ಗೋಮಾಂಸ ಬೇಕಾದರೆ ಪಾಕಿಸ್ತಾನಕ್ಕೆ ಹೋಗಿ: ನಖ್ವಿ
ನವದೆಹಲಿ, ಮೇ.22: ಗೋಹತ್ಯೆ ನಿಷೇಧದ ಸಮಸ್ಯೆ ಇನ್ನೂ ಬಗೆಹರಿಯದೆ ಚರ್ಚೆಯಲ್ಲಿರುವಾಗಲೇ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ನೀಡಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಗೋ ಮಾಂಸ ತಿನ್ನಬೇಕೆನಿಸಿದರೆ ಪಾಕ್ಸಿತಾನಕ್ಕೆ ಹೋಗಿ ಎಂದು ಕರೆ ನೀಡಿದ್ದಾರೆ.
ಗೋಮಾಂಸ ಮಾರಾಟದ ಮೇಲೆ ಹೇರಿರುವ ನಿಷೇಧವನ್ನು ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಆಜ್ ತಕ್ ಟಿವಿ ಜೊತೆ ನಡೆಸಲಾದ ಮಂಥನ್ ಕಾರ್ಯಕ್ರಮದಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಇದು ಲಾಭ ನಷ್ಟದ ಪ್ರಶ್ನೆಯಲ್ಲ. ನಂಬಿಕೆ ಹಾಗೂ ಭಾವನಾತ್ಮಕ ವಿಷಯವಾಗಿದೆ. ಗೋವುಗಳ ಬಗ್ಗೆ ಹಿಂದೂಗಳು ಪವಿತ್ರವಾದ ಭಾವನೆ ಇಟ್ಟುಕೊಂಡಿದ್ದಾರೆ. ಇದು ಅವರ ಧಾರ್ಮಿಕ ನಂಬಿಕೆ ಪ್ರಶ್ನೆಯಾಗಿದೆ. ಗೋಹತ್ಯೆ ಮಾಡುವುದು ಸರಿಯಲ್ಲ. ಯಾರಿಗೆ ಗೋಮಾಂಸ ತಿನ್ನದೆ ಬದುಕಲು ಸಾಧ್ಯವೇ ಇಲ್ಲವೋ, ಅಂಥವರು ಪಾಕಿಸ್ತಾನ, ಅರಬ್ ದೇಶ ಅಥವಾ ಗೋಮಾಂಸ ಲಭ್ಯವಿರುವ ದೇಶಕ್ಕೆ ಹೋಗಿ ತಿನ್ನಬಹುದು ಎಂದು ನಖ್ವಿ ಹೇಳಿದ್ದಾರೆ.
ಇತ್ತೀಚೆಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಕೆಲವು ರಾಜ್ಯಗಳಲ್ಲಿ ಜಾರಿಗೆ ತಂದಿರುವ ಗೋಮಾಂಸ ಮಾರಾಟ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ವಿಶೇಷವಾಗಿ ಹೆಚ್ಚು ಮುಸ್ಲಿಂ ಜನಾಂಗ ಹೊಂದಿರುವ ರಾಜ್ಯಗಳಾದ ಗೋವಾ, ಜಮ್ಮು ಮತ್ತು ಕಾಶ್ಮೀರ, ಹಾಗೂ ಕೇರಳದಲ್ಲಿ ಈ ನಿಷೇಧವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಉತ್ತರವಾಗಿ ನಖ್ವಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರ ಮುಸ್ಲಿಮರ ವಿರೋಧಿಯಲ್ಲ, ಮುಸ್ಲಿಮರ ಶಿಕ್ಷಣ, ಬಡತನ ನಿರ್ಮೂಲನೆಗಾಗಿ ಅನೇಕ ಸಾಮಾಜಿಕ ಭದ್ರತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. (ಐಎಎನ್ಎಸ್)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications