ದೆಹಲಿ ಚುನಾವಣೆ: ಕಾಂಗ್ರೆಸ್ ಬಗ್ಗೆ ದೇವೇಗೌಡ ಭವಿಷ್ಯ
ತುಮಕೂರು, ಜನವರಿ 31: ಇತ್ತೀಚೆಗೆ ಬಿಜೆಪಿ ವಿರುದ್ಧ ಸೂಕ್ಷ್ಮ ವಾಗ್ದಾಳಿಗಳನ್ನೇ ಮಾಡುತ್ತಾ ಬಂದಿದ್ದ ದೇವೇಗೌಡರು ಮಾಜಿ ಮಿತ್ರ ಪಕ್ಷ ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದಿದ್ದಾರೆ.
ನಿನ್ನೆ ತುಮಕೂರಿನಲ್ಲಿ ಮಾತನಾಡಿದ ದೇವೇಗೌಡ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೆಹಲಿ ಚುನಾವಣೆ: ಕೇಜ್ರಿವಾಲ್ ಗೆ ಶುಭ ಸುದ್ದಿ ಕೊಟ್ಟ ಸಮೀಕ್ಷೆ
ತುಮಕೂರಿನ ಜೆಡಿಎಸ್ ನಾಯಕರು ಕಾಂಗ್ರೆಸ್ ಕಡೆ ಹೊರಟಿದ್ದಾರಲ್ಲ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 'ದೇಶದಲ್ಲಿ ಕಾಂಗ್ರೆಸ್ ಯಾವ ಸ್ಥಿತಿಯಲ್ಲಿದೆ ಎಂಬುದು ಗೊತ್ತಿಲ್ಲವೇ?' ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಮುಂದುವರಿದು ಮಾತನಾಡಿದ ದೇವೇಗೌಡರು, 'ನಾನು ದೇಶದ ರಾಜಕೀಯ ನೋಡಿರುವವನು, ಈಗಲ್ಲ, ದೆಹಲಿ ಚುನಾವಣೆ ನಂತರ ಕಾಂಗ್ರೆಸ್ ಬಗ್ಗೆ ಮಾತನಾಡುತ್ತೇನೆ' ಎಂದು ವ್ಯಂಗ್ಯವಾಗಿ ಹೇಳಿದರು. ಆ ಮೂಲಕ ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ದೆಹಲಿ ವಿಧಾನಸಭೆ ಚುನಾವಣೆ; ಹೆಚ್ಚಿದ ಬಿಜೆಪಿ ಶಕ್ತಿ!
ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಮದುವೆ ಕಾರ್ಯಕ್ರಮಗಳಲ್ಲಿ ಪ್ರಸ್ತುತ ಬ್ಯುಸಿಯಾಗಿರುವ ದೇವೇಗೌಡ ಅವರು ದೆಹಲಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.