ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ರದ್ದು

|
Google Oneindia Kannada News

ನವದೆಹಲಿ, ಏಪ್ರಿಲ್ 16: ತಮಿಳುನಾಡಿನ ವೆಲ್ಲೂರಿನಲ್ಲಿ ಲೋಕಸಭಾ ಚುನಾವಣೆ ರದ್ದು ಮಾಡಲು ಸೋಮವಾರ ಚುನಾವಣೆ ಆಯೋಗ ನಿರ್ಧರಿಸಿದೆ. ಕೆಲ ದಿನಗಳ ಹಿಂದೆ ಡಿಎಂಕೆ ಅಭ್ಯರ್ಥಿಯ ಕಚೇರಿಯಲ್ಲಿ ಭಾರೀ ಮೊತ್ತವನ್ನು ವಶಪಡಿಸಿಕೊಂಡ ಅರೋಪದಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಇಲಾಖೆ ವರದಿ ಆಧಾರದಲ್ಲಿ ಆ ಜಿಲ್ಲೆಯ ಪೊಲೀಸರು ಆರೋಪಿ ಕದಿರ್ ಆನಂದ್ ಹಾಗೂ ಡಿಎಂಕೆ ಇಬ್ಬರು ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ವೆಲ್ಲೂರು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ರದ್ದು ಮಾಡಬೇಕು ಎಂಬ ಶಿಫಾರಸನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ ಎಂದು ಚುನಾವಣೆ ಆಯೋಗ ಹೇಳಿರುವುದಾಗಿ ಮೂಲಗಳು ಮಾಹಿತಿ ನೀಡಿವೆ.

ವೆಲ್ಲೂರಿನ ಗೋದಾಮಿನಲ್ಲಿ ಡಿಎಂಕೆ ನಾಯಕನಿಗೆ ಸೇರಿದ 9 ಕೋಟಿ ಐಟಿ ವಶಕ್ಕೆವೆಲ್ಲೂರಿನ ಗೋದಾಮಿನಲ್ಲಿ ಡಿಎಂಕೆ ನಾಯಕನಿಗೆ ಸೇರಿದ 9 ಕೋಟಿ ಐಟಿ ವಶಕ್ಕೆ

ನಾಮಪತ್ರದ ಜತೆಗೆ ಆನಂದ್ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಪ್ಪು ಮಾಹಿತಿ ನೀಡಿರುವ ಬಗ್ಗೆ ಜನ ಪ್ರತಿನಿಧಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಶ್ರೀನಿವಾಸನ್ ಹಾಗೂ ದಾಮೋದರನ್ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆ. ಡಿಎಂಕೆ ಹಿರಿಯ ನಾಯಕ ದುರೈ ಮುರುಗನ್ ಅವರ ಮಗನೇ ಈ ಆನಂದ್.

Election Commission

ಮಾರ್ಚ್ 30ನೇ ತಾರೀಕು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಹೆಚ್ಚುವರಿ ಹತ್ತೂವರೆ ಲಕ್ಷ ನಗದು ಪತ್ತೆಯಾಗಿತ್ತು. ಅದಾಗಿ ಎರಡು ದಿನಕ್ಕೆ ಅದೇ ಜಿಲ್ಲೆಯ ಡಿಎಂಕೆ ನಾಯಕನಿಗೆ ಸೇರಿದ ಸಿಮೆಂಟ್ ಗೋಡೌನ್ ನಲ್ಲಿ ಹನ್ನೊಂದೂವರೆ ಕೋಟಿ ಸಿಕ್ಕಿತ್ತು.

English summary
The Election Commission today decided to cancel the Lok Sabha election in Tamil Nadu's Vellore after a large sum of cash was allegedly seized from a DMK candidate's office a few days ago, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X