ಜಸ್ಟಿಸ್ ರಾಮ ಜೋಯಿಸ್ ನಿಧನಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ಕಂಬನಿ
ನವದೆಹಲಿ, ಫೆ. 16: ಪಂಜಾಬ್ ಮತ್ತು ಹರ್ಯಾಣ ಉಚ್ಛ ನ್ಯಾಯಾಲಯಗಳ ನಿವೃತ್ತ ಮುಖ್ಯ ನ್ಯಾ. ಎಂ ರಾಮ ಜೋಯಿಸ್ ಅವರ ನಿಧನಕ್ಕೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ಅತೀವ ದುಃಖ ವ್ಯಕ್ತಪಡಿಸಿದ್ದಾರೆ.
ಶ್ರೇಷ್ಠ ಕಾನೂನು ವಿದ್ವಾಂಸರಾಗಿದ್ದ ಅವರು ಸಂವಿಧಾನ ತಜ್ಞರಾಗಿದ್ದರು. ಭಾರತದ ವಿವಿಧ ಉಚ್ಛ ನ್ಯಾಯಾಲಯಗಳ ನ್ಯಾಯಾಧೀಶರಾಗಿ, ಮುಖ್ಯ ನ್ಯಾಯಾಧೀಶರಾಗಿ ಹಲವು ಐತಿಹಾಸಿಕ ತೀರ್ಪುಗಳನ್ನು ನೀಡಿದ ಗೌರವ ಅವರದ್ದಾಗಿದೆ ಎಂದು ಸಚಿವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ನ್ಯಾ. ಜೋಯಿಸ್ ಅವರು ಪಕ್ಷದ ಮಾರ್ಗದರ್ಶಕರಾಗಿದ್ದರು. ರಾಜ್ಯಸಭೆ ಸದಸ್ಯರಾಗಿ ಅವರು ಮೇಲ್ಮನೆಯ ಗೌರವವನ್ನು ಇನ್ನಷ್ಟು ಹೆಚ್ಚಿಸಿದರು. ಪ್ರಾಚೀನ ಭಾರತದ ನ್ಯಾಯಿಕ ವ್ಯವಸ್ಥೆ ಬಗ್ಗೆಯೂ ಆಳವಾದ ಅಧ್ಯಯನ ಮಾಡಿದ್ದ ನ್ಯಾಯಮೂರ್ತಿ ಜೋಯಿಸ್ ಅವರು ಸದನದಲ್ಲಿ ಭಾರತೀಯ ಗ್ರಂಥಗಳಲ್ಲಿನ ಸಂಸ್ಕೃತ ಶ್ಲೋಕಗಳನ್ನು ಉಲ್ಲೇಖಿಸಿ ಅರ್ಥ ಹೇಳುತ್ತಿದ್ದರು.

ಜಾರ್ಖಂಡ್ ಹಾಗೂ ಬಿಹಾರದ ರಾಜ್ಯಪಾಲರಾಗಿಯೂ ಅವರು ತಮ್ಮ ಛಾಪು ಮೂಡಿಸಿದರು. ಸತತ ಅಧ್ಯಯನಶೀಲರಾಗಿದ್ದ ನ್ಯಾಯಮೂರ್ತಿ ಜೋಯಿಸರು 'ಧರ್ಮ ದಿ ಗ್ಲೋಬಲ್ ಎಥಿಕ್', 'ಲೀಗಲ್ & ಕಾನ್ಸ್ಟಿಟ್ಯೂಶನಲ್ ಹಿಸ್ಟರಿ ಆಫ್ ಇಂಡಿಯಾ', 'ಹಿಸ್ಟಾರಿಕಲ್ ಬ್ಯಾಟಲ್', 'ನೀಡ್ ಫಾರ್ ಅಮೆಂಡಿಂಗ್ ಕಾನ್ಸ್ಟಿಟ್ಯೂಶನಲ್', ಕೋಡ್ ಆಫ್ ಕಂಡಕ್ಟ್ ಫೊರ್ ರೂಲರ್ಸ್' ಮುಂತಾದ ಪುಸ್ತಕಗಳನ್ನು ಬರೆದಿದ್ದರು ಎಂದು ಸಚಿವರು ಹೇಳಿದರು.
ನ್ಯಾಯಮೂರ್ತಿ ಜೋಯಿಸ ಅರೊಂದಿಗಿನ ತಮ್ಮ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡ ಸದಾನಂದ ಗೌಡರು ತಾವು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾಗ, ಮುಖ್ಯಮಂತ್ರಿಯಾಗಿದ್ದಾಗ ಅವರಿಂದ ಹಲವುಬಾರಿ ಕಾನೂನು ಸಲಹೆ ಪಡೆದಿರುವುದಾಗಿ ಹೇಳಿದರು.
ಅವರ ನಿಧನದಿಂದ ಸಮಾಜವು ನ್ಯಾಯ-ನೀತಿ ಪ್ರತಿಪಾದಕರೊಬ್ಬರನ್ನು ಕಳೆದುಕೊಂಡಿದೆ. ಭಗವಂತನು ಅವರಿಗೆ ಸದ್ಗತಿ ಉಂಟುಮಾಡಲಿ. ಕುಟುಂಬದವರಿಗೆ, ಅನುಯಾಯಿಗಳಿಗೆ ಅವರ ನಿಧನದಿಂದಾಗಿರುವ ದುಃಖವನ್ನು ಬರಿಸುವ ಶಕ್ತಿನೀಡಲಿ ಎಂದು ಪ್ರಾರ್ಥಿಸುವುದಾಗಿ ಸದಾನಂದ ಗೌಡ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications