯುತ್ತಿದೆ. ಅವರಿಗೆ ಸ್ಟೂಲ್ ಹತ್ತಲು ಸಾಧ್ಯವಾಗದ ಕಾರಣ ಅವರನ್ನು ಮನೆಯ ಸದಸ್ಯರೇ ಒಬ್ಬರು ಕತ್ತು ಹಿಡಿದು ಸಾಯಿಸಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಜೂನ್ 30 - ಜುಲೈ 1ರ ನಡುವೆ ದೆಹಲಿಯ ಬುರಾರಿ ಎಂಬಲ್ಲಿ ಒಂದು ಮನೆಯಲ್ಲಿ ಒಂದೇ ಕುಟುಂಬದ 11 ಜನರ ಶವ ಪತ್ತೆಯಾಗಿತ್ತು. ಇವುಗಳಲ್ಲಿ 10 ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, 1 ಶವ ಮಾತ್ರ ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕುಟುಂಬದ ಹಿರಿಯ ಸದಸ್ಯೆ ನಾರಾಯಣ ದೇವಿ (77), ಆಕೆಯ ಮಗಳು ಪ್ರತಿಭಾ (57), ಮಗ ಭವನೇಶ್ (50), ಲಲಿತ್ ಭಾಟಿಯಾ (45), ಭವನೇಶ್ ಪತ್ನಿ ಸವಿತಾ (48) ಮತ್ತು ಅವರ ಮೂರು ಮಕ್ಕಳು ಮೀನು (23), ನೀತು (25), ಧ್ರುವ್ (15). ಲಲಿತ್ ಭಾಟಿಯಾ ಹೆಂಡತಿ ಟೀನಾ (42), ಅವರ ಮಗ ಶಿವಂ (15), ಪ್ರತಿಭಾ ಮಗಳು ಪ್ರಿಯಾಂಕಾ (33) ಇವರೇ ಮೃತ ದುರ್ದೈವಿಗಳು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications