ಕೋಟಿ ರುಪಾಯಿ ಸಮೋಸ ತಿಂದು, ಟೀ ಕುಡಿದು ತೇಗಿತೆ ಆಪ್?
ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರ ಹದಿನೆಂಟು ತಿಂಗಳಲ್ಲಿ ಒಂದು ಕೋಟಿ ರುಪಾಯಿಯಷ್ಟು ಟೀ-ಸಮೋಸಕ್ಕೆ ಖರ್ಚು ಮಾಡಿದೆಯಂತೆ. ಇದೇ ಸಂಖ್ಯೆಯನ್ನು ಮುಂದಿಟ್ಟುಕೊಂಡು ಬಿಜೆಪಿ ದೆಹಲಿಯಲ್ಲಿ ಪೋಸ್ಟರ್ ಗಳನ್ನು ಹಚ್ಚಿದೆ
ನವದೆಹಲಿ, ಏಪ್ರಿಲ್ 11: ಇದೀಗ ಆಮ್ ಆದ್ಮಿ ಪಕ್ಷದ ಮೇಲೆ 1 ಕೋಟಿ ರುಪಾಯಿ ಸಮೋಸ ಹಗರಣದ ಆರೋಪ ಕೇಳಿಬಂದಿದೆ. ಬಿಜೆಪಿ ವಕ್ತಾರ ತಜಿಂದರ್ ಪಾಲ್ ಸಿಂಗ್ ಬಗ್ಗ ಈ ಬಗ್ಗೆ ದೆಹಲಿಯಲ್ಲಿ ಪೋಸ್ಟರ್ ಗಳನ್ನು ಹಾಕಿಸಿದ್ದು, ಕಳೆದ ಹದಿನೆಂಟು ತಿಂಗಳಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರಕಾರ ಸಮೋಸ ಹಾಗೂ ಟೀಗಾಗಿ ಸಾರ್ವಜನಿಕರ ಹಣ ಒಂದು ಕೋಟಿ ರುಪಾಯಿ ಖರ್ಚು ಮಾಡಿದೆ ಎಂದು ಆರೋಪಿಸಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಕೇಜ್ರಿವಾಲ್ ಮನೆಯಲ್ಲಿ ನಡೆದ ಔತಣಕೂಟದಲ್ಲಿ ಒಬ್ಬ ವ್ಯಕ್ತಿಗೆ ಹದಿಮೂರು ಸಾವಿರ ರುಪಾಯಿ ಖರ್ಚು ಮಾಡಲಾಗಿತ್ತು. ಅದಕ್ಕಾಗಿ ಸಾರ್ವಜನಿಕ ಹಣ ಬಳಕೆಯಾಗಿದೆ ಎಂಬ ಆರೋಪ ಕೇಳಿಬಂದ ನಂತರ ಇದೀಗ ಸಮೋಸ ಹಗರಣದ ಬಗ್ಗೆ ಬಿಜೆಪಿ ಪ್ರಸ್ತಾವ ಮಾಡಿದೆ.[ದೆಹಲಿಯಲ್ಲಿ ಎಎಪಿಯಿಂದ ಅಧಿಕಾರ ದುರುಪಯೋಗ: ವರದಿಯಲ್ಲಿ ಏನಿದೆ?]

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿಜೇಂದ್ರ ಗುಪ್ತಾ ಆಗ್ರಹಿಸಿದ್ದಾರೆ. ಸರಕಾರವು ಸಾರ್ವಜನಿಕ ಹಣವನ್ನು ಪೋಲು ಮಾಡಬಾರದು. ಆದರೆ ಕೇಜ್ರಿವಾಲ್ ಮತ್ತು ಅವರ ಪಕ್ಷ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಲಾಗಿದೆ.[ಬಿಜೆಪಿ ಗೆಲುವಿಗೆ ಇವಿಎಂ ಲೋಪ ಎನ್ನುತ್ತಿದ್ದ ಕೇಜ್ರಿವಾಲ್ ಈಗ ಏನು ಹೇಳ್ತಾರೋ?]
ಆದರೆ, ಈ ಆರೋಪವನ್ನು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿರಾಕರಿಸಿದ್ದಾರೆ. ಬಿಲ್ ಗಳನ್ನು ತನ್ನ ಬಳಿ ಕಳುಹಿಸಿದ್ದು ಹೌದು, ಆದರೆ ಅದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಇದಕ್ಕೆ ಸಂಬಂಧಪಟ್ಟ ಕಡತದ ಮಾಹಿತಿಯು ಲೆಫ್ಟಿನೆಂಟ್ ಜನರಲ್ ಕಚೇರಿಯಿಂದ ಸೋರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.












Click it and Unblock the Notifications