ಭ್ರಷ್ಟಾಚಾರಿ ನಂಬರ್ ಒನ್ ಮೋದಿ ಹೇಳಿಕೆಗೆ ಆಯೋಗ ಕ್ಲೀನ್ ಚಿಟ್
ನವದೆಹಲಿ, ಮೇ 8: ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ನಂಬರ್ ಒನ್ ಎಂದು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಮೋದಿ, 'ಜೀವನದ ಕೊನೆಯ ಕ್ಷಣದವರೆಗೂ ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ ಒನ್ ಆಗಿದ್ದರು' ಎಂದು ಹೇಳಿದ್ದರು. ಮೋದಿ ಹೇಳಿಕೆ ವಿರೋಧಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿತ್ತು.
ಆದರೆ ಮೋದಿ ಪ್ರಚಾರ ಭಾಷಣದಲ್ಲಿ ಯಾವುದೇ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಆಯೋಗದ ಸಮಿತಿ ಅಭಿಪ್ರಾಯ ಪಟ್ಟಿದೆ. ಈಗಾಗಲೇ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕಿ ಸುಶ್ಮಿತಾ ದೇವ್ ಅರ್ಜಿ ಸಲ್ಲಿಸಿದ್ದಾರೆ.

ಆಯೋಗದಿಂದ ಕ್ಲೀನ್ ಚಿಟ್ ಸಿಗುವುದು ಖಾತ್ರಿಯಾಗಿದೆ. ಹೀಗಾಗಿ ಸುಪ್ರೀಂಕೋರ್ಟ್ ನೇರ ವಿಚಾರಣೆ ನಡೆಸಲಿ ಎಂದು ದೇವ್ ದಾಖಲಿಸಿದ್ದರು. ಈ ಅರ್ಜಿ ಸಲ್ಲಿಕೆಯಾದ ಬಳಿಕ ಆಯೋಗ ಕ್ಲೀನ್ ಚಿಟ್ ನೀಡಿದೆ.
ಭ್ರಷ್ಟಾಚಾರಿ ನಂಬರ್ ಒನ್ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದ್ದರೆ, ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳು ಟೀಕಿಸಿವೆ. ಹಾಲಿ ಪ್ರಧಾನಿಯನ್ನು ಚೋರ್ ಎಂದು ಕಾಂಗ್ರೆಸ್ ಸಂಬೋಧಿಸುತ್ತದೆ. ಆದರೆ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ಎಂದರೆ ಅವರಿಗೆ ಸಮಸ್ಯೆ ಏನು ಎಂದು ಬಿಜೆಪಿ ಪ್ರಶ್ನಿಸಿದೆ.
ಆದರೆ ಪ್ರಧಾನಿ ಹುದ್ದೆಯಲ್ಲಿ ಇದ್ದುಕೊಂಡು ಮಾಜಿ ಪ್ರಧಾನಿಯೊಬ್ಬರ ಮೇಲೆ ಈ ರೀತಿ ಹೇಳಿಕ ನೀಡುವುದು ಸೂಕ್ತವಲ್ಲ ಎಂದು ಪ್ರತಿಪಕ್ಷಗಳ ಅಭಿಪ್ರಾಯವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications