ಡಿಆರ್ ಡಿಓ ವಜ್ರ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆ
ನವದೆಹಲಿ, ನವೆಂಬರ್ 17 : ಭದ್ರತಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಓ) 2018 ಕ್ಕೆ 60 ವರ್ಷಗಳನ್ನು ಪೂರೈಸುತ್ತಿದ್ದು ವಜ್ರ ಮಹೋತ್ಸವದ ಅಂಗವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಿದೆ.
ಇದು ರಾಷ್ಟ್ರೀಯ ಮಟ್ಟದ ಪ್ರಬಂಧ ಸ್ಪರ್ಧೆಯಾಗಿದ್ದು "ಡಿಆರ್ ಡಿಓದ ಸಾಧನೆಗಳು ಮತ್ತು ಮುಂದಿನ ನಿಲುವುಗಳು' ಕುರಿತ ವಿಷಯದ ಮೇಲೆ ಪ್ರಬಂಧವನ್ನು ರಚಿಸಬೇಕಾಗಿದೆ.
ಡಿಆರ್ ಡಿಓ ಜಾಗತಿಕ ಮಟ್ಟದ ಯುದ್ಧೋಪಕರಣಗಳನ್ನು ತಯಾರಿಸುವಂತ ಸಂಸ್ಥೆಯಾಗಿದೆ. ಇದು ಬಾಹ್ಯಾಕಾಶ ತಂತ್ರಜ್ಞಾನ, ಎಂಜಿನಿಯರಿಂಗ್ ಸಿಸ್ಟಂ, ಉಕ್ಕು ತಯಾರಿಕೆ ಇನ್ನಿತರೆ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿದೆ.
ಭದ್ರತಾ ಸಾಮಗ್ರಿಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಜತೆಗೆ ಡಿಆರ್ ಡಿಓದ ಸಾಧನೆಗಳೇನು?, ೬೦ವರ್ಷಗಳಿಂದ ಸಂಸ್ಥೆ ಬೆಳೆದು ಬಂದ ರೀತಿ ಬಗ್ಗೆ ಮಾಹಿತಿ ಒದಗಿಸುವುದು ಪ್ರಬಂಧ ಸ್ಪರ್ಧೆಯ ಉದ್ದೇಶವಾಗಿದೆ.

ಒಟ್ಟು 60 ಪ್ರಬಂಧಗಳನ್ನು ಪರಿಗಣಿಸಲಾಗುತ್ತದೆ. ಪ್ರತಿ ಪ್ರಬಂಧಕ್ಕೂ 2ಸಾವಿರ ರೂ ನಗದು ಬಹುಮಾನವಿರುತ್ತದೆ. ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲಿ ಪ್ರಬಂಧ ರಚಿಸಬಹುದು.
ಆಯ್ಕೆಯಾದ ಪ್ರಬಂಧಗಳನ್ನು ಡಿಆರ್ ಡಿಓ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಡಿಆರ್ ಡಿಓ ದಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅವಕಾಶವಿರುವುದಿಲ್ಲ.
ಪ್ರಬಂಧವನ್ನು ಕಳುಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಎರಡು ವಿಭಾಗಗಳಲ್ಲಿ ಪ್ರಬಂಧವನ್ನು ಆಹ್ವಾನಿಸಲಾಗಿದೆ. 9 ರಿಂದ 12 ನೇ ತರಗತಿಯವರೆಗೆ ಒಂದು ವಿಭಾಗ ಅದರಲ್ಲಿ #Category1, ಪದವಿ ಹಾಗೂ ಸ್ನಾತಕೋತ್ತರ ಪದವಿ ನಂತರದವರಿಗೆ ಎರಡನೇ #Category2 ವಿಭಾಗವಾಗಿ ಮಾಡಲಾಗಿದೆ.
ಡಿಸೆಂಬರ್ 5 ರೊಳಗಾಗಿ ಪ್ರಬಂಧವನ್ನು ಕಳುಹಿಸಬೇಕು. ಡಿಆರ್ ಡಿಓ ವೆಬ್ಸೈಟಿನ ಮೂಲಕ ಪ್ರಬಂಧವನ್ನು ಕಳುಹಿಸಬೇಕು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications