ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಸಿಬ್ಬಂದಿ ಕೂಡ ಮುಂಚೂಣಿ ಕಾರ್ಯಕರ್ತರು, ಶೀಘ್ರ ಕೊರೊನಾ ಲಸಿಕೆ ವಿತರಣೆ

|
Google Oneindia Kannada News

ನವದೆಹಲಿ,ಫೆಬ್ರವರಿ 26: ಚುನಾವಣಾ ಅಧಿಕಾರಿಗಳು ಕೂಡ ಮುಂಚೂಣಿ ಕಾರ್ಯಕರ್ತರು, ಹೀಗಾಗಿ ಅವರಿಗೂ ಶೀಘ್ರ ಕೊರೊನಾ ಲಸಿಕೆ ನೀಡಬೇಕು ಎಂದು ಚುನಾವಣಾ ಆಯೋಗ ಹೇಳಿದೆ.

ಭಾರತೀಯ ಚುನಾವಣಾ ಆಯೋಗವು ಇಂದು ತಮಿಳುನಾಡು,ಪುದುಚೇರಿ,ಅಸ್ಸಾಂ,ಪಶ್ಚಿಮ ಬಂಗಾಳ ಹಾಗೂ ಕೇರಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದೆ.

ಕರ್ನಾಟಕದ 4 ಕ್ಷೇತ್ರಗಳ ಉಪ ಚುನಾವಣೆ ಘೋಷಿಸಿದ ಆಯೋಗ ಕರ್ನಾಟಕದ 4 ಕ್ಷೇತ್ರಗಳ ಉಪ ಚುನಾವಣೆ ಘೋಷಿಸಿದ ಆಯೋಗ

ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಾತನಾಡಿ, ಚುನಾವಣೆ ಆರಂಭಕ್ಕೂ ಮುನ್ನ ಚುನಾವಣಾ ಅಧಿಕಾರಿಗಳಿಗೆ ಲಸಿಕೆ ವಿತರಣೆಯಾಗಬೇಕು ಅವರೂ ಕೂಡ ಮುಂಚೂಣಿ ಕಾರ್ಯಕರ್ತರು ಎಂದು ಹೇಳಿದ್ದಾರೆ.

Election Officials Are Frontline Workers, Will Be Vaccinated: Poll Body

ಕೊರೊನಾದಿಂದಾಗಿ ಮತದಾನವನ್ನು ಒಂದು ಗಂಟೆಗಳ ಕಾಲ ವಿಸ್ತರಿಸಲಾಗಿದೆ.
*ಅಭ್ಯರ್ಥಿ ಜತೆ ಇಬ್ಬರಿಗೆ ಮಾತ್ರ ತೆರಳಲು ಅವಕಾಶ
*ಮನೆ,ಮನೆ ಪ್ರಚಾರಕ್ಕೆ ಕೇವಲ ಐವರಿಗೆ ಮಾತ್ರ ಅವಕಾಶ
*ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ
*ನಾಮಪತ್ರ ಸಲ್ಲಿಸಲು ಎರಡು ವಾಹನಗಳಲ್ಲಿ ಮಾತ್ರ ಬರಬೇಕು
*ಮತದಾರರ ಭದ್ರತೆಗೆ ಆದ್ಯತೆ
*ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಎಸ್‌ಒಪಿ
*ಮತದಾನ ಅವಧಿ ಒಂದು ಗಂಟೆ ವಿಸ್ತರಣೆ
*ಶೇ.50ರಷ್ಟು ಮತಗಟ್ಟೆಗಳಲ್ಲಿ ವೋಟಿಂಗ್ ದೃಶ್ಯ ನೇರಪ್ರಸಾರ
* ಚುನಾವಣಾಧಿಕಾರಿ ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಬೇಕು
ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳಿಗೆ, ತಮಿಳುನಾಡಿನಲ್ಲಿ 234 ಸ್ಥಾನಗಳಿಗೆ, ಕೇರಳದಲ್ಲಿ 140 ಸ್ಥಾನಗಳಿಗೆ, ಅಸ್ಸಾಂನಲ್ಲಿ 126 ಸ್ಥಾನಗಳಿಗೆ, ಪುದುಚೇರಿಯಲ್ಲಿ 30 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ.

English summary
Election officials will be eligible for COVID-19 vaccination, the Election Commission said on Friday as it announced dates for assembly polls in Tamil Nadu, Kerala, West Bengal, Assam and Puducherry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X