ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವರನ್ನು ಭೇಟಿ ಆಗಿ ಮನವಿ ನೀಡಿದ ಡಿಕೆಶಿ ಬ್ರದರ್ಸ್

By ಅನಿಲ್ ಆಚಾರ್
|
Google Oneindia Kannada News

ನವದೆಹಲಿ, ಜೂನ್ 17: ಕರ್ನಾಟಕ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಭಾನುವಾರದಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದರು.

ಒಬ್ಬರನ್ನು ಬಿಟ್ಟು ಕರ್ನಾಟಕ ಸಂಸದರೆಲ್ಲರೂ ಕನ್ನಡದಲ್ಲಿಯೇ ಪ್ರಮಾಣ ವಚನಒಬ್ಬರನ್ನು ಬಿಟ್ಟು ಕರ್ನಾಟಕ ಸಂಸದರೆಲ್ಲರೂ ಕನ್ನಡದಲ್ಲಿಯೇ ಪ್ರಮಾಣ ವಚನ

ಕೃಷ್ಣಾ ಜಲ ವಿವಾದ ಬಗೆಹರಿಸಿಕೊಳ್ಳಲು, ಮೇಕೆದಾಟು ಹಾಗೂ ಮಹಾದಾಯಿ ಕುಡಿಯುವ ನೀರು ಹಾಗೂ ವಿದ್ಯುತ್ ಯೋಜನೆಗೆ ಕೇಂದ್ರದ ಅನುಮತಿ ಪಡೆಯಲು ಬೆಂಬಲ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿಕೊಳ್ಳಲಾಯಿತು. ಇಷ್ಟೇ ಅಲ್ಲದೆ ಇತರ ವಿಚಾರಗಳ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು.

DK Shivakumar brothers appealed for union ministers support to get clearance of union government

ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರ ಬಳಿ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಮನವಿ ಮಾಡಿ, ರಾಜ್ಯದಲ್ಲಿ ಸದ್ಯಕ್ಕೆ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ವೇಗವಾಗಿ ಪುರ್ಣಗೊಳಿಸಬೇಕು. ಬೆಂಗಳೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಬೇಕು ಎಂದರು. ಹಾಗೂ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಬಗ್ಗೆ ಕೂಡ ಚರ್ಚೆ ಮಾಡಿದರು.

English summary
Karnataka water resource minister DK Shivakumar and his brother, Bengluru rural MP DK Suresh appealed for union ministers DV Sadannd Gowda, Suresh Angadi support to get clearance of union government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X