ಉಪರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಇಂದು ಅಧಿಸೂಚನೆ
ನವದೆಹಲಿ ಜು.5: ಆಗಸ್ಟ್ 6ರಂದು ನಿಗದಿ ಆಗಿರುವ ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕುರಿತು ಮಂಗಳವಾರ ಕೇಂದ್ರ ಚುನಾವಣೆ ಆಯೋಗ ಅಧಿಸೂಚನೆ ಹೊರಡಿಸಿದೆ. ಜು.19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಅಧಿಸೂಚನೆ ತಿಳಿಸಿದೆ.
ಪ್ರಸ್ತುತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ. ಈ ಸಂಬಂಧ ಆಗಸ್ಟ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಅಂದೆ ಮತ ಎಣಿಕೆ ಪ್ರಕ್ರಿಯೆ ಸಹ ಜರುಗಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಜು.19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜು.20ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯಲು ಜು.22ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಬಿಜೆಪಿಗೆ ಸ್ಪಷ್ಟ ಬಹುಮತ ಸಾಧ್ಯತೆ
ಈ ಉಪ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆ ಇದೆ. ನಾಮ ನಿರ್ದೇಶಿತ ಸದಸ್ಯರು, ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ಆದರೆ ಈವರೆಗೂ ಕಾಂಗ್ರೆಸ್, ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ಮುಂಬರಲಿರುವ ಉಪ ಚುನಾವಣೆಯ ಅಭ್ಯರ್ಥಿಗಳನ್ನು ಹೆಸರನ್ನು ಬಹಿರಂಗಪಡಿಸಿಲ್ಲ. ಈವಾರದಲ್ಲಿ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರು ಬಹಿರಂಗ ಪಡಿಸಬಹುದು ಎನ್ನಲಾಗಿದೆ.
ಉಪಾಧ್ಯಕ್ಷರ ಚುನಾವಣೆಯಲ್ಲಿ ಉಭಯ ಸದನಗಳ ಒಟ್ಟು 788 ಸದಸ್ಯರು ಒಳಗೊಂಡಿದೆ. ಎಲ್ಲಾ ಮತದಾರರು ಸಂಸತ್ತಿನ ಸದಸ್ಯರು ಆಗಿರುವುದರಿಂದ, ಪ್ರತಿ ಸಂಸದರ ಮತದ ಮೌಲ್ಯವು ಒಂದೇ ಆಗಿರುತ್ತದೆ ಎಂದು ಈ ಹಿಂದೆಯೇ ಚುನಾವಣೆ ಆಯೋಗ ಸ್ಪಷ್ಟಪಡಿಸಿದೆ. ಒಂದೇ ವರ್ಗಾವಣೆ ಮತದ ಮೂಲಕವೇ ಪ್ರಾತಿನಿಧ್ಯತಾ ವ್ಯವಸ್ಥೆಗನುಗುಣವಾಗಿ ಚುನಾವಣೆ ನಡೆಸಲಾಗುವುದು. ಮತದಾನವು ಕೂಡ ರಹಸ್ಯ ಮತದಾನದ ಮೂಲಕ ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ.

ಆಯೋಗದ ಎಚ್ಚರಿಕೆ
ಪ್ರಸ್ತುತ ಚುನಾವಣೆಯಲ್ಲಿ ಮುಕ್ತ ಮತದಾನದ ಪರಿಕಲ್ಪನೆಗೆ ಅವಕಾಶ ನೀಡಿಲ್ಲ. ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಇತರರಿಗೆ ಮತಪತ್ರ ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೇ ಮುಖ್ಯವಾಗಿ ರಾಜಕೀಯ ಪಕ್ಷಗಳು ಈ ವೇಳೆ ತಮ್ಮ ಸಂಸದರಿಗೆ ವಿಪ್ ಜಾರಿ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
ಉಪ ರಾಷ್ಟ್ರಪತಿ ಚುನಾವಣಾ ಒಬ್ಬ ಅಭ್ಯರ್ಥಿಯು ಗರಿಷ್ಠ ನಾಮಪತ್ರಗಳನ್ನು ಸಲ್ಲಿಕೆ ಮಾಡಬಹುದು. 15,000ರೂ. ಹಣವನ್ನು ಚುನಾವಣೆಯ ಭದ್ರತಾ ಠೇವಣಿ ರೂಪದಲ್ಲಿ ಇಡಬೇಕು ಎನ್ನಲಾಗಿದೆ.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications