ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಹಪ್ಪಳ ತಿಂದು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆಯೇ?: ಸಂಜಯ್

|
Google Oneindia Kannada News

ಮುಂಬೈ, ಸೆಪ್ಟೆಂಬರ್ 17: ಮಹಾರಾಷ್ಟ್ರದ ಜನರು ಹಪ್ಪಳ ತಿಂದು ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆಯೇ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ವ್ಯಂಗ್ಯವಾಡಿದ್ದಾರೆ.

ದೇಶದಲ್ಲಿ ದಾಖಲಾಗುತ್ತಿರುವ ಬಹುತೇಕ ಸೋಂಕಿತ ಪ್ರಕರಣಗಳು ಮಹಾರಾಷ್ಟ್ರದಲ್ಲಿಯೇ ವರದಿಯಾಗುತ್ತಿದೆ ಎಂದು ಬಿಜೆಪಿ ನಾಯಕರು ನೀಡಿದ್ದ ಹೇಳಿಕೆಗೆ ಸಂಸತ್‌ನಲ್ಲಿ ರಾವತ್ ಉತ್ತರಿಸಿದ್ದಾರೆ.

ಹಪ್ಪಳದಿಂದ ಕೊರೊನಾ ನಿಯಂತ್ರಣ: ಕೇಂದ್ರ ಸಚಿವ ಅರ್ಜುನ್ಹಪ್ಪಳದಿಂದ ಕೊರೊನಾ ನಿಯಂತ್ರಣ: ಕೇಂದ್ರ ಸಚಿವ ಅರ್ಜುನ್

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಕುರಿತು ಕೆಲ ನಾಯಕರು ಮಾತನಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಚೇತರಿಸಿಕೊಂಡವರ ಸಂಖ್ಯೆಯೂ ಅಧಿಕವಿದೆ ಎಂದು ಬಿಜೆಪಿ ನಾಯಕರ ಕಾಲೆಳೆದರು.

Did People Recover By Eating Bhabhi Ji Ke Papad Sanjay Raut

ಇದೇ ವೇಳೆ ಪಾಪಡ್ ಪದವನ್ನು ಬಳಸುವ ಮೂಲಕ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘಾವಲ್ ಹೇಳಿಕೆಯನ್ನು ರಾವತ್ ನೆನಪಿಸಿದರು. ಪಾಪಡ್(ಹಪ್ಪಳ) ಸೇವನೆಯಿಂದ ದೇಹದಲ್ಲಿ ರೋಗ ನಿರೋಧ ಶಕ್ತಿ ಹೆಚ್ಚುತ್ತದೆ ಎಂದು ಮೇಘಾವಲ್ ಹೇಳಿಕೆ ನೀಡಿದ್ದರು. ಸ್ವಲ್ಪ ಸಮಯದ ಬಳಿಕ ಅವರಿಗೇ ಕೊರೋನ ಸೋಂಕು ತಗಲಿತ್ತು.

'ವಿಶ್ವ ಆರೋಗ್ಯ ಸಂಸ್ಥೆ ಕೊಳೆಗೇರಿ ಧಾರಾವಿಯಲ್ಲಿ ಕೊರೊನವನ್ನು ನಿಯಂತ್ರಿಸಿರುವ ಬೃಹನ್ಮುಂಬಯಿ ಮಹಾನಗರ ಪಾಲಿಕೆಯ(ಬಿಎಂಸಿ) ಪ್ರಯತ್ನವನ್ನು ಶ್ಲಾಘಿಸಿದೆ.

Recommended Video

Worlds Longest Tunnel - Atal Tunnel ಇದೆ ನೋಡಿ ಜಗತ್ತಿನ ಅತಿ ಉದ್ದದ ಸುರಂಗ ಮಾರ್ಗ | Oneindia Kannada

ನನ್ನ ತಾಯಿ ಹಾಗೂ ಸಹೋದರನಿಗೂ ಕೊವಿಡ್-19 ರೋಗ ತಗಲಿತ್ತು. ಮಹಾರಾಷ್ಟ್ರದ ಹಲವು ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಇಂದು ಧಾರಾವಿಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.

English summary
The fight against coronavirus was not a political fight but a fight to save the lives of people, Shiv Sena leader Sanjay Raut said in parliament as he defended the Maharashtra government's efforts to contain the pandemic which has affected over 10 lakh people in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X