ಮೇಕೆದಾಟು ಯೋಜನೆಗಾಗಿ ಗಡ್ಕರಿಯನ್ನು ಭೇಟಿ ಮಾಡಿದ ದೇವೇಗೌಡ

Recommended Video

      ಮೇಕೆದಾಟು ಯೋಜನೆ : ನಿತಿನ್ ಗಡ್ಕರಿಯನ್ನು ಭೇಟಿ ಮಾಡಿದ ಹೆಚ್.ಡಿ ದೇವೇಗೌಡ | Oneindia Kannada

      ನವದೆಹಲಿ, ಅ.4: ಮೇಕೆದಾಟು ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರಕ್ಕೆ ಅಗತ್ಯ ಅನುಮತಿ ನೀಡಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭರವಸೆ ನೀಡಿದರು.

      ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರಿಂದ ಈ ಕುರಿತ ಮನವಿ ಸ್ವೀಕರಿಸಿದ ಬಳಿಕ, ಯೋಜನೆ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆ ನಡೆಸುವ ಮೂಲಕ ಅನುಮತಿ ನೀಡುವುದಾಗಿ ನಿತಿನ್ ಗಡ್ಕರಿ ತಿಳಿಸಿದ್ದಾರೆ.

      Devegowda meets Gadkari on Mekedaatu project

      ಕಾವೇರಿ ನದಿ ನೀರಿನ ಸದ್ಬಳಕೆ ಹಾಗೂ ಕುಡಿಯುವ ನೀರು ಪೂರೈಕೆ ಉದ್ದೇಶದಿಂದ ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಲಿರುವ ಈ ಯೋಜನೆಯಿಂದ ತಮಿಳುನಾಡಿನ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗುವುದಿಲ್ಲ. ಕಾವೇರಿ ನದಿ ನೀರು ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಈ ಯೋಜನೆಯಿಂದ ಉಲ್ಲಂಘನೆಯಾಗದು ಎಂದು ದೇವೇಗೌಡ ಅವರು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು .

      Devegowda meets Gadkari on Mekedaatu project

      ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಕಾವೇರಿಯ ಹೆಚ್ಚುವರಿ ನೀರನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಯೋಜನೆ ರೂಪಿಸಿರುವ ಕರ್ನಾಟಕ, ಜಲವಿದ್ಯುತ್‌ ಉತ್ಪಾದನೆ ಹಾಗೂ ಬೆಂಗಳೂರು, ರಾಮನಗರ ಮತ್ತು ಕನಕಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ರೂಪುರೇಷೆ ಸಿದ್ಧಪಡಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+