ಎಣ್ಣೆ ಖರೀದಿಸಿ ಮಹಿಳೆಯರ ಬಗ್ಗೆ ಆರ್ ಜಿವಿ ಲೇವಡಿ: ಸೋನಾ ಮಹೋಪಾತ್ರ ಸಿಡಿಮಿಡಿ
ನವದೆಹಲಿ, ಮೇ.04: ಭಾರತ ಲಾಕ್ ಡೌನ್ ನಡುವೆಯೂ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದೇ ತಡ ಸೋಮವಾರ ಮದ್ಯದ ಅಂಗಡಿಗಳ ಎದುರು ಜನಸಾಗರವೋ ಜನಸಾಗರ. ಪುರುಷರಷ್ಟೇ ಅಲ್ಲದೇ ಮಹಿಳೆಯರೂ ಕೂಡಾ ಎಣ್ಣೆ ಅಂಗಡಿ ಎದುರು ಸಾಲುಗಟ್ಟಿ ನಿಂತಿದ್ದು ಇದೀಗ ತೀವ್ರ ಚರ್ಚೆ ಆಗುತ್ತಿದೆ.
ಬಾಲಿವುಡ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಬೆಂಗಳೂರಿನಲ್ಲಿರುವ ಒಂದು ಮದ್ಯದ ಅಂಗಡಿಯ ಎದುರು ಸಾಲುಗಟ್ಟಿ ನಿಂತ ಮಹಿಳೆಯರ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ವೈನ್ ಶಾಪ್ ಎದುರಿನಲ್ಲಿ ಯಾರು ಸಾಲುಗಟ್ಟಿ ನಿಂತಿದ್ದಾರೆ ಎಂದು ನೋಡಿ, ಕುಡಿದ ಪುರುಷರಿಂದ ಇವರನ್ನು ರಕ್ಷಿಸಬೇಕಿದೆ ಎಂದು ಲೇವಡಿ ಮಾಡಿದ್ದಾರೆ. ಇದಕ್ಕೆ ಗಾಯಕಿ ಸೋನಾ ಮೊಹಾಪಾತ್ರ ಟ್ವಿಟ್ಟರ್ ನಲ್ಲಿಯೇ ತಿರುಗೇಟು ಕೊಟ್ಟಿದ್ದಾರೆ.
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣ ಸೋಮವಾರದ ಅಂಕಿ-ಅಂಶಗಳ ಪ್ರಕಾರ 42,836 ಮಂದಿಗೆ ಸೋಂಕು ತಗಲಿದ್ದು, ಇದುವರೆಗೂ ದೇಶದಲ್ಲಿ 1,389 ಮಂದಿ ಕೊರೊನಾಗೆ ಪ್ರಾಣ ಬಿಟ್ಟಿದ್ದಾರೆ. ಇನ್ನು, 11,762 ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೇಂದ್ರದ ನಿರ್ಧಾರವನ್ನು ಟೀಕಿಸಿದ ಬಾಲಿವುಡ್:
ದೇಶದಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಇಂಥ ಸಂದರ್ಭದಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದ ಕೇಂದ್ರ ಸರ್ಕಾರದ ವಿರುದ್ಧ ಬಾಲಿವುಡ್ ಗಣ್ಯರು ನೇರವಾಗಿ ದಾಳಿ ನಡೆಸಿದ್ದರು.
Dear Mr RGV,time for u to get into the line of people who desperately need a real education.1 that lets u understand why this tweet of yours reeks of sexism & misplaced morality.Women have a right to buy & consume alcohol just like men. No one has a right to be drunk & violent. https://t.co/5AUcTrAJrZ
— ShutUpSona (@sonamohapatra) May 4, 2020

ಇದೀಗ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಹಿಳೆಯರೇ ಹೆಚ್ಚಾಗಿ ವೈನ್ ಶಾಪ್ ಗಳ ಎದುರು ಕ್ಯೂನಲ್ಲಿ ನಿಂತಿದ್ದಾರೆ ಎಂದು ಬಿಂಬಿಸುವ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಬಾಲಿವುಡ್ ಗಾಯಕಿ ಸೋನಾ ಮೊಹಾಪಾತ್ರ ತಿರುಗೇಟು ಕೊಟ್ಟಿದ್ದಾರೆ.
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಲಿಂಗ ಸಮಾನತೆಯನ್ನೇ ಮರತಿದ್ದಾರೆ. ಮಹಿಳೆಯರಿಗೂ ಕೂಡಾ ಮದ್ಯವನ್ನು ಖರೀದಿಸುವ ಹಾಗೂ ಮದ್ಯಪಾನ ಮಾಡುವ ಎಲ್ಲ ಹಕ್ಕು ಬಾಧ್ಯತೆಗಳಿವೆ ಎಂದು ಪ್ರತಿಟ್ವೀಟ್ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications