ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ.ಶಿವಕುಮಾರ್ ಪ್ರಕರಣ: ಜಾಮೀನು ವಿಚಾರಣೆ ಆರಂಭ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 18: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ಇಂದು ವಿಚಾರಣೆ ನಡೆಯಲಿದೆ.

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಸೆಪ್ಟೆಂಬರ್ 03 ರಂದು ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು, ಅಂದಿನಿಂದ ಸತತ 14 ದಿನ ಡಿ.ಕೆ.ಶಿವಕುಮಾರ್ ಅವರು ಇಡಿ ವಶದಲ್ಲಿದ್ದರು. ನಿನ್ನೆ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ನ್ಯಾಯಾಂಗ ಭಂಧನಕ್ಕೆ ವಿಧಿಸಿದ್ದರು.

ಆದರೆ ಡಿ.ಕೆ.ಶಿವಕುಮಾರ್ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರನ್ನು ಆಸ್ಪತ್ರೆಯಲ್ಲಿಯೇ ಇರಿಸಲಾಗಿತ್ತು. ಇಂದು ಜಾಮೀನು ಅರ್ಜಿ ವಿಚಾರಣೆ ಇದ್ದು, ಜಾಮೀನು ಸಿಗುತ್ತದೆಯೋ ಇಲ್ಲವೊ, ಇಂದು ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆಯೋ ನಿರ್ಣಯವಾಗಲಿದೆ.

DK Shivakumar Bail Application Inquiry Started In Delhi

ಕೆಲವೇ ಕ್ಷಣಗಳಲ್ಲಿ ನವದೆಹಲಿಯ ರೋಸ್ ಅವೆನ್ಯೂ ನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಡಿ.ಕೆ.ಶಿವಕುಮಾರ್ ಪರ ಅಭಿಷೇಕ್ ಮನು ಸಿಂಘ್ವಿ ವಾದಿಸುತ್ತಿದ್ದಾರೆ. ಇಡಿ ಪರ ನಟರಾಜ್ ವಾದ ಮಂಡಿಸಲಿದ್ದಾರೆ. ಆದೇಶವನ್ನು ನ್ಯಾಯಾಧೀಶ ಕುಹುರ್ ಅವರು ನೀಡಲಿದ್ದಾರೆ.

English summary
Former minister DK Shivakumar bail application inquiry started in special court New Delhi. DK Shivakumar sent to Judicial custody yesterday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X