ಎಚ್ಡಿಕೆ, ಧರಂಗೆ ಚುನಾವಣೆ ವೇಳೆ ಗಣಿಕಂಟಕ
ನವದೆಹಲಿ, ಮಾ.5 : ಲೋಕಸಭೆ ಚುನಾವಣೆ ವೇಳೆಯೇ ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್ ಮತ್ತು ಎಚ್ಡಿ ಕುಮಾರಸ್ವಾಮಿ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ತಮ್ಮ ಅಧಿಕಾರಾವಧಿಯಲ್ಲಿ ಎಸಗಿದ್ದಾರೆ ಎನ್ನಲಾದ ಗಣಿ ಅಕ್ರಮಗಳ ಕುರಿತು ಲೋಕಾಯುಕ್ತ ತನಿಖೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ಸೂಚಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಎಸ್.ಎಂ.ಕೃಷ್ಣ, ಧರಂಸಿಂಗ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಎಸಗಿರುವ ಗಣಿಗಾರಿಕೆ ಅಕ್ರಮಗಳ ತನಿಖೆ ನಡೆಸಬೇಕೆಂದು ಸಲ್ಲಿಸಿದ್ದ ಖಾಸಗಿ ದೂರಿನ ಕುರಿತು ತನಿಖೆ ನಡೆಸುವಂತೆ ರಾಜ್ಯ ಲೋಕಾಯುಕ್ತ ವಿಶೇಷ ನ್ಯಾಯಾಲಯವು, ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು.

ತಮ್ಮ ಮೇಲೆ ಮಾಡಿರುವ ಆರೋಪಗಳ ಕುರಿತು ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಎಂದು ಎಸ್. ಎಂ. ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಎಸ್. ಎಂ. ಕೃಷ್ಣ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ 2012ರ ಜನವರಿ 27ರಂದು ಲೋಕಾಯುಕ್ತ ಪೊಲೀಸರ ವಿಚಾರಣೆಗೆ ತಡೆ ನೀಡಿ ಆದೇಶ ಪ್ರಕಟಿಸಿತ್ತು. [ಮೂವರು ಮಾಜಿ ಸಿಎಂಗಳಿಗೆ ಗಣಿ ಸಂಕಷ್ಟ]
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕುಮಾರಸ್ವಾಮಿ ಮತ್ತು ಧರಂಸಿಂಗ್ ವಿರುದ್ಧದ ತನಿಖೆಗೆ ಒಪ್ಪಿಗೆ ನೀಡಿದೆ. ಇವರು ಮಾತ್ರವಲ್ಲೇ ಗಣಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ 11 ಅಧಿಕಾರಿಗಳ ವಿರುದ್ಧವೂ ತನಿಖೆ ಮುಂದುವರೆಸ ಬಹುದು ಎಂದು ಸ್ಪಷ್ಟ ಪಡಿಸಿದೆ. [ಮಾಜಿ ಸಿಎಂಗಳ ವಿರುದ್ಧ ತನಿಖೆ ನಡೆಸಲು ಅಸ್ತು ಎಂದ ಕೋರ್ಟ್]
ತನ್ನ ಅದೇಶದಲ್ಲಿ ಕೋರ್ಟ್ ಲೋಕಾಯುಕ್ತ ತನಿಖೆ ಕುರಿತಂತೆ ಹಿಂದೆ ನೀಡಿರುವ ತಡೆಯಾಜ್ಞೆಯು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮೇಲಿನ ಅಪಾದನೆಗಳಿಗೆ ಮಾತ್ರ ಸೀಮಿತವಾಗಿದ್ದು, ಧರಂಸಿಂಗ್, ಕುಮಾರಸ್ವಾಮಿ ಇತರ ಅಧಿಕಾರಿಗಳ ವಿರುದ್ಧದ ತನಿಖೆಗೆ ಇದು ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.
ಅಧಿಕಾರಿಗಳ ವಿರುದ್ಧವೂ ತನಿಖೆ : ಇಬ್ಬರು ಮಾಜಿ ಸಿಎಂಗಳ ಜೊತೆಗೆ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿರುವ 11 ಮಂದಿ ಅಧಿಕಾರಿಗಳು ತನಿಖೆ ಎದುರಿಸಬೇಕು ಅಧಿಕಾರಿಗಳಾದ ಡಾ.ಎಂ.ಬಸಪ್ಪರೆಡ್ಡಿ, ಗಂಗಾರಾಮ್ ಬಡೇರಿಯ, ಡಾ.ವಿ.ಉಮೇಶ್ ಐ.ಆರ್.ಪೆರುಮಾಳ್, ಕೆ.ಎಸ್.ಮಂಜುನಾಥ್, ಡಿ.ಎಸ್.ಅಶ್ವಥ್, ಜೀಜಾ ಹರಿಸಿಂಗ್, ಮಹೇಂದ್ರ ಜೈನ್, ಶಂಕರಲಿಂಗಯ್ಯ, ಕೆ.ಶ್ರೀನಿವಾಸ್ ಹಾಗೂ ಎಂ.ರಾಮಪ್ಪ ಅವರಿಗೆ ತನಿಖೆಯ ಬಿಸಿ ತಟ್ಟಲಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications