ದೇಶದಲ್ಲಿ 8 ಪ್ಲಾಸ್ಟಿಕ್ ಕೈಗಾರಿಕಾಭಿವೃದ್ಧಿ ಕೇಂದ್ರಗಳ ಸ್ಥಾಪನೆ:ಡಿವಿಎಸ್
ನವದೆಹಲಿ, ಫೆ. 23: ಭಾರತವನ್ನು ಜಾಗತಿಕ ಪೆಟ್ರೋಕೆಮಿಕಲ್ಸ್ ಕೈಗಾರಿಕಾ ತಾಣವಾಗಿ ರೂಪಿಸಲು ತಮ್ಮ ಇಲಾಖೆಯು ಅನೇಕ ಯೋಜನೆಗಳನ್ನು ರೂಪಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ. ದೆಹಲಿಯಲ್ಲಿ ಪೆಟ್ರೋಕೆಮಿಕಲ್ಸ್ ಮತ್ತು ಪ್ಲಾಸ್ಟಿಕ್ ಸಂಸ್ಕರಣಾ ಉದ್ಯಮದಲ್ಲಿ ತಂತ್ರಜ್ಞಾನ ನಾವೀನ್ಯತೆಗಾಗಿ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದ್ದಾರೆ.
ದೇಶದಲ್ಲಿ ಈಗಾಗಲೇ ಸಾಕಷ್ಟು ಪ್ಲಾಸ್ಟಿಕ್ ಉದ್ಯಮಗಳು ಇದ್ದಾಗ್ಯೂ ವೈದ್ಯಕೀಯ ಸಲಕರಣೆಗಳು, ವೈಜ್ಞಾನಿಕ ಉಪಕರಣಗಳು, ದೂರಸಂಪರ್ಕ-ನೆಟ್ವರ್ಕಿಂಗ್ ಉಪಕರಣಗಳು, ವಾಹನಗಳು, ಎಲೆಕ್ಟ್ರಾನಿಕ್ಸ್, ಮೊಬೈಲ್, ಕೈಗಾರಿಕೆ ಇವೇ ಮುಂತಾದ ಉದ್ದೇಶಗಳಿಗೆ ಬಳಸುವ ಉನ್ನತ ಶ್ರೇಣಿಯ ಪ್ಲಾಸ್ಟಿಕ್ ಉತ್ಪಾದಿಸುವಲ್ಲಿ ಹಿಂದೆ ಬಿದ್ದಿದ್ದೇವೆ. ಅದಕ್ಕಾಗಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಆರು ಪ್ಲಾಸ್ಟಿಕ್ ಪಾರ್ಕುಗಳನ್ನು (ಪಾಸ್ಲಿಕ್ ಸಂಬಂಧಿತ ಕೈಗಾರಿಕಾಭಿವೃದ್ಧಿ ಕೇಂದ್ರಗಳು) ನಿರ್ಮಿಸುವ ಕಾರ್ಯ ಚಾಲನೆಯಲ್ಲಿದೆ.

ಹಾಗೆಯೇ, ಇನ್ನೂ ಎರಡು ಪ್ಲಾಸ್ಟಿಕ್ ಪಾರ್ಕುಗಳಿಗೆ (ಮಂಗಳೂರು ಮತ್ತು ಘೋರಕ್ಪುರ) ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಇವು ಮುಂಬರುವ ದಿನಗಳಲ್ಲಿ ವಿಶ್ವ ದರ್ಜೆಯ ಪ್ಲಾಸ್ಟಿಕ್ ಕೈಗಾರಿಕಾ ಕ್ಲಸ್ಟರ್ಗಳಾಗಿ ಅಭಿವೃದ್ಧಿಗೊಳ್ಳುವುದು ನಿಶ್ಚಿತ. ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ. ಜಿಡಿಪಿಗೆ ದೊಡ್ಡಪಾಲು ನೀಡಲಿದೆ. ನಮ್ಮ ಜನರಿಗೆ ದೊಡ್ಡಪ್ರಮಾಣದಲ್ಲಿ ಉದ್ಯೋಗಗಳನ್ನು ಸೃಷ್ಟಿಸಲಿದೆ.

ಪೆಟ್ರೋಕೆಮಿಕಲ್ಸ್ ವಲಯವು ದೇಶದ ಜಿಡಿಪಿಗೆ ಗಮನಾರ್ಹ ಕೊಡುಗೆ ನೀಡುವುದರ ಜೊತೆಗೇ 2024ರ ವೇಳೆಗೆ ದೇಶವನ್ನು 5 ಸಹಸ್ರಕೋಟಿ ಡಾಲರ್ ಆರ್ಥಿಕತೆಯಾಗಿ ರೂಪಿಸಬೇಕು ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸನ್ನು ನನಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸದಾನಂದ ಗೌಡ ವಿವರಿಸಿದರು.

ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ದೇಶಾದ್ಯಂತ 42 ಕೇಂದ್ರಗಳನ್ನು ಹೊಂದಿದ್ದು ಪ್ಲಾಸ್ಟಿಕ್ ಮತ್ತು ಪೆಟ್ರೋಕೆಮಿಕಲ್ಸ್ ಕೈಗಾರಿಕೆಗಳಿಗೆ ಅಗತ್ಯವಾದ ಕೌಶಲ್ಯವಂತರನ್ನು ತಯಾರು ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಹಾಗಾಗಿ ದೇಶದಲ್ಲಿ ಈ ವಲಯಕ್ಕೆ ಬೇಕಾಗುವ ಕೌಶಲ್ಯಭರಿತ ಮಾನವ ಸಂಪನ್ಮೂಲ ವಿಫುಲವಾಗಿವೆ.

ಈ ಸಂಸ್ಥೆಯ ಮೂಲಕ ದೊಡ್ಡ ಮಟ್ಟದಲ್ಲಿ ಸಂಶೋಧನೆ ಮತ್ತು ಅವಿಷ್ಕಾರಗಳಿಗೆ ಕೂಡಾ ಉತ್ತೇಜನ ನೀಡಲಾಗುತ್ತಿದೆ. ಉನ್ನತ ಶ್ರೇಣಿಯ ಪ್ಲಾಸ್ಟಿಕ್ ವಸ್ತುಗಳಿಗೆ ದೇಶೀಯಯವಾಗಿಯೇ ಸಿದ್ಧ ಮಾರುಕಟ್ಟೆಯಿದೆ. ಇವೆಲ್ಲವೂ ಭಾರತದ ಪೆಟ್ರೋಕೆಮಿಕಲ್ಸ್ ವಲಯವನ್ನು ಹೂಡಿಕೆಗೆ ಆಕರ್ಷಕ ತಾಣವನ್ನಾಗಿ ರೂಪಿಸಿದೆ. ಹಾಗಾಗಿ ದೇಶೀಯ ಹಾಗೂ ವಿದೇಶಿ ಬಂಡವಾಳಗಾರರು ಈ ವಲಯದಲ್ಲಿ ಹೂಡಿಕೆ ಮಾಡಲು ಮುಂದೆ ಬರಬೇಕು ಎಂದರು. ಜೊತೆಗೆ ಇಂತಹ ಪ್ರಶಸ್ತಿಗಳು ಹೆಚ್ಚಿನ ಸಂಶೋಧನೆಗೆ ಉತ್ತೇಜನ ನೀಡುತ್ತವೆ ಎಂದ ಸದಾನಂದ ಗೌಡ ಅವರು ಎಲ್ಲ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications