ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ದೇವೇಗೌಡರ ಬೆಂಬಲ
Recommended Video
ನವದೆಹಲಿ, ಜನವರಿ 13: ಕನಕಪುರದ ಕಪಾಲಿ ಬೆಟ್ಟದಲ್ಲಿ ಏಸುವಿನ ಪ್ರತಿಮೆ ನಿರ್ಮಾಣ ಮಾಡಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಪರೋಪಕ್ಷವಾಗಿ ಬೆಂಬಲ ಸೂಚಿಸಿದ್ದಾರೆ.
ಏಸು ಪ್ರತಿಮೆ ನಿರ್ಮಾಣವನ್ನು ವಿರೋಧಿಸುತ್ತಿರುವ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು ಕನಕಪುರದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಲು ಬೆಂಗಳೂರು ಮತ್ತು ಮಂಗಳೂರಿನಿಂದ ಬಂದು ಪ್ರತಿಭಟನೆ ಮಾಡಿದ್ದಾದರೂ ಏಕೆ ಎಂದು ಕೇಳಿದರು.

ಎಲ್ಲಾ ಧರ್ಮದವರಿಗೂ ರಕ್ಷಣೆ ಕೊಡಬೇಕು
ಭಾರತ ಜಾತ್ಯತೀತ ರಾಷ್ಟ್ರವಾಗಿದೆ. ಅಂಬೇಡ್ಕರ್ ಅವರು ಕಾನೂನು ಬರೆದು ಎಲ್ಲಾ ಧರ್ಮಗಳಿಗೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ 5 ಧರ್ಮೀಯರನ್ನು ಸೇರಿಸಿ ಮುಸ್ಲಿಮರನ್ನು ಮಾತ್ರ ಹೊರಗಿಟ್ಟರು. ಬಿಜೆಪಿಯವರು ಈ ಕಾಯ್ದೆಯನ್ನು ರಾಜಕೀಯ ಕಾರಣಕ್ಕೇ ಮಾಡಿರುವುದು.

ಏಸು ಪ್ರತಿಮೆ ನಿರ್ಮಾಣಕ್ಕೆ ಪರೋಕ್ಷ ಬೆಂಬಲ
ಕನಕಪುರದ ಕಪಾಲಿ ಬೆಟ್ಟದಲ್ಲಿ 110 ಅಡಿ ಎತ್ತರದ ಏಸುವಿನ ಏಕಶಿಲಾ ಪ್ರತಿಮೆ ನಿರ್ಮಾಣಕ್ಕೆ ಹೊರಟಿರುವ ಡಿಕೆಶಿ ನಿರ್ಧಾರಕ್ಕೆ ದೇವೇಗೌಡರು ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಟ್ಟದ ಮೇಲೆ ಡಿಕೆ ಶಿವಕುಮಾರ್ ಏಸು ಪ್ರತಿಮೆ ನಿರ್ಮಿಸಲು ತೆಗೆದುಕೊಂಡಿರುವ ನಿರ್ಣಯಕ್ಕೆ ತಮ್ಮ ಅಭ್ಯಂತರ ಇಲ್ಲ ಎಂದು ಮಾಜಿ ಪ್ರಧಾನಿಯವರು ಸ್ಪಷ್ಟಪಡಿಸಿದ್ದಾರೆ.

ಇದು ಕಂದಾಯ ಇಲಾಖೆಗೆ ಸೇರಿದ ವಿಚಾರ
ಇದು ಕಂದಾಯ ಇಲಾಖೆ ಗೆ ಸೇರಿದ ವಿಷಯ,ಒಂದೆಡೆ ಮುನೇಶ್ವರ ಬೆಟ್ಟ ಮತ್ತೊಂದೆಡೆ ಏಸು ಬೆಟ್ಟ ಅನ್ನೋ ವಿವಾದ ಇದೆ ,ವಿವಾದ ಹುಟ್ಟುಹಾಕುವ ಕೆಲಸ ಮೊದಲಿಂದ ನಡೆಯುತ್ತಿದೆ,ಇದು ಡಿಕೆ ಶಿವಕುಮಾರ್ ಗೆ ಗೊತ್ತಿದೆ.ಈಗಾಗಲೇ ಕಂದಾಯ ಸಚಿವರು ಹೇಳಿದ್ದಾರೆ
ಅವರು ಪರಿಶೀಲನೆ ಮಾಡುತ್ತಾರೆ.ನನ್ನ ಆದ್ಯತೆ ಅಲ್ಲಿ ಕಾನೂನು ಸುವ್ಯವ್ಯಸ್ಥತೆ ಕಾಪಾಡುವುದೇ ಆಗಿದೆ ಎಂದು ಗೇಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿ ಬಗ್ಗೆ ಎಲ್ಲರಿಗೂ ಭ್ರಮೆ ಇದೆ
ಬಿಜೆಪಿಯ ಬಗ್ಗೆ ಮಾಧ್ಯಮಗಳಿಗೆ ಭ್ರಮೆ ಇದೆ. ಬಿಜೆಪಿಯವರು 19 ಚರ್ಚ್ಗಳನ್ನು ಒಡೆದರು.
ಬೈಬಲ್ ಅನ್ನು ಸುಟ್ಟುಹಾಕಿದರು. ಇಬ್ಬರು ಮಕ್ಕಳನ್ನೂ ಸುಟ್ಟರು. 10 ಮಂದಿ ದಾದಿಯರನ್ನು ರೇಪ್ ಮಾಡಿದರು. ಆಗ ಯಾರೂ ಕೂಡ ಮಾತನಾಡಲಿಲ್ಲ ಎಂದು ವಿವರಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications