ಕಾಂಗ್ರೆಸ್ ವಕ್ತಾರರಾಗಿ ದಿನೇಶ್, ಖುಷ್ಬೂ ನೇಮಕ
ನವದೆಹಲಿ, ಮಾ.26:ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೈಗೆ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ನೀಡಲು ಏಪ್ರಿಲ್ ತಿಂಗಳಲ್ಲಿ ಸಿಗಲಿದೆ ಎಂಬ ಸುದ್ದಿಯಿದೆ. ಇದಕ್ಕೂ ಮೊದಲು ಸುಮಾರು 17ಕ್ಕೂ ಅಧಿಕ ವಕ್ತಾರರು ಸೇರಿದಂತೆ ಕಾಂಗ್ರೆಸ್ ನ ಪದಾಧಿಕಾರಿಗಳ ಸ್ಥಾನ ಪಲ್ಲಟವಾಗಿದೆ. ಪ್ರಮುಖವಾಗಿ ಕರ್ನಾಟಕದ ಸಚಿವ ದಿನೇಶ್ ಗುಂಡೂರಾವ್, ತಮಿಳುನಾಡಿನ ನಟಿ ಖುಷ್ಬೂ ಅವರು ವಕ್ತಾರರ ಸ್ಥಾನಕ್ಕೇರಿರುವುದು ಹಲವರ ಹುಬ್ಬೇರಿಸಿದೆ.
ಕಾಂಗ್ರೆಸ್ ತನ್ನ ವಕ್ತಾರ ಪಟ್ಟಿಯನ್ನು ಪುನರ್ ರಚಿಸಿದೆ. ಅಜಯ್ ಮಾಕೇನ್, ಸಿಪಿ ಜೋಶಿ ಹಾಗೂ ಸತ್ಯವ್ರತ್ ಚತುರ್ವೇದಿ ಅವರು ಮುಖ್ಯ ವಕ್ತಾರರಾಗಿ ನೇಮಕಗೊಂಡಿದ್ದಾರೆ. ಆನಂದ್ ಶರ್ಮಾ, ಗುಲಾಂ ನಬಿ ಆಜಾದ್, ಮುಕುಲ್ ವಾಸ್ನಿಕ್, ಪಿ.ಚಿದಂಬರಂ ಹಿರಿಯ ವಕ್ತಾರರಾಗಿ ಮುಂದುವರೆಯಲಿದ್ದಾರೆ.

17 ಮಂದಿ ವಕ್ತಾರರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದ್ದು, ವಕ್ತಾರರ ಪಟ್ಟಿಯಲ್ಲಿ ದಿನೇಶ್ ಗುಂಡೂರಾವ್, ನಟಿ ಖುಷ್ಬೂ ಹೊಸ ಸೇರ್ಪಡೆ. ಪಟ್ಟಿಯಲ್ಲಿ ವಕ್ತಾರರ ಸಂಖ್ಯೆ 36ಕ್ಕೇರಿದೆ. ಮನೀಶ್ ತಿವಾರಿ ಹೆಸರು ಎಲ್ಲೂ ಕಂಡು ಬಂದಿಲ್ಲದಿರುವುದು ಅಚ್ಚರಿಯ ಸಂಗತಿಯಾಗಿದೆ.[ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿಗೆ ಪಟ್ಟಾಭಿಷೇಕ]

31 ಮಂದಿ ಟೀವಿ ಪ್ಯಾನೆಲಿಸ್ಟ್ರನ್ನೂ ಹೆಸರಿಸಲಾಗಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುತ್ರಿ ಶರ್ಮಿಷ್ಠ ಮುಖರ್ಜಿ ಅವರ ಜೊತೆ ಮನೀಶ್ ತಿವಾರಿ, ಸುಶೀಲ್ ಕುಮಾರ್ ಶಿಂಧೆ ಪುತ್ರಿ ಪ್ರಣಿತಿ ಶಿಂಧೆ ಕಾಣಿಸಿಕೊಳ್ಳಲಿದ್ದಾರೆ.
ಮಾಧ್ಯಮ ವಿಭಾಗದಲ್ಲಿ ರಾಜೀಶ್ ಶುಕ್ಲಾ, ಜಮ್ಮು ಮತ್ತು ಕಾಶ್ಮೀರ ಪಿಸಿಸಿ ಮುಖ್ಯಸ್ಥ ಸೈಫುದ್ದೀನ್ ಸೋಜ್ ಪುತ್ರ ಸಲ್ಮಾನ್ ಸೋಜ್, ಕೇಂದ್ರ ಮಾಜಿ ಸಚಿವ ವಿಲಾಸ್ ರಾವ್ ದೇಶ್ ಮುಖ್ ಪುತ್ರ ಅಮಿತ್ ದೇಶ್ ಮುಖ್, ಮಾಜಿ ಉಪಾಧ್ಯಕ್ಷ ಕೃಷ್ಣಕಾಂತ್ ಪುತ್ರ ರಶ್ಮಿ ಕಾಂತ್, ಮಹಾರಾಷ್ಟ್ರ ವಕ್ತಾರ ಅನಂತ್ ಗಾಡ್ಗೀಳ್ ಪ್ರಮುಖರಾಗಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications