ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಶಿಕ್ಷಿತ ಪ್ರಧಾನಿಯನ್ನು ಆರಿಸಿ: ಮೋದಿ ವಿರುದ್ಧ ಕೇಜ್ರಿ'ವಾರ್'

|
Google Oneindia Kannada News

ನವದೆಹಲಿ, ಫೆಬ್ರವರಿ 14: 'ಈ ಬಾರಿಯಾದರೂ ಸುಶಿಕ್ಷಿತ ಪ್ರಧಾನಿಯನ್ನು ಆರಿಸಿ. ಕೇವಲ 12ನೇ ತರಗತಿ ಓದಿದವರನ್ನು ಪ್ರಧಾನಿಯನ್ನಾಗಿ ಮಾಡಬೇಡಿ' ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಮೂಲಕ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ದೆಹಲಿಯಲ್ಲಿ ಭೇಟಿಯಾದ ವಿಪಕ್ಷಗಳ ನಾಯಕರು ಎನ್ ಡಿ ಎ ಸರ್ಕಾರದ ಮೇಲೆ ಹರಿಹಾಯ್ದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಎನ್ ಸಿಪಿಯ ಶರದ್ ಪವಾರ್, ಎಲ್ ಜೆಡಿಯ ಶರದ್ ಯಾದವ್ ಸೇರಿದಂತೆ ಗಣ್ಯರು ಸಭೆಯಲ್ಲಿ ಭಾಗಿಯಾಗಿದ್ದರು.

Elect an educated PM, Arvind Kejriwal mocks Modi

ಮೋದಿ ಸರ್ಕಾರ ಕಿತ್ತೆಸೆಯಲು ಗಾಂಧೀಜಿ ಬಳಿ ದೀದಿ ಪ್ರಾರ್ಥನೆ!ಮೋದಿ ಸರ್ಕಾರ ಕಿತ್ತೆಸೆಯಲು ಗಾಂಧೀಜಿ ಬಳಿ ದೀದಿ ಪ್ರಾರ್ಥನೆ!

ಈ ಸಂದರ್ಭದಲ್ಲಿ ಮಾತನಾಡಿದ ಕೇಜ್ರಿವಾಲ್, ಸುಶಿಕ್ಷಿತ ಪ್ರಧಾನಿಯನ್ನು ಆರಿಸಿ, ದೇಶವನ್ನು ಉಳಿಸಿ ಎಂದರು. ಅವರಿಗೆ ಜೊತೆಯಾದ ಮಮತಾ ಬ್ಯಾನರ್ಜಿ, "ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕರಾಳ ಸ್ಥಿತಿ ಉದ್ಭವಿಸಿದೆ. ರಾಷ್ಟ್ರ ಮಟ್ಟದಲ್ಲಿ ನಾವು ಕಾಂಗ್ರೆಸ್ ಜೊತೆಗೇ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ. ಅದನ್ನು ನಾನು ಹ್ಋದಯದಿಂದ ಹೇಳುತ್ತಿದ್ದೇನೆ. ಈ ದೇಶಕ್ಕಾಗಿ ನಾನು ನನ್ನ ಪ್ರಾಣ ತ್ಯಾಗ ಮಾಡಲು ಸಿದ್ಧನಿದ್ದೇನೆ" ಎಂದು ದೀದಿ ಭಾವುಕರಾಗಿ ಹೇಳಿದರು.

English summary
AAP president and Delhi Chief Minister Arvind Kejriwal said people should not repeat the mistake of making a “Class 12 pass out” as the Prime Minister, and should back an “educated” leader. He was speaking in Delhi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X