ಗೋಪಿನಾಥ್ ಮುಂಡೆ ಸಾವಿನ ಪ್ರಕರಣ ತನಿಖೆಗೆ ಆಗ್ರಹ
ನವದೆಹಲಿ, ಜನವರಿ 22: ಮಾಜಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಸಾವಿನ ಪ್ರಕರಣದ ತನಿಖೆಗೆ ಆಗ್ರಹಿಸಲಾಗಿದೆ. ಇವಿಎಂನಲ್ಲಿರುವ ಹುಳುಕುಗಳ ಬಗ್ಗೆ ಗೋಪಿನಾಥ್ ಮುಂಡೆ ಅವರಿಗೆ ತಿಳಿದಿದ್ದರಿಂದ ಅವರನ್ನು ಸಾಯಿಸಲಾಯಿತು ಎಂದು ಲಂಡನ್ನಿನಲ್ಲಿ ಹ್ಯಾಕರ್ ಗಳು ಸ್ಫೋಟಕ ಸುದ್ದಿ ನೀಡಿದ್ದರು.
ಈ ಬಗ್ಗೆ ತಿಳಿದ ಗೋಪಿನಾಥ್ ಮುಂಡೆ ಅವರ ಸೋದರಳಿಯ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಧನಂಜಯ್ ಮುಂಡೆ ಅವರು, ಸುಪ್ರೀಂ ಕೋರ್ಟ್ ಅಥವಾ 'ರಾ' ಮೂಲಕ ಗೋಪಿನಾಥ್ ಮುಂಡೆ ಅವರ ಸಾವಿನ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
2014ರಲ್ಲಿ ಮೋದಿ ಸರ್ಕಾರ ಸ್ಥಾಪನೆಗೆ ಇವಿಎಂ ಹ್ಯಾಕ್ ಕಾರಣವಾಗಿತ್ತು. ಮೋದಿ ಅವರು ಅಧಿಕಾರ ವಹಿಸಿಕೊಂಡ ಕೆಲ ವಾರಗಳಲ್ಲಿ ಅಪಘಾತವೊಂದರಲ್ಲಿ ಗೋಪಿನಾಥ್ ಮೃತಪಟ್ಟಿದ್ದರು.

ಜೂನ್ 3, 2014ರಂದು ದೆಹಲಿಯಲ್ಲಿ ಕಾರು ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು. ಆದರೆ, ಗೋಪಿನಾಥ್ ಮುಂಡೆ ಅವರನ್ನು ಕೊಲೆ ಮಾಡಲಾಗಿದೆ ಎಂದು ಭಾರತೀಯ ಮೂಲದ ಸೈಬರ್ ತಜ್ಞ ಸೈಯದ್ ಶುಜಾ ಲಂಡನ್ ನಗರದಲ್ಲಿ ನಡೆದ ಹ್ಯಾಕಥಾನ್ ನಲ್ಲಿ ಭಾಗವಹಿಸಿ ಹೇಳಿದರು. 2014ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಯಂತ್ರಗಳನ್ನು ತಿರುಚಲಾಗಿದೆಯೆಂದು ಗೋಪಿನಾಥ್ ಮುಂಡೆ ಅವರಿಗೆ ತಿಳಿದಿತ್ತು. ಈ ಗುಟ್ಟನ್ನು ರಟ್ಟು ಮಾಡುತ್ತಾರೆ ಎಂಬ ಭಯದಿಂದ ಅವರನ್ನು ಕೊಲ್ಲಲಾಯಿತು ಎಂದು ಶುಜಾ ಹೇಳಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಮಹಾರಾಷ್ಟ್ರ ವಿಧಾನ ಪರಿಷತ್ ವಿಪಕ್ಷ ನಾಯಕ ಧನಂಜಯ್ ಮುಂಡೆ, "ಇದು ಜನ ನಾಯಕನೊಬ್ಬನ ಸಾವಿನ ಕುರಿತಾಗಿರುವುದರಿಂದ ಈ ವಿಚಾರಕ್ಕೆ ತಕ್ಷಣ ಗಮನ ನೀಡಬೇಕಿದೆ ಹಾಗೂ ತನಿಖೆಯಾಗಬೇಕಿದೆ'' ಎಂದು ಬರೆದಿದ್ದಾರೆ.
ಗೋಪಿನಾಥ್ ಮುಂಡೆ ಅವರ ಬಗ್ಗೆ ಪ್ರೀತಿ, ಅಭಿಮಾನವಿರುವವರು ಯಾವತ್ತೂ ಅವರ ಸಾವಿನ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ ಹಾಗೂ ಸೈಬರ್ ತಜ್ಞರು ಪತ್ರಿಕಾಗೋಷ್ಠಿಯಲ್ಲಿ ನೀಡುವ ಹೇಳಿಕೆಯೂ ಈ ಸಂಶಯಕ್ಕೆ ಪುಷ್ಟಿ ನೀಡುವಂತಿದೆ'' ಎಂದು ಧನಂಜಯ್ ಹೇಳಿದ್ದಾರೆ
ಗೋಪಿನಾಥ್ ಮುಂಡೆ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಎಫ್ಐಆರ್ ದಾಖಲಿಸಲು ಯೋಜಿಸಿದ್ದ ರಾಷ್ಟ್ರೀಯ ತನಿಖಾ ಏಜನ್ಸಿಯ ಅಧಿಕಾರಿ ತಂಝೀಲ್ ಅಹ್ಮದ್ ಅವರನ್ನು ಹತ್ಯೆಗೈಯ್ಯಲಾಗಿದೆ ಎಂದು ಸೈಬರ್ ತಜ್ಞ ಶುಜಾ ವಾದಿಸಿದ್ದರು
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications