ದಂಡ ಕಟ್ಟಲು ನಕಾರ, ಜೈಲಿಗೆ ಹೋಗಲು ಸಿದ್ಧ: ಶ್ರೀಶ್ರೀ ರವಿಶಂಕರ್
ನವದೆಹಲಿ, ಮಾರ್ಚ್ 10: ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಆಯೋಜನೆಯ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ರಾಷ್ಟ್ರೀಯ ಹಸಿರು ಪ್ರಾಧಿಕಾರದಿಂದ ಬುಧವಾರ ಷರತ್ತುಬದ್ಧ ಒಪ್ಪಿಗೆ ಸಿಕ್ಕಿದೆ. ಆದರೆ, ಪರಿಸರ ಹಾನಿಯಾಗಿರುವುದಕ್ಕೆ ಪರಿಹಾರ ರೂಪವಾಗಿ 5 ಕೋಟಿ ರು ದಂಡ ಕಟ್ಟಲು ಎಒಎಲ್ ಗೆ ಸೂಚಿಸಲಾಗಿದ್ದು, ದಂಡ ಕಟ್ಟಲು ರವಿಶಂಕರ್ ಗುರೂಜಿ ನಿರಾಕರಿಸಿ, ಜೈಲಿಗೆ ಹೋಗಲು ಸಿದ್ಧ ಎಂದಿದ್ದಾರೆ.
'ಮಾರ್ಚ್ 11ರಂದು ಯಮುನಾ ನದಿ ತೀರದಲ್ಲೇ ನಿಗದಿಯಂತೆ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ನಡುವೆ ಆರ್ಟ್ ಆಫ್ ಲಿವಿಂಗ್ ಮೇಲೆ ರಾಷ್ಟೀಯ ಹಸಿರು ಪ್ರಾಧಿಕಾರ (ಎನ್ ಜಿಟಿ) 5 ಕೋಟಿ ರು ದಂಡ ವಿಧಿಸಿರುವುದು ಸರಿಯಿಲ್ಲ. ದಂಡ ಪಾವತಿ ಮಾಡುವುದಿಲ್ಲ. ಈ ವಿಷಯವಾಗಿ ಜೈಲಿಗೆ ಹೋಗಲು ಸಿದ್ಧ' ಎಂದು ಪ್ರತಿಕ್ರಿಯಿಸಿದ್ದಾರೆ. [ಎಒಎಲ್ ಗೆ 5 ಕೋಟಿ ರು ದಂಡ, ಉತ್ಸವಕ್ಕೆ ಗ್ರೀನ್ ಸಿಗ್ನಲ್]

ಯಮುನಾ ನದಿ ನೀರು ಹಾನಿಯಾಗಿರುವ ಕಾರಣ ಸುಮಾರು 100 ರಿಂದ 200 ಕೋಟಿ ರು ಪರಿಹಾರಕ್ಕೆ ಆಗ್ರಹಿಸಲಾಗಿತ್ತು. ಆದರೆ, ಪರಿಸರ ನಾಶ ಮಾಡಿದ ಕಾರಣಕ್ಕೆ ಆರ್ಟ್ ಆಫ್ ಲಿವಿಂಗ್ ಗೆ 5 ಕೋಟಿ ರು ದಂಡ ವಿಧಿಸಲಾಗಿದೆ. ಜೊತೆಗೆ ಯಮುನಾ ನದಿ ಪ್ರದೇಶದಲ್ಲಿ ಸಂಪೂರ್ಣವಾಗಿ ಜೀವ ವೈವಿಧ್ಯ ಉದ್ಯಾನ ನಿರ್ಮಿಸುವಂತೆ ಎಒಎಲ್ ಗೆ ಪ್ರಾಧಿಕಾರ ಸೂಚಿಸಿದೆ. [ಏನಿದು? ರವಿಶಂಕರ್ ಗುರೂಜಿ ಯಮುನಾ ನದಿ ತೀರ ವಿವಾದ]
ಹಸಿರು ಪ್ರಾಧಿಕಾರದ ನಿರ್ಣಯದಿಂದ ತೃಪ್ತರಾಗಿಲ್ಲ ಎಂದಿರುವ ರವಿಶಂಕರ್ ಗುರೂಜಿ ಅವರು ನೀಡಿದ ಪ್ರತಿಕ್ರಿಯೆ ಮುಂದಿದೆ...

ಆರ್ಟ್ ಆಫ್ ಲಿವಿಂಗ್ ನ ಪ್ರತಿನಿಧಿಗಳು ಸ್ಪಷ್ಟನೆ
ಈ ಕಾರ್ಯಕ್ರಮದ ಆಯೋಜನೆಯಿಂದ ಯಮುನಾ ನದಿ ಕಲುಷಿತಗೊಂಡಿದೆ ಎಂದು ಪರಿಸರವಾದಿಗಳು ಆರೋಪಿಸಿ, ರಾಷ್ಟ್ರೀಯ ಹಸಿರು ಪ್ರಾಧಿಕಾರಕ್ಕೆ ದೂರು ನೀಡಿದ್ದರು. ಈ ಬಗ್ಗೆ ಬುಧವಾರ ಆರ್ಟ್ ಆಫ್ ಲಿವಿಂಗ್ ನ ಪ್ರತಿನಿಧಿಗಳು ಸ್ಪಷ್ಟನೆ ನೀಡಿ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲು 15.63 ಕೋಟಿ ರು ವೆಚ್ಚವಾಗಿದ್ದು, ಅಲಂಕಾರಕ್ಕಾಗಿ 10 ಕೋಟಿ ರು ಖರ್ಚು ಮಾಡಲಾಗಿದೆ ಎಂದು ಹೇಳಿದ್ದರು.
|
ವಿಶ್ವ ಸಾಂಸ್ಕೃತಿಕ ಉತ್ಸವದ ಬಗ್ಗೆ ಶ್ರೀಶ್ರೀ ಟ್ವೀಟ್
172 ಕ್ಕೂ ಅಧಿಕ ಅಂತಾರಾಷ್ಟ್ರೀಯ ಪ್ರತಿನಿಧಿಗಳು, ಪದಾಧಿಕಾರಿಗಳು, ಸಂಸದರು ವಿಶ್ವ ಸಾಂಸ್ಕೃತಿಕ ಉತ್ಸವ 2016ದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
|
ಲಕ್ಷಾಂತರ ಜನ ಆಗಮಿಸುವ ನಿರೀಕ್ಷೆಯಿದೆ
155 ದೇಶಗಳಿಂದ 20,000ಕ್ಕೂ ಅಧಿಕ ಗಣ್ಯರು ಸೇರಿದಂತೆ ಲಕ್ಷಾಂತರ ಮಂದಿ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ಕಾರ್ಯಕ್ರಮ ಇದಾಗಿದೆ.
|
ದೆಹಲಿಗರೇ, ಜಮೀನು ನೀಡಿ ಸ್ವರ್ಗ ನಿರ್ಮಿಸೋಣ
ದೆಹಲಿಗರೇ, ಯಮುನಾ ನದಿ ತೀರದಲ್ಲಿ ಸ್ವಲ್ಪ ಜಮೀನು ನೀಡಿ ಸ್ವರ್ಗ ನಿರ್ಮಿಸೋಣ
|
ನಮ್ಮ ಮೇಲೆ ದಂಡ ವಿಧಿಸಲಾಗಿದೆ
ನಮ್ಮ ಮೇಲೆ ದಂಡ ವಿಧಿಸಲಾಗಿದೆ. ನಾವು ಈ ನಿರ್ಣಯದಿಂದ ಸಂತುಷ್ಟರಾಗಿಲ್ಲ. ಸತ್ಯಮೇವ ಜಯತೇ
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications