ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾದ ಡಿಕೆ ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 25: ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿದ್ದಾರೆ.
ಡಿಕೆ ಶಿವಕುಮಾರ್ ಅವರ ಬಂಧನದ ಅವಧಿ ಶುಕ್ರವಾರ(ಅಕ್ಟೋಬರ್ 25)ಕ್ಕೆ ಕೊನೆಗೊಳ್ಳಬೇಕಿತ್ತು ಆದರೆ ಮೂರು ದಿನ ಮುನ್ನವೇಅವರಿಗೆ ಜಾಮೀನು ದೊರೆತಿತ್ತು. ಅಷ್ಟೇ ಅಲ್ಲದೆ ಡಿಕೆಶಿ ಪರ ವಕೀಲರು ಈಗಾಗಲೇ ಕೋರ್ಟ್ಗೆ ಹಾಜರಾಗಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ಅವರನ್ನು ಡಿಕೆಶಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.ಡಿಕೆಶಿವಕುಮಾರ್ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಲ್ಲುಕಾರ್ಜುನ ಖರ್ಗೆ ಮಾಡಿದ್ದಾರೆ, ಜಾಮೀನು ಸಿಗುತ್ತಿದ್ದಂತೆಯೇ ಡಿಕೆಶಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು. ಅದಕ್ಕೂ ಮುನ್ನ ತಿಹಾರ್ ಜೈಲಿನಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಹಾರ್ ಜೈಲಿಗೆ ಭೇಟಿ ನೀಡಿದ್ದರು.

ದೆಹಲಿಯಿಂದ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ ಭೇಟಿ ವೇಳೆ ಸಂಸದ ಡಿಕೆ ಸುರೇಶ್ ಕೂಡ ಇದ್ದರು. ಭೇಟಿ ವೇಳೆ ಸಂಸದ ಡಿಕೆ ಸುರೇಶ್ ಕೂಡ ಇದ್ದರು. ಅಕ್ರಮ ಹಣೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಡಿಕೆಶಿ ಅವರನ್ನು ಇಡಿ ಬಂಧಿಸಿತ್ತು.
ಶನಿವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ಆಗಮನ. ವಿಮಾನ ನಿಲ್ದಾಣದಿಂದ ಕೆಪಿಸಿಸಿ ಕಚೇರಿ ಬಳಿಕ ಸದಾಶಿವ ನಗರದ ಮನೆಗೆ. 30 ಸಾವಿರ ಜನರು ಡಿಕೆಶಿ ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ಆಗಮಿಸುವ ನಿರೀಕ್ಷೆ ಇದೆ. ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.












Click it and Unblock the Notifications