ಡ್ರಿಪ್ಸ್ ಹಾಕಿದ್ರೂ ಸಹಜ ಸ್ಥಿತಿಗೆ ಮರಳದ ಡಿಕೆ ಶಿವಕುಮಾರ್ ಆರೋಗ್ಯ
Recommended Video
ನವದೆಹಲಿ, ಸೆಪ್ಟೆಂಬರ್ 18: ಡ್ರಿಪ್ಸ್ ಹಾಕಿದ್ದರೂ ಕೂಡ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಆರೋಗ್ಯಸಹಜ ಸ್ಥಿತಿಗೆ ಮರಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ರಕ್ತದೊತ್ತಡ, ಶುಗರ್, ಅತಿಸಾರದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರ ಆರೋಗ್ಯ ತಪಾಸಣೆ 11 ಗಂಟೆ ಸುಮಾರಿಗೆ ನಡೆಯಲಿದೆ. ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ರಂಜಿತ್ ಎನ್ನುವವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಅಕ್ರಮ ಹಣ ವಗಾವಣೆ ಆರೋಪದಲ್ಲಿ ಸೆ.3ರಿಂದ ಇಡಿ ಬಂಧನದಲ್ಲಿದ್ದಾರೆ. ಮಂಗಳವಾರವೂ ಕೂಡ ನ್ಯಾಯಾಲಯವು ಮತ್ತೆ 14 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ಸಿಗುತ್ತಾ ಅಥವಾ ಬಂಧನ ಮುಂದುವರೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಸತತ ಎರಡು ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿದ್ದರು
ತೀವ್ರ ರಕ್ತದೊತ್ತಡ ಹಾಗೂ ಹೃದಯ ಬೇನೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸತತ ಎರಡು ಗಂಟೆಗಳ ತಪಾಸಣೆ ನಂತರ ಡಿಕೆ ಶಿವಕುಮಾರ್ ಅವರನ್ನು ತೀವ್ರ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.

ಇಂದು ಜಾಮೀನು ಅರ್ಜಿ ವಿಚಾರಣೆ
ಡಿಕೆ ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬುಧವಾರ(ಸೆ.18) ಮಧ್ಯಾಹ್ನ ನಡೆಯಲಿದೆ. ಜಾಮೀನು ಸಿಕ್ಕರೆ ಬಿಡುಗಡೆಯಾಗಲಿದ್ದು ಇಲ್ಲದಿದ್ದರೆ ತಿಹಾರ್ ಜೈಲು ಪಾಲಾಗಲಿದ್ದಾರೆ.

ಏನಿದು ಡಿಕೆಶಿ ಪ್ರಕರಣ
ದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ಫ್ಲಾಟ್ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಅಕ್ರಮ ಹಣ ಪತ್ತೆಯಾಗಿತ್ತು. ಡಿಕೆಶಿ ಹಾಗೂ ಆಪ್ತರ ಮನೆಗಳಲ್ಲಿ ಐಟಿ ಅಧಿಕಾರಿಗಳು 8.59 ಕೋಟಿ ಹಣ ಜಪ್ತಿ ಮಾಡಿದ್ದರು.
ಇಡಿ ಸಮನ್ಸ್ ರದ್ದು ಕೋರಿ ಸಚಿವ ಡಿಕೆಶಿ ಹಾಗೂ ಆಪ್ತರು ಅರ್ಜಿ ಸಲ್ಲಿಸಿದ್ದರು. ಹಣದ ಮೂಲದ ಬಗ್ಗೆ ವಿವರಣೆ ನೀಡುವಂತೆ ಡಿಕೆಶಿ ಮತ್ತು ಆಪ್ತರಿಗೆ ಇಡಿ ಸಮನ್ಸ್ ನೀಡಿತ್ತು.
ಲಕ್ಷ್ಮಿ ಹೆಬ್ಬಾಳ್ಕರ್ಗೆ ಇಡಿ ನೋಟಿಸ್
ಅಕ್ರಮ ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಪ್ರಬಲ ನಾಯಕ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದೆ. ಡಿಕೆಶಿ ಆಪ್ತರಲ್ಲೊಬ್ಬರಾದ ಲಕ್ಷ್ಮಿ ಹೆಬ್ಬಾಳ್ಕರ್ಗೂ ಇಡಿ ನೊಟೀಸ್ ನೀಡಿದೆ. ಒಬ್ಬರಲ್ಲ, ಇಬ್ಬರಲ್ಲ ಇಡಿ ಪಟ್ಟಿಯಲ್ಲಿ 184 ಜನ ಇದ್ದಾರಂತೆ. ಈ ಎಲ್ಲರಿಗೂ ಇಡಿ ನೋಟೀಸ್ ನೀಡಿದೆ. 184 ಜನರಿಗೆ ಇಡಿ ನೋಟಿಸ್ ನೀಡಿದೆ. ಅವರಲ್ಲಿ ನಾನು ಒಬ್ಬ ಅಷ್ಟೆ, ಎಂದು ಹೇಳುವ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್ ಅಚ್ಚರಿ ಮೂಡಿಸಿದ್ದಾರೆ.
-
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications