ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಮೇಲೆ ಇಡಿ ದಾಳಿ
ನವದೆಹಲಿ, ಆಗಸ್ಟ್ 23: ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಆಸ್ತಿ ಮೇಲೆ ಇಡಿ ಅಧಿಕಾರಿಗಳು ಶುಕ್ರವಾರ(ಆಗಸ್ಟ್ 23)ರಂದು ದಾಳಿ ನಡೆಸಿದ್ದಾರೆ. ದೆಹಲಿ ಹಾಗೂ ಮುಂಬೈನಲ್ಲಿರುವ ಗೋಯಲ್ ಅವರ ಆಸ್ತಿ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
2014 ರಲ್ಲಿ ಜೆಟ್ ಪ್ರಿವಿಲೇಜ್ ಪ್ರೈವೇಟ್ ಲಿಮಿಟೆಡ್ನಲ್ಲಿ ಎತಿಹಾಡ್ ಷೇರುಗಳನ್ನು ಸ್ವಾಧೀನಪಡಿಸಿಕೊಂಡಾಗ ಜಾರಿ ನಿರ್ದೇಶನಾಲಯವು ವಿದೇಶಿ ನೇರ ತನಿಖೆ (ಎಫ್ಡಿಐ) ಉಲ್ಲಂಘನೆಯ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿತ್ತು.
Recommended Video
ಜೆಟ್ ಏರ್ವೇಸ್ ಈ ವರ್ಷದ ಆರಂಭದಲ್ಲಿ ತನ್ನ ಅಪಾರ ಸಾಲದಿಂದಾಗಿ ಅನಿರ್ದಿಷ್ಟವಾಗಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿ, ಸಾವಿರಾರು ಉದ್ಯೋಗಿಗಳಿಗೆ ಕೆಲಸವಿಲ್ಲದಂತೆ ಮಾಡಿದೆ.

ಮಾರ್ಚ್ನಲ್ಲಿ, ನರೇಶ್ ಗೋಯಲ್ ಮತ್ತು ಅವರ ಪತ್ನಿ 1992 ರಲ್ಲಿ 26 ವರ್ಷಗಳ ಹಿಂದೆ ಸ್ಥಾಪಿಸಿದ ಜೆಟ್ ಏರ್ವೇಸ್ ಮಂಡಳಿಗೆ ರಾಜೀನಾಮೆ ನೀಡಿದರು. ಅವರು ವಿಮಾನಯಾನ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
ವಿಮಾನಯಾನವು ರೂ. 8,000 ಕೋಟಿ ಸಾಲದಲ್ಲಿದೆ. ಇತ್ತೀಚಿನವರೆಗೂ, ವಿಮಾನಯಾನವು ಮಾರುಕಟ್ಟೆ ಪಾಲಿನಿಂದ ಭಾರತದ ಎರಡನೇ ಅತಿದೊಡ್ಡ ವಾಹಕವಾಗಿದೆ. ನಗದು ಕೊರತೆಯಿರುವ ವಿಮಾನಯಾನ ಸಂಸ್ಥೆ ತನ್ನ ಕಾರ್ಯಾಚರಣೆಯನ್ನು ಏಪ್ರಿಲ್ನಲ್ಲಿ ಸ್ಥಗಿತಗೊಳಿಸಿತು.
ಈ ಬಿಕ್ಕಟ್ಟು 20,000 ಉದ್ಯೋಗಗಳನ್ನು ಪಣಕ್ಕಿಟ್ಟಿದೆ ಮತ್ತು ಅವರಲ್ಲಿ ಹಲವರು ವೇತನ ಕಡಿತದೊಂದಿಗೆ ಇತರೆ ವಿಮಾನಯಾನ ಸಂಸ್ಥೆಗಳಲ್ಲಿ ಉದ್ಯೋಗ ಅರಸಿಕೊಂಡು ಹೋಗಿದ್ದಾರೆ.
ಸಿಬ್ಬಂದಿಗಳು ಕಂಪನಿಯ ಪುನರುಜ್ಜೀವನಕ್ಕೆ ಸರ್ಕಾರ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications