ಇಡಿ ವಶದಲ್ಲಿ ಅನುಭವಿಸಿದ ಕಷ್ಟ ಹೇಳಿಕೊಂಡ ಡಿ.ಕೆ.ಶಿವಕುಮಾರ್
Recommended Video
ನವದೆಹಲಿ, ಸೆಪ್ಟೆಂಬರ್ 17: ಜಾರಿ ನಿರ್ದೇಶನಾಲಯ (ಇಡಿ) ವಶದಲ್ಲಿರುವ ಡಿ.ಕೆ.ಶಿವಕುಮಾರ್ ವಶದಲ್ಲಿ ತಾವು ಅನುಭವಿಸುತ್ತಿರುವ ಕಷ್ಟವನ್ನು ಬೆಂಬಲಿಗರ ಬಳಿ ಇಂದು ಹೇಳಿಕೊಂಡಿದ್ದಾರೆ.
ಇಡಿ ವಶದಿಂದ ಡಿ.ಕೆ.ಶಿವಕುಮಾರ್ ಅವರನ್ನು ರೋಸ್ ಅವೆನ್ಸೂನ ವಿಶೇಷ ನ್ಯಾಯಾಲಯದ ಬಳಿ ಕರೆದುಕೊಂಡು ಬಂದಾಗ ಬೆಂಬಲಿಗನೊಬ್ಬ 'ಶೇವ್ ಮಾಡಿಕೊಂಡು ಬರೋದು ಅಲ್ವೇನಣ್ಣ' ಎಂದು ಕೇಳಿದ್ದಾನೆ.
ಬೆಂಬಲಿಗನ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, 'ಶೇವ್ ಇರಲಿ, ಸ್ನಾನ ಮಾಡಿ ಎರಡು ದಿನ ಆಯ್ತು' ಎಂದು ಪ್ರತ್ಯುತ್ತರ ನೀಡಿದ್ದಾರೆ.

ಸೆಪ್ಟೆಂಬರ್ 13 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗಲೂ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಲಯದ ಮುಂದೆ ತಮ್ಮ ಕಷ್ಟವನ್ನು ಹೇಳಿಕೊಂಡು, ಇಡಿ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ದೂರಿದ್ದರು.
'ರಕ್ತದ ಒತ್ತಡ ಹೆಚ್ಚಾಗಿ, ಸೂಜಿ ಚುಚ್ಚಿದ ಜಾಗದಿಂದ ರಕ್ತ ಒಸರುತ್ತಿದ್ದರೂ ಬಿಡದೆ ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದುಕೊಂಡು ಹೋದರು, ವಿಶ್ರಾಂತಿಯೇ ನೀಡದೆ ವಿಚಾರಣೆ ಮಾಡುತ್ತಿದ್ದಾರೆ' ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದರು.
ಡಿ.ಕೆ.ಶಿವಕುಮಾರ್ ಅವರ ಮನವಿಗೆ ಸ್ಪಂದಿಸಿದ್ದ ನ್ಯಾಯಾಧೀಶರು, ಮೊದಲಿಗೆ ವೈದ್ಯಕೀಯ ತಪಾಸಣೆ ಮಾಡಿ, ಆ ನಂತರವಷ್ಟೆ ಅವರನ್ನು ವಿಚಾರಣೆಗೆ ಒಳಪಡಿಸಿ ಎಂದಿದ್ದರು. ಆದರೆ ಈ ನಾಲ್ಕು ದಿನದಲ್ಲಿ (ಸೆ.13 ರಿಂದ ಸೆ.17) ವರೆಗೆ ಡಿ.ಕೆ.ಶಿವಕುಮಾರ್ ಬಹುಪಾಲು ಸಮಯವನ್ನು ಆಸ್ಪತ್ರೆಯಲ್ಲಿಯೇ ಕಳೆದಿದ್ದಾರೆ.
14 ದಿನದ ಇಡಿ ಕಸ್ಟಡಿ ಅಂತ್ಯವಾದ ಕಾರಣ ಇಂದು ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಆದರೆ ಅವರ ಆರೋಗ್ಯ ಸರಿ ಇಲ್ಲದ ಕಾರಣ, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಅವಶ್ಯಕತೆ ಇದ್ದರಷ್ಟೆ ಅಲ್ಲಿಯೇ ಉಳಿಸಿಕೊಳ್ಳಲಾಗುತ್ತದೆ. ಜಾಮೀನು ಅರ್ಜಿ ನಾಳೆ ವಿಚಾರಣೆಗೆ ಬರಲಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications