ಡಿಆರ್ ಡಿಓ ವಜ್ರ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆ
ನವದೆಹಲಿ, ನವೆಂಬರ್ 17 : ಭದ್ರತಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಓ) 2018 ಕ್ಕೆ 60 ವರ್ಷಗಳನ್ನು ಪೂರೈಸುತ್ತಿದ್ದು ವಜ್ರ ಮಹೋತ್ಸವದ ಅಂಗವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಿದೆ.
ಇದು ರಾಷ್ಟ್ರೀಯ ಮಟ್ಟದ ಪ್ರಬಂಧ ಸ್ಪರ್ಧೆಯಾಗಿದ್ದು "ಡಿಆರ್ ಡಿಓದ ಸಾಧನೆಗಳು ಮತ್ತು ಮುಂದಿನ ನಿಲುವುಗಳು' ಕುರಿತ ವಿಷಯದ ಮೇಲೆ ಪ್ರಬಂಧವನ್ನು ರಚಿಸಬೇಕಾಗಿದೆ.
ಡಿಆರ್ ಡಿಓ ಜಾಗತಿಕ ಮಟ್ಟದ ಯುದ್ಧೋಪಕರಣಗಳನ್ನು ತಯಾರಿಸುವಂತ ಸಂಸ್ಥೆಯಾಗಿದೆ. ಇದು ಬಾಹ್ಯಾಕಾಶ ತಂತ್ರಜ್ಞಾನ, ಎಂಜಿನಿಯರಿಂಗ್ ಸಿಸ್ಟಂ, ಉಕ್ಕು ತಯಾರಿಕೆ ಇನ್ನಿತರೆ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿದೆ.
ಭದ್ರತಾ ಸಾಮಗ್ರಿಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಜತೆಗೆ ಡಿಆರ್ ಡಿಓದ ಸಾಧನೆಗಳೇನು?, ೬೦ವರ್ಷಗಳಿಂದ ಸಂಸ್ಥೆ ಬೆಳೆದು ಬಂದ ರೀತಿ ಬಗ್ಗೆ ಮಾಹಿತಿ ಒದಗಿಸುವುದು ಪ್ರಬಂಧ ಸ್ಪರ್ಧೆಯ ಉದ್ದೇಶವಾಗಿದೆ.

ಒಟ್ಟು 60 ಪ್ರಬಂಧಗಳನ್ನು ಪರಿಗಣಿಸಲಾಗುತ್ತದೆ. ಪ್ರತಿ ಪ್ರಬಂಧಕ್ಕೂ 2ಸಾವಿರ ರೂ ನಗದು ಬಹುಮಾನವಿರುತ್ತದೆ. ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲಿ ಪ್ರಬಂಧ ರಚಿಸಬಹುದು.
ಆಯ್ಕೆಯಾದ ಪ್ರಬಂಧಗಳನ್ನು ಡಿಆರ್ ಡಿಓ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಡಿಆರ್ ಡಿಓ ದಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅವಕಾಶವಿರುವುದಿಲ್ಲ.
ಪ್ರಬಂಧವನ್ನು ಕಳುಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಎರಡು ವಿಭಾಗಗಳಲ್ಲಿ ಪ್ರಬಂಧವನ್ನು ಆಹ್ವಾನಿಸಲಾಗಿದೆ. 9 ರಿಂದ 12 ನೇ ತರಗತಿಯವರೆಗೆ ಒಂದು ವಿಭಾಗ ಅದರಲ್ಲಿ #Category1, ಪದವಿ ಹಾಗೂ ಸ್ನಾತಕೋತ್ತರ ಪದವಿ ನಂತರದವರಿಗೆ ಎರಡನೇ #Category2 ವಿಭಾಗವಾಗಿ ಮಾಡಲಾಗಿದೆ.
ಡಿಸೆಂಬರ್ 5 ರೊಳಗಾಗಿ ಪ್ರಬಂಧವನ್ನು ಕಳುಹಿಸಬೇಕು. ಡಿಆರ್ ಡಿಓ ವೆಬ್ಸೈಟಿನ ಮೂಲಕ ಪ್ರಬಂಧವನ್ನು ಕಳುಹಿಸಬೇಕು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications