ರಾಮನೂ ಒಮ್ಮೆ ಸೀತೆಯ ಬಗ್ಗೆ ಸಂಶಯಪಟ್ಟಿದ್ದ: ಕಾಂಗ್ರೆಸ್ ಸಂಸದ
ನವದೆಹಲಿ, ಆಗಸ್ಟ್ 10: "ಸೀತಾ ಮಾತೆಯಂತೆಯೇ ಮುಸ್ಲಿಂ ಮಹಿಳೆಯರೂ ನೋವನುಭವಿಸಿದ್ದಾರೆ. ಸೀತಾ ಮಾತೆಯ ಮೇಲೆಯೂ ಒಮ್ಮೆ ಶ್ರೀರಾಮ ಅನುಮಾನ ಪಟ್ಟಿರಲಿಲ್ಲವೇ?" ಎಂದು ಕಾಂಗ್ರೆಸ್ ಸಂಸದ ಹುಸೇನ್ ದಲ್ವಾಯಿ ಪ್ರಶ್ನಿಸಿ, ವಿವಾದ ಸೃಷ್ಟಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಂಡನೆಯಾಗಲಿರುವ ತ್ರಿವಳಿ ತಲಾಖ್ ಮಸೂದೆಯ ಕುರಿತು ಮಾತನಾಡಿದ ಅವರು, ಮುಸ್ಲಿಂ ಮಹಿಳೆಯರ ಹಕ್ಕುಗಳ ರಕ್ಷಣೆ ಮಾಡಲು ಎನ್ ಡಿಎ ಸರ್ಕಾರ ಬದ್ಧವಾಗಿಲ್ಲ ಎಂದರು.
"ಮೋದಿ ಸರ್ಕಾರಕ್ಕೆ ಮುಸ್ಲಿಂ ಮಹಿಳೆಯರ ಕಲ್ಯಾಣದ ಅಗತ್ಯವಿಲ್ಲ. ಮುಸ್ಲಿಂ ಮಹಿಳೆಯರಿಗೆ ಹೆಚ್ಚಿನ ಹಕ್ಕು ನೀಡುವುದಾಗಿ ಸರ್ಕಾರ ಹೇಳಿದೆ, ಅವರನ್ನು ಸಬಲೀಕರಣಗೊಳಿಸುವುದಾಗ ಬಡಾಯಿ ಕೊಚ್ಚಿಕೊಂಡಿದೆ. ಆದರೆ ಅವೆಲ್ಲವೂ ಆಶ್ವಾಸನೆಯಷ್ಟೆ" ಎಂದು ಅವರು ಟೀಕಿಸಿದ್ದಾರೆ.

ತ್ರಿವಳಿ ತಲಾಖ್ ಅನ್ನು 'ಅಪರಾಧ' ಎಂದು ಪರಿಗಣಿಸುವ ಕುರಿತಂತೆ ಮಾತನಾಡಿದ ಅವರು, 'ಕೇವಲ ಮುಸ್ಲಿಂ ಸಮುದಾಯದಲ್ಲಿ ಮಾತ್ರವಲ್ಲ. ಎಲ್ಲಾ ಸಮುದಾಯದಲ್ಲೂ ಮಹಿಳೆಯರನ್ನು ಕೀಳಾಗಿ ನೋಡಲಾಗಿದೆ. ಹಿಂದು, ಕ್ರೈಸ್ತ, ಸಿಕ್ಖ್ ಮುಂತಾದ ಎಲ್ಲಾ ಸಮುದಾಯದಲ್ಲೂ ಮಹಿಳೆಯರನ್ನು ಸರಿಯಾಗಿ ನಡೆಸಿಕೊಳ್ಳಲಾಗಿಲ್ಲ. ಇದು ಪುರುಷ ಪ್ರಧಾನ ಸಮಾಜ. ಭಗವಾನ್ ಶ್ರೀರಾಮನೇ ಸೀತಾಮಾತೆಯನ್ನು ಒಮ್ಮೆ ಅನುಮಾನದಲ್ಲಿ ನೋಡಿ, ಬಿಟ್ಟುಬಿಟ್ಟಿರಲಿಲ್ಲವೇ?' ಎಂದು ಅವರು ಪ್ರಶ್ನಿಸಿದ್ದಾರೆ.
ತ್ರಿವಳಿ ತಲಾಖ್ ಅನ್ನು ಅಪರಾಧ ಎಂದು ಪರಿಗಣಿಸುವ ಮಸೂದೆಯನ್ನು ಲೋಕಸಭೆ ಕಳೆದ ಡಿಸೆಂಬರ್ ನಲ್ಲೇ ಮಂಡಿಸಿದ್ದು, ರಾಜ್ಯಸಭೆಯಲ್ಲಿ ಇಂದು ಈ ಮಸೂದೆ ಮಂಡನೆಯಾಗಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications