Breaking: ಸೋನಿಯಾಗಾಂಧಿ ವಿಚಾರಣೆ ಅಂತ್ಯ: ಮತ್ತೆ ಜುಲೈ 25ಕ್ಕೆ ಹಾಜರಾಗುವಂತೆ ಸಮನ್ಸ್
ನವದೆಹಲಿ ಜುಲೈ 21: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ ಜಾರಿ ಮಾಡಿದ್ದು, ಜುಲೈ 25ಕ್ಕೆ ಪುನಃ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರತ್ರಿಕೆ ಖರೀದಿ ಅವ್ಯವಹಾರ ಮತ್ತು ಹಣ ವರ್ಗಾವಣೆ ಆರೋಪದ ಹಿನ್ನೆಲೆ ಗುರುವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಮೂರು ಗಂಟೆಗಳ ವಿಚಾರಣೆ ಬಳಿ ಸೋನಿಯಾ ಗಾಂಧಿ ವಿಚಾರಣೆ ಅಂತ್ಯಗೊಂಡಿತು. ನಂತರ ಜುಲೈ 25ರಂದು ಮತ್ತೆ ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ ಜಾರಿ ಮಾಡಿತು.
ಗುರುವಾರ ಬೆಳಗ್ಗೆ 11ಗಂಟೆ ಹೊತ್ತಿಗೆ ದೆಹಲಿಯ ಇಡಿ ಅಧಿಕಾರಿಗಳ ಕಚೇರಿಗೆ ಸೋನಿಯಾ ಗಾಂಧಿ ಹಾಜರಾಗಿದ್ದರು. ಅಲ್ಲಿಂದ ನಿರಂತರವಾಗಿ ಮೂರು ಗಂಟೆಗಳ ಕಾಲ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿ ಮಧ್ಯಾಹ್ನ ಮನೆಗೆ ತೆರಳಿದರು. ಬೆಳಗ್ಗೆ ಇಡಿ ಕಚೇರಿ ಆಗಮಿಸುವುದರಿಂದ ಹಿಡಿದು ಮನೆಗೆ ಮರಳುವವರೆಗೂ ಸೋನಿಯಾಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಸಾಥ್ ನೀಡಿದರು.

ಇಡಿ ಸಮಸ್ಸ ಜಾರಿ ಮಾಡಿದನ್ನು ವಿರೋಧಿಸಿ ಕೇರಳ, ದೆಹಲಿ, ಬೆಂಗಳೂರು, ಚಂಢಿಗಡ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಂಢಿಗಡದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರ ಹಾಗೂ ಇಡಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಕೂಡಲೇ ಎಚ್ಚೆತ್ತ ಪೊಲೀಸ್ ಇಲಾಖೆ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ದಾಳಿ ಪ್ರಯೋಗ ಮಾಡಿದೆ. ಈ ಮೂಲಕ ಪ್ರತಿಭಟನೆ ನಿಯಂತ್ರಣಕ್ಕೆ ತರಲು ಪ್ರಯತ್ನಿಸಲಾಗಿದೆ.
ದಾಳಿ ವೇಳೆ ನೀರಿನ ರಭಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲೇ ಉರುಳಿ ಬಿದ್ದಿದ್ದಾರೆ. ನೀರಿಗೆ ತೊಯ್ದು ತೊಪ್ಪೆಯಾಗಿದ್ದಾರೆ. ಅದರಲ್ಲೂ ಪ್ರತಿಭಟನೆ ಕೈ ಬಿಡದೆ ಪುನಃ ಅಡ್ಡಲಾಗಿ ಹಾಕಿದ್ದ ಬ್ಯಾರಿಕೇಡ್ ವರೆಗೂ ಬಂದ ಸೋನಿಯಾ ಪರ ಘೋಷಣೆ ಮೊಳಗಿಸಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಪುನಃ ಸೋನಿಯಾ ಗಾಂಧಿಗೆ ಸಮನ್ಸ ನೀಡಿರುವ ಇಡಿ ಅಧಿಕಾರಿಗಳ ನಡೆಯನ್ನು ಖಂಡಿಸಿದ್ದಾರೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications