ಜಾಮೀನು ನಿರೀಕ್ಷೆಯಲ್ಲಿದ್ದ ಡಿ.ಕೆ.ಶಿವಕಮಾರ್ ಗೆ ಭಾರಿ ನಿರಾಸೆ
ನವದೆಹಲಿ, ಸೆಪ್ಟೆಂಬರ್ 19: ಜಾಮೀನಿನ ನಿರೀಕ್ಷೆಯಲ್ಲಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ನಿರಾಸೆಯಾಗಿದೆ. ಇಂದೂ ಸಹ ಅವರಿಗೆ ಜಾಮೀನು ಸಿಗಲಿಲ್ಲ.
ಇ.ಡಿಯಿಂದ ಮತ್ತೊಂದು ಬಾಂಬ್: ಡಿಕೆ ಶಿವಕುಮಾರ್ ಮಾವನಿಗೆ ಸಮನ್ಸ್
ಜಾರಿ ನಿರ್ದೇಶನಾಲಯ (ಇಡಿ) ಯಿಂದ ಸೆಪ್ಟೆಂಬರ್ ಮೂರರಂದು ಬಂಧನಕ್ಕೆ ಒಳಗಾಗಿದ್ದ ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಅವತ್ತು ಜಾರ್ಜ್; ಇವತ್ತು ಡಿಕೆ: ತಿಹಾರ್ ಜೈಲಿಗೆ ಕಾಲಿಟ್ಟ ಎರಡನೇ ಕನ್ನಡಿಗ
ಬುಧವಾರ ಈ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಇಡಿ ಪರ ವಕೀಲರು ಬರದ ಕಾರಣ ಗುರುವಾರಕ್ಕೆ ವಿಚಾರಣೆ ಮುಂದೂಡಿತ್ತು. ಗುರುವಾರ ವಿಚಾರಣೆ ನಡೆಸಲಾಗಿ, ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ.
ನ್ಯಾಯಾಂಗ ಬಂಧನದ ಮೊದಲ ದಿನ ಆಸ್ಪತ್ರೆಯಲ್ಲಿ ಕಳೆದಿದ್ದ ಡಿ.ಕೆ.ಶಿವಕುಮಾರ್ ಎರಡನೇಯ ದಿನ ತಿಹಾರ್ ಜೈಲಿಗೆ ಸ್ಥಳಾಂತರಗೊಂಡಿದ್ದು, ನ್ಯಾಯಾಮಯದ ಆದೇಶ ತಡವಾಗಿದ್ದರಿಂದ ಶನಿವಾರದ ವರೆಗೆ ತಿಹಾರ್ ಜೈಲಿನಲ್ಲಿಯೇ ಕಳೆಯಬೇಕಾಗಿದೆ.
ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಆಸ್ತಿ ಜಪ್ತಿ?
ಡಿ.ಕೆ.ಶಿವಕುಮಾರ್ ಅವರನ್ನು ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದೆ. ಸತತ 14 ದಿನಗಳವರೆಗೆ ಇಡಿ ವಶದಲ್ಲಿದ್ದ ಡಿ.ಕೆ.ಶಿವಕುಮಾರ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.