ಹಿಂದಿ ಗೊತ್ತಿಲ್ಲದವರು ಹೊರ ಹೋಗಿ ಹೇಳಿಕೆ ವಿವಾದ: ಆಯುಷ್ ಕಾರ್ಯದರ್ಶಿ ಅಮಾನತಿಗೆ ಸಂಸದೆ ಕನಿಮೋಳಿ ಆಗ್ರಹ
ನವದೆಹಲಿ, ಆಗಸ್ಟ್ 22: ಹಿಂದಿ ಭಾಷೆ ಗೊತ್ತಿಲ್ಲದವರು ಸಚಿವಾಲಯದ ತರಬೇತಿ ಕೇಂದ್ರದಿಂದ ಹೊರ ಹೋಗಬಹುದು ಎಂದಿದ್ದ ಆಯುಷ್ ಕಾರ್ಯದರ್ಶಿ ವೈದ್ಯ ರಾಜೇಶ್ ಕೋಟೆಚಾ ಅವರ ಹೇಳಿಕೆಗೆ ಆಕ್ರೋಶ ಹೆಚ್ಚಾಗಿದ್ದು, ಅವರನ್ನು ಶೀಘ್ರದಲ್ಲೇ ಅಮಾನತುಗೊಳಿಸಬೇಕು ಎಂದು ಡಿಎಂಕೆ ಸಂಸದೆ ಕನಿಮೋಳಿ ಆಗ್ರಹಿಸಿದ್ದಾರೆ.
ಸರಣಿ ಟ್ವೀಟ್ ಮೂಲಕ ಕೆಂಡಕಾರಿರುವ ಸಂಸದೆ ಕನಿಮೋಳಿ 'ಆಯುಷ್ ಕಾರ್ಯದರ್ಶಿ ವೈದ್ಯ ರಾಜೇಶ್ ಕೋಟೆಚಾರವರು ಹಿಂದಿ ಭಾಷೆ ತಿಳಿಯದವರು ಸಚಿವಾಲಯದ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಬಹುದೆಂದು ಹೇಳಿದ್ದಾರೆ. ಇದು ಹಿಂದಿ ಭಾಷೆ ಹೇರಿಕೆಯಾಗುತ್ತಿರುವುದನ್ನು ಸ್ಪಷ್ಟಗೊಳಿಸುತ್ತದೆ. ಇಂತಹ ವರ್ತನೆ ಸಹಿಸಲು ಅಸಾಧ್ಯ. ಕಾರ್ಯದರ್ಶಿಯನ್ನು ಸರ್ಕಾರ ಅಮಾನತುಗೊಳಿಸಬೇಕು ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದಿದ್ದಾರೆ.

ಲೋಕಸಭಾ ಸಂಸದ ಕಾರ್ತಿ ಚಿದಂಬರಂ ಅವರು ಕನಿಮೋಳಿಯವರ ಹೇಳಿಕೆಯನ್ನು ಅನುಸರಿಸಿ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದಾರೆ. ಹಿಂದಿಯಲ್ಲಿ ಮಾತನಾಡಲು ಒತ್ತಾಯಿಸುವುದು 'ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ' ಎಂದು ಹೇಳಿದರು.
ವಾಸ್ತವವಾಗಿ, ಆಗಸ್ಟ್ 18 ಮತ್ತು ಆಗಸ್ಟ್ 20 ರ ನಡುವೆ, ಆಯುಷ್ ಮತ್ತು ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯೋಗದ ಮಾಸ್ಟರ್ ಟ್ರೈನರ್ಸ್ ಫಾರ್ ಯೋಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮಿಳುನಾಡಿನ 33 ಸರ್ಕಾರಿ ವೈದ್ಯರು ಭಾಗವಹಿಸಿದ್ದರು. ಒಟ್ಟು 300 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಆಯುಷ್ ಕಾರ್ಯದರ್ಶಿ ಹಿಂದಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು ಎಂದು ವೈದ್ಯರೊಬ್ಬರು ಹೇಳಿದರು.
'ಕಳೆದ ಎರಡು ದಿನಗಳಲ್ಲಿ ಈ ಕಾರ್ಯಕ್ರಮಕ್ಕೆ ಹಾಜರಾಗಲು ಸಮಯ ನೀಡಿದವರನ್ನು ನಾನು ಅಭಿನಂದಿಸುತ್ತೇನೆ. ಕಳೆದ 2 ದಿನಗಳಲ್ಲಿ ಈವೆಂಟ್ನ ಭಾಷೆಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ ಎಂದು ನನಗೆ ಮಾಹಿತಿ ಬಂದಿದೆ. ನನಗೂ ಇಂಗ್ಲಿಷ್ ಸಂಪೂರ್ಣವಾಗಿ ತಿಳಿದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಆ ಜನರು ಇಲ್ಲಿಂದ ಹೋಗಬಹುದು, ಏಕೆಂದರೆ ನಾನು ಇಲ್ಲಿ ಹಿಂದಿಯಲ್ಲಿ ಮಾತ್ರ ಮಾತನಾಡುತ್ತೇನೆ' ಎಂದಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications