ಭ್ರಷ್ಟಾಚಾರ ತಡೆಯತ್ತ NDA ನಡೆ.. ಟ್ವಿಟ್ಟರ್ ನಲ್ಲಿ ಏಕಾಏಕಿ ಟ್ರೆಂಡಿಂಗ್!
Recommended Video

ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಭಾರತಕ್ಕೆ ಗಡಿಪಾರು ಮಾಡಿರುವುದನ್ನು ಸ್ವಾಗತಿಸಿರುವ ಬಿಜೆಪಿ ನಾಯಕರು, ಇದು ಭ್ರಷ್ಟಾಚಾರದ ವಿರುದ್ಧ ಸರ್ಕಾರದ ಸಮರ ಎಂದಿದ್ದಾರೆ. ಕೇವಲ ಇದಷ್ಟೇ ಅಲ್ಲದೆ, ಮೋದಿ ಸರ್ಕಾರ ಇದುವರೆಗೂ ಭ್ರಷ್ಟಾಚಾರ ನಿರ್ಮೂಲನೆಗೆ ಯಾವೆಲ್ಲ ಕ್ರಮ ಕೈಗೊಂಡಿದೆಯೋ ಅವೆಲ್ಲವನ್ನೂ ನೆನಪಿಸಿಕೊಂಡು ಬಿಜೆಪಿನಾಯಕರು ಟ್ವೀಟ್ ಮಾಡುತ್ತಿದ್ದಾರೆ.
ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ ಪ್ರಮುಖ ಆರೋಪಿ, ಉದ್ಯಮಿ ರಾಜೀವ್ ಸಕ್ಸೇನಾ ಮತ್ತು ಕಾರ್ಪೊರೇಟ್ ವಿಮಾನಯಾನ ಲಾಬಿಗಾರ ದೀಪಕ್ ತಲ್ವಾರ್ ಅವರನ್ನು ಭಾರತಕ್ಕೆ ಗಡಿಪಾರು ಮಾಡಲಾಗಿದೆ. ವಿಚಾರಣೆಗಾಗಿ ಈಗಾಗಲೇ ಸಕ್ಸೇನಾ ವಿಚಾರಣೆಗಾಗಿ ಪಟಿಯಾಲಾ ಹೌಸ್ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಐಷಾರಾಮಿ ಹೆಲಿಕಾಪ್ಟರ್ ಖರೀದಿಯ 3,600 ಕೋಟಿ ರೂಪಾಯಿ ಹಗರಣದ ತನಿಖೆಗೆ ಎನ್ ಡಿಎ ಸರ್ಕಾರ ಮುಂದಾಗಿದೆ. ಲೋಕಸಭಾ ಚುನಾವಣೆಯ ಹೊತ್ತಲ್ಲಿ ಈ ಹಗರಣ ಮತ್ತೆ ಜೀವ ತಳೆದಿದ್ದು, ಯುಪಿಎ ಗೆ ನುಂಗಲಾರದ ತುತ್ತಾಗಿದೆ. ಆರೋಪಿಗಳ ಗಡಿಪಾರಿನ ಬಗ್ಗೆ ಟ್ವಿಟ್ಟರ್ ನಲ್ಲೂ ಸಾಕಷ್ಟು ಚರ್ಚೆ ನಡೆಯುತ್ತಿದೆ. ಮೋದಿ ಸರ್ಕಾರ ಭ್ರಷ್ಟಾಚಾರ ವಿರುದ್ಧ ಮಾಡುತ್ತಿರುವ ಯುದ್ದವನ್ನು #DisruptionOfCorruption ಹ್ಯಾಶ್ ಟ್ಯಾಗ್ ಮೂಲಕ ಬಿಜೆಪಿ ನಾಯಕರು ಟ್ವೀಟ್ ಮಾಡುತ್ತಿದ್ದು, ಅದೀಗ ಟ್ರೆಂಡಿಂಗ್ ಆಗಿದೆ. ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಾದವೂ ಇದರೊಟ್ಟಿಗೆ ಸೇರಿ ಕಾಂಗ್ರೆಸ್ ಅನ್ನು ಹಳಿಯಲು ಬಿಜೆಪಿಗೆ ಹೊಸ ಹ್ಯಾಶ್ ಟ್ಯಾಗ್ ದೊರೆತಂತಾಗಿದೆ.
| Array |
ನಿಮ್ಮ ಸರ್ಕಾರದ ಭ್ರಷ್ಟರನ್ನು ಹಿಡಿದ ಚೌಕಿದಾರ!
ರಾಹುಲ್ ಗಾಂಧಿ ಅವರೇ, ನಿಮ್ಮ ಸರ್ಕಾರದ ಭ್ರಷ್ಟರನ್ನು ಹಿಡಿದ 'ಚೌಕಿದಾರ'ನನ್ನು ಅಭಿನಂದಿಸುವುದಿಲ್ಲವೇ? ನೀವು #DisruptionOfCorruption ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವೀಟ್ ಮಾಡುತ್ತಿಲ್ಲವಲ್ಲ ಏಕೆ? ನಿಮ್ಮ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮಾಡಿ ಅಡಗಿಕೊಂಡಿರುವವರನ್ನು ಮೋದಿ ಸರ್ಕಾರ ವಾಪಸ್ ಕರೆದುಕೊಂದು ಬರುತ್ತಿದೆ. ಇದರಿಂದ ನಿಮಗೆ ಸಂತಸವಾಗುತ್ತಿಲ್ಲವೇ? ಅಷ್ಟಕ್ಕೂ, ಜೋಶ್ ಹೇಗಿದೆ ರಾಹುಲ್? ಎಂದು ಬಿಜೆಪಿ ಕರ್ನಾಟಕದಿಂದ ಟ್ವೀಟ್ ಮಾಡಲಾಗಿದೆ!
| Array |
ಜಿಎಸ್ಟಿ ಯಿಂದ ಪಾರದರ್ಶಕತೆ
ಜಿಎಸ್ಟಿಯ ಪಾರದರ್ಶಕ ಆನ್ ಲೈನ್ ಪ್ರಕ್ರಿಯೆಯಿಂದ ಭ್ರಷ್ಟಾಚಾರವನ್ನು ತಡೆಯುವುದಕ್ಕೆ ಸಾಧ್ಯವಾಗಿದೆ. ಜಿಎಸ್ಟಿ ಜಾರಿಯಾದ ಒಂದು ವರ್ಷದಲ್ಲಿ 48 ಲಕ್ಷ ಉದ್ದಿಮೆಗಳು ತೆರಿಗೆದಾರರ ಪಟ್ಟಿ ಸೇರಿವೆ. 1947-2017 ರ ಅವಧಿಯಲ್ಲಿ ಕೇವಲ 66 ಲಕ್ಷ ಉದ್ದಿಮೆಗಳು ತೆರಿಗೆ ಈ ಪಟ್ಟಿಯಲ್ಲಿದ್ದವು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
|
ಒಂದೂ ಭ್ರಷ್ಟಾಚಾರದ ಆರೋಪವಿಲ್ಲ!
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಮೇಲೆ ಇದುವರೆಗೂ ಒಂದೇ ಒಂದೂ ಭ್ರಷ್ಟಾಚಾರ ಆರೋಪಗಳಿಲ್ಲ. ಈಗಾಗಲೇ ದೇಶಭ್ರಷ್ಟ ಆರ್ಥಿಕ ಆರೋಪಿಗಳ ಮೇಲೆ ಕಾನೂನು ಕ್ರಮಗಳನ್ನು ಬಿಜೆಪಿ ತೆಗೆದುಕೊಂಡಿದೆ. ಈ ಪ್ರಕರಣಗಳನು ಜಾಗತಿಕ ವೇದಿಕೆಯಲ್ಲಿ ಬಗೆಹರಿಸುತ್ತಿದೆ. ಭ್ರಷ್ಟರನ್ನು ಶಿಕ್ಷಿಸುವುದರತ್ತಲೇ ಗಮನ ಹರಿಸುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.
|
ಪಾರದರ್ಶಕ ಆಡಳಿತ, ಹೊಸ ಭಾರತ
ಹೊಸ ಭಾರತಕ್ಕಾಗಿ ಶುದ್ಧ ಮತ್ತು ಪಾರದರ್ಶಕ ಆಡಳಿತ ವ್ಯವಸ್ಥೆ! ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಭ್ರಷ್ಟಾಚಾರದ ಎಲ್ಲಾ ಆಯಾಮಗಳನ್ನೂ ನಾಶ ಮಾಡುವ ಮೂಲಕ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಸಲು ಸಾಕಷ್ಟು ಯತ್ನ ಮಾಡುತ್ತಿದೆ ಎಂದು ಮಲ್ಲೇಶ್ವ ಶಾಸಕ ಡಾ.ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದಾರೆ.
|
ಇಂಥ ಕ್ರಾಂತಿಕಾರಿ ಹಾದಿಯ ಯಾವ ಸರ್ಕಾರವೂ ತುಳಿದಿಲ್ಲ!
ಭ್ರಷ್ಟಾಚಾರವನ್ನು ತಡೆಯಲು ಅಪನಗದೀಕರಣದಂಥ ಕ್ರಾಂತಿಕಾರಿ ನಿರ್ಧಾರಗಳನ್ನು ಮೋದಿ ಸರ್ಕಾರವನ್ನು ಬಿಟ್ಟು ಬೇರಾವ ಸರ್ಕಾರವೂ ತೆಗೆದುಕೊಂಡಿಲ್ಲ. ಇದು ಕಪ್ಪು ಹಣ ಹೊರಬರುವುದಕ್ಕೆ, ಅನುಮಾನಾಸ್ಪದ ಠೇವಣಿಗಳ ಮೇಲೆ ನಿಗಾ ಇಡುವುದಕ್ಕೆ, ಲೆಕ್ಕಕ್ಕೆ ಸಕ್ಕದ ಆದಾಯಗಳು ಹೊರಬರುವುದಕ್ಕೆ ಸಹಾಯವಾಯಿತು ಎಂದು ಬಿಜೆಪಿ ಟ್ವೀಟ್ ಮಾಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications