ಕಾರ್ತಿ ಚಿದಂಬರಂ ವಿರುದ್ಧ ಹೊಸ ದೋಷಾರೋಪ ಸಾಧ್ಯತೆ
ನವದೆಹಲಿ, ಜೂನ್ 13: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಿ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸದಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ನಿರೀಕ್ಷೆಯಿದೆ.
ದೋಷಾರೋಪವನ್ನು ಮೊದಲೇ ಸಲ್ಲಿಸಬೇಕಿತ್ತು. ಆದರೆ, ಜಾರಿ ನಿರ್ದೇಶನಾಲಯದ ಕೆಲವು ಅಧಿಕಾರಿಗಳು ಪಿ. ಚಿದಂಬರಂ ಅವರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಪ್ರಕ್ರಿಯೆ ತಡವಾಗಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ದೋಷಾರೋಪ ಪಟ್ಟಿಯನ್ನು ಈ ಮೊದಲೇ ಸಲ್ಲಿಸಬೇಕಿತ್ತು. ಕೇಂದ್ರ ತನಿಖಾ ದಳದ ಕೆಲವು ಅಧಿಕಾರಿಗಳು ಚಿದಂಬರಂ ಅವರಿಗೆ ಸಹಾಯ ಮಾಡುತ್ತಿದ್ದಾರೆ.

ಕೆಲವು ಸಚಿವರೂ ಕೂಡ ಅವರಿಗೆ ನೆರವಾಗುತ್ತಿದ್ದರು. ಆದರೆ, ಪ್ರಧಾನಿ ಮೋದಿ ಅದಕ್ಕೆಲ್ಲ ಕಡಿವಾಣ ಹಾಕಿದ್ದಾರೆ. ತನಿಖೆಯಲ್ಲಿ ಯಾರ ಹಸ್ತಕ್ಷೇಪವನ್ನೂ ಉತ್ತೇಜಿಸದಂತೆ ಹಾಗೂ ಸ್ವಯಂ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಸಿಬಿಐ ಮತ್ತು ಇಡಿಗೆ ಸೂಚಿಸಲಾಗಿದೆ ಎಂದು ಸ್ವಾಮಿ ಹೇಳಿದ್ದಾರೆ.
ಕಾರ್ತಿ ವಿರುದ್ಧ ಚಾರ್ಜ್ಷೀಟ್ ಹಾಕಿದ ಬಳಿಕ ಮತ್ತೊಂದು ಚಾರ್ಜ್ಷೀಟ್ಅನ್ನು ಚಿದಂಬರಂ ಅವರ ಮೇಲೆ ಹಾಕಲಾಗುತ್ತದೆ. ಚಿದಂಬರಂ ಅವರು ಮತ್ತೆ ಇಡಿ ಎದುರು ಹಾಜರಾಗಬೇಕಾಗಲಿದೆ. ಅವರು ಸುಳ್ಳನ್ನು ಹೇಳುವುದನ್ನು ಮುಂದುವರಿಸಿದ್ದಾರೆ. ಆದರೆ, ಸಿಕ್ಕಿಬೀಳುತ್ತಾರೆ ಎಂದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಅವರನ್ನು ಫೆ. 28ರಂದು ಇಂಗ್ಲೆಂಡ್ನಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಬಂಧಿಸಲಾಗಿತ್ತು. ಸದ್ಯ, ಕಾರ್ತಿ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ 2007ರಲ್ಲಿ ಐಎನ್ಎಕ್ಸ್ ಮೀಡಿಯಾಕ್ಕೆ ವಿದೇಶದಿಂದ 305 ಕೋಟಿ ದೇಣಿಗೆ ಪಡೆದುಕೊಳ್ಳಲು ಎಫ್ಐಪಿಬಿ ಅನುಮೋದನೆ ಕೊಡಿಸಲು ಕಂಪೆನಿಯಿಂದ ಹಣ ಪಡೆದ ಆರೋಪವನ್ನು ಕಾರ್ತಿ ಎದುರಿಸುತ್ತಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications