ಸುಷ್ಮಾ ಸ್ವರಾಜ್ ನಿಧನಕ್ಕೆ ವಿಶ್ವಸಂಸ್ಥೆಯ 51 ದೇಶಗಳಿಂದ ಸಂತಾಪ
ನವದೆಹಲಿ, ಆಗಸ್ಟ್ 10: ಮಂಗಳವಾರ ನಿಧನರಾದ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲುವಿಕೆಗೆ 51 ದೇಶಗಳ ರಾಜತಾಂತ್ರಿಕರು ಪ್ರತ್ಯೇಕ ಶೋಕ ಸಂದೇಶವನ್ನು ನೀಡಿವೆ.
ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಯೋಜನೆ ವಿಭಾಗದ ಪುಸ್ತಕದಲ್ಲಿ ವಿವಿಧ ದೇಶಗಳ ರಾಜತಾಂತ್ರಿಕರು ತಮ್ಮ ಸಂದೇಶಗಳನ್ನು ಬರೆದಿದ್ದಾರೆ.
'ಮೇಡಂ ಸುಷ್ಮಾ ಸ್ವರಾಜ್ ಅವರ ದುಃಖದಾಯಕ ನಿಧನಕ್ಕೆ ಜಗತ್ತಿನೆಲ್ಲಡೆಯ ದೇಶಗಳ ರಾಜತಾಂತ್ರಿಕರು ತಮ್ಮ ಸಂತಾಪವನ್ನು ಹಂಚಿಕೊಂಡಿದ್ದಾರೆ. ರಾಜತಾಂತ್ರಿಕತೆಯಲ್ಲಿ ಪದಗಳು ಮುಖ್ಯವಾಗುತ್ತದೆ' ಎಂದು ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿ ಮತ್ತು ರಾಯಭಾರಿ ಸಯ್ಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ.

ಸುಷ್ಮಾ ಸ್ವರಾಜ್ ಮತ್ತು ಅವರ ಕುಟುಂಬಕ್ಕೆ 51 ದೇಶಗಳ ರಾಯಭಾರಿಗಳು ಸಂದೇಶ ಬರೆಯುವ 2.20 ನಿಮಿಷಗಳ ವಿಡಿಯೋವನ್ನು ಕೂಡ ಅವರು ಹಂಚಿಕೊಂಡಿದ್ದಾರೆ.
In diplomacy, words matter...
— Syed Akbaruddin (@AkbaruddinIndia) August 10, 2019
Diplomats from all across the world visit @IndiaUNNewYork to record condolences on the sad demise of Madam @SushmaSwaraj
🙏🏽 pic.twitter.com/f2NxWxHiGg
ರಷ್ಯಾ, ಜರ್ಮನಿ, ಕೆನಡಾ, ಆಸ್ಟ್ರೇಲಿಯಾ, ಇಟಲಿ, ಸ್ವಿಟ್ಜರ್ಲೆಂಡ್, ಅರ್ಜೆಂಟೀನಾ, ಬಾಂಗ್ಲಾದೇಶ, ಭೂತಾನ್, ನ್ಯೂಜಿಲ್ಯಾಂಡ್, ದಕ್ಷಿಣ ಕೊರಿಯಾ, ಬ್ರೆಜಿಲ್, ಸಿಂಗಪುರ, ಶ್ರೀಲಂಕಾ, ಮಯನ್ಮಾರ್, ಅಫ್ಘಾನಿಸ್ತಾನ್, ಮಾಲ್ಡೀವ್ಸ್, ಮಲೇಷ್ಯಾ ಸೇರಿದಂತೆ ವಿವಿಧ ದೇಶಗಳ ರಾಜತಾಂತ್ರಿಕರು ಸುಷ್ಮಾ ಅವರ ಒಡನಾಟವನ್ನು ನೆನಪಿಸಿಕೊಂಡು ದುಃಖ ಹಂಚಿಕೊಂಡಿದ್ದಾರೆ.
ಶುಕ್ರವಾರ ನಡೆದ ಸುಷ್ಮಾ ಸ್ವರಾಜ್ ಅವರ ಧಾರ್ಮಿಕ ಕ್ರಿಯಾ ವಿಧಿ ಸಂದರ್ಭದಲ್ಲಿ ಭಾಗವಹಿಸಿದ್ದ ಗಣ್ಯರು ಭಾವುಕರಾದರು. ಅವರ ಮಗಳು ಬಾನ್ಸುರಿ ಸ್ವರಾಜ್, ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಕಣ್ಣೀರಿಟ್ಟರು. ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮಗಳು ನಮಿತಾ ಭಟ್ಟಾಚಾರ್ಯ, ಬಾಲಿವುಡ್ ನಟಿ ಶಬಾನಾ ಅಜ್ಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications