ಎಡಿಟರ್ಸ್ ಗಿಲ್ಡ್ನಿಂದ ಎಂಜೆ ಅಕ್ಬರ್, ತರುಣ್ ತೇಜ್ ಪಾಲ್ ಅಮಾನತು
ನವದೆಹಲಿ, ಡಿಸೆಂಬರ್ 12: ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಿರಿಯ ಪತ್ರಕರ್ತ, ಮಾಜಿ ಸಚಿವ ಎಂಜೆ ಅಕ್ಬರ್ ಮತ್ತು ತೆಹೆಲ್ಕಾ ಸಂಪಾದಕ ತರುಣ್ ತೇಜ್ ಪಾಲ್ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಅಮಾನತು ಮಾಡಿದೆ.
ಎಂಜೆ ಅಕ್ಬರ್ ಅವರು ತಮ್ಮ ಮೇಲೆ 'ಮೀಟೂ' ಆರೋಪ ಮಾಡಿರುವ ಪತ್ರಕರ್ತೆ ವಿರುದ್ಧ ಸಲ್ಲಿಸಿರುವ ಮಾನಹಾನಿ ದೂರು ಇತ್ಯರ್ಥವಾಗುವವರೆಗೂ ಅವರ ಅಮಾನತು ಜಾರಿಯಲ್ಲಿ ಇರಲಿದೆ.
ಅಕ್ಬರ್ ಅವರು ಸಂಪಾದಕರಾಗಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಅವರ ಮಾಜಿ ಸಹೋದ್ಯೋಗಿ ಪ್ರಿಯಾ ರಮಣಿ ಆರೋಪ ಮಾಡಿದ್ದರು. ಇದು ಬಾರಿ ವಿವಾದ ಸೃಷ್ಟಿಸಿತ್ತು. ಇದರಿಂದ ಕೇಂದ್ರದಲ್ಲಿ ಸಚಿವರಾಗಿದ್ದ ಅಕ್ಬರ್, ರಾಜೀನಾಮೆ ನೀಡಬೇಕಾಗಿತ್ತು.

ಬಳಿಕ ಅವರು ಪ್ರಿಯಾ ರಮಣಿ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು.
ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ತೆಹೆಲ್ಕಾ ಸಂಪಾದಕ ತರುಣ್ ತೇಜ್ ಪಾಲ್ ಅವರ ವಿರುದ್ಧವೂ ಇಜಿಐ ಇದೇ ರೀತಿ ನಿರ್ಧಾರ ತೆಗೆದುಕೊಂಡಿದೆ.

2013ರ ನವೆಂಬರ್ನಲ್ಲಿ ತಮ್ಮ ಕಿರಿಯ ಸಹೋದ್ಯೋಗಿಯೊಬ್ಬರ ಮೇಲೆ ತೇಜ್ ಪಾಲ್ ಅತ್ಯಾಚಾರ ನಡೆಸಿರುವ ಆರೋಪ ಎದುರಿಸುತ್ತಿದ್ದಾರೆ.
ಇಜಿಐ ಆರೋಪ ಎದುರಿಸುತ್ತಿರುವ ಪತ್ರಕರ್ತರ ಪಟ್ಟಿಯನ್ನು ಕಳೆದ ತಿಂಗಳು ಪ್ರಕಟಿಸಿತ್ತು. ಅದರಲ್ಲಿ ಅಕ್ಬರ್ ಮತ್ತು ತರುಣ್ ಅವರ ಹೆಸರೂ ಇತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications