ಫೆಬ್ರವರಿ 12ರಿಂದ ದೆಹಲಿಯ ಮೊಘಲ್ ಗಾರ್ಡನ್ಗೆ ಸಾರ್ವಜನಿಕರಿಗೆ ಪ್ರವೇಶ
ನವದೆಹಲಿ, ಫೆಬ್ರವರಿ 11: ದೆಹಲಿಯ ಮೊಘಲ್ ಗಾರ್ಡನ್ಗೆ ಫೆಬ್ರವರಿ 12ರಿಂದ ಮಾರ್ಚ್ 16ರವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ರಾಷ್ಟ್ರಪತಿ ಭವನ ನೀಡಿರುವ ಮಾಹಿತಿ ಪ್ರಕಾರ, ಆನ್ಲೈನ್ ಬುಕಿಂಗ್ ಮಾಡುವ ಮೂಲಕ ಜನರು ಮೊಘಲ್ ಗಾರ್ಡನ್ ವೀಕ್ಷಣೆಗೆ ಬರಬಹುದು ಎಂದು ಹೇಳಲಾಗಿದೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಗುರುವಾರ ನವದೆಹಲಿಯಲ್ಲಿ ರಾಷ್ಟ್ರಪತಿ ಭವನದ ವಾರ್ಷಿಕ 'ಉದ್ಯಾನೋತ್ಸವ'ವನ್ನು ಉದ್ಘಾಟಿಸಿದರು. ಮೊಘಲ್ ಗಾರ್ಡನ್ಸ್ ಫೆಬ್ರವರಿ 12, 2022 ರಿಂದ ಮಾರ್ಚ್ 16, 2022 ರವರೆಗೆ (ನಿರ್ವಹಣಾ ದಿನಗಳಾದ ಸೋಮವಾರದಂದು ಹೊರತುಪಡಿಸಿ) ಪ್ರತಿದಿನ 10:00 ಗಂಟೆಯಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಭೇಟಿಯ ಸಂದರ್ಭದಲ್ಲಿ ಕೊರೊನಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ.

ಒಂದೊಂದು ಸ್ಲಾಟ್ನಲ್ಲಿ 100ಜನರಿಗೆ ಮಾತ್ರ ಅವಕಾಶವಿರಲಿದೆ, ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಒಟ್ಟು 7 ಸ್ಲಾಟ್ಗಳು ಲಭ್ಯವಿರಲಿದೆ.
https://rashtrapatisachivalaya.gov.in ಮೂಲಕ ಗಾರ್ಡನ್ ವೀಕ್ಷಣೆಗೆ ಬುಕ್ಕಿಂಗ್ ಮಾಡಬಹುದು. ಹಿಂದಿನ ವರ್ಷದಂತೆ ಈ ವರ್ಷವೂ ಮುನ್ನೆಚ್ಚರಿಕೆ ಕ್ರಮವಾಗಿ ನೇರವಾಗಿ ವಾಕ್-ಇನ್ ಪ್ರವೇಶ ಲಭ್ಯವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ಈ ವರ್ಷದ 'ಉದ್ಯಾನೋತ್ಸವ'ದ ಪ್ರಮುಖ ಆಕರ್ಷಣೆಯೆಂದರೆ 11 ವಿಧದ ಟುಲಿಪ್ಗಳು ಫೆಬ್ರವರಿಯಲ್ಲಿ ಹಂತ ಹಂತವಾಗಿ ಅರಳುವ ನಿರೀಕ್ಷೆಯಿದೆ.
ಮೊಘಲ್ ಗಾರ್ಡನ್ ವೀಕ್ಷಣೆಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ದೈಹಿಕ ಅಂತರ ಕಾಯ್ದುಕೊಳ್ಳಬೇಕು, ಥರ್ಮಲ್ ಸ್ಕ್ರೀನಿಂಗ್ ಮಾಡಿಸಬೇಕು, ಮಾಸ್ಕ್ ಇಲ್ಲದೆ ಸಾರ್ವಜನಿಕರಿಗೆ ಪ್ರವೇಶವಿಲ್ಲ.
ಅಷ್ಟೇ ಅಲ್ಲದೆ ಸ್ಪಿರಿಚುವಲ್ ಗಾರ್ಡನ್, ಹರ್ಬಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್, ಮ್ಯೂಸಿಕಲ್ ಗಾರ್ಡನ್ ಗಳನ್ನು ಕೂಡ ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ಪ್ರವೇಶ ಮಾಡಬಹುದು. ಹಾಗೆಯೇ ಅದೇ ಗೇಟ್ ಮೂಲಕವೇ ಹೊರಗೆ ಹೋಗಲು ಅವಕಾಶ ಮಾಡಿಕೊಡಲಾಗಿದೆ.
ಎಂಟ್ರಿ ಹಾಗೂ ಎಕ್ಸಿಟ್ ಎರಡೂ 35ನೇ ನಂಬರ್ನ ಪ್ರವೇಶದ್ವಾರಲದಲ್ಲಿರಲಿದೆ, ಬರುವವರು ಮೊಬೈಲ್ ತರಬಹುದಾಗಿದೆ. ನೀರಿನ ಬಾಟಲಿ, ಬ್ರೀಫ್ಕೇಸ್, ಬಾಕ್ಸ್ಗಳು, ಛತ್ರಿ, ಕ್ಯಾಮರಾಗಳು, ರೇಡಿಯೋಗಳು, ಕೈಚೀಲಗಳನ್ನು ತರುವಂತಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications