ಡ್ರಗ್ಸ್ ಪ್ರಕರಣ: ರಾಗಿಣಿ ದ್ವಿವೇದಿ ಭವಿಷ್ಯ ಇಂದು ತೀರ್ಮಾನ ಸಾಧ್ಯತೆ
ನವದೆಹಲಿ, ಜನವರಿ 8: ಮಾದಕವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ರಾಗಿಣಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ರಾಗಿಣಿ ಅವರ ಅರ್ಜಿ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠದ ಮುಂದೆ ಬೆಳಿಗ್ಗೆ 11.30ರ ವೇಳೆ ವಿಚಾರಣೆಗೆ ಬರಲಿದೆ. ಹಲವು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿರುವ ರಾಗಿಣಿ ಅವರಿಗೆ ಜೈಲಿನಿಂದ ಮುಕ್ತಿ ಸಿಗಲಿದೆಯೇ ಎನ್ನುವುದು ಕುತೂಹಲ ಮೂಡಿಸಿದೆ.
ಆದರೆ ರಾಗಿಣಿ ಅವರ ಜಾಮೀನು ಅರ್ಜಿಗೆ ಬೆಂಗಳೂರು ಸಿಸಿಬಿ ಪರ ವಕೀಲರು ಈಗಾಗಲೇ ಆಕ್ಷೇಪಣೆ ಸಲ್ಲಿಸಿದ್ದಾರೆ. ರಾಗಿಣಿ ಅವರು ಮಾದಕವಸ್ತು ಸೇವನೆ ಮತ್ತು ಮಾರಾಟದಲ್ಲಿ ಭಾಗಿಯಾಗಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ಅವರಿಗೆ ಜಾಮೀನು ನೀಡದಂತೆ ವಕೀಲ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ.

2020ರ ಸೆ. 4ರಂದು ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳ ಅಡಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಗಿಣಿ ನವೆಂಬರ್ ಅಂತ್ಯದಲ್ಲಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಡಿ. 4ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ನವೀನ್ ಸಿನ್ಹಾ ಮತ್ತು ಕೆಎಂ ಜೋಸೆಫ್ ಅವರ ಪೀಠ ರಾಜ್ಯ ಸರ್ಕಾರ ಮತ್ತು ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿತ್ತು.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ. ರಾಗಿಣಿ ಬಂಧನದ ಬಳಿಕ ಬಂಧನಕ್ಕೆ ಒಳಗಾಗಿದ್ದ ನಟಿ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದು ಹೊರಬರಲು ಯಶಸ್ವಿಯಾಗಿದ್ದರು.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications