ಗೆದ್ದರೂ ಮತಗಳನ್ನು ಕಳೆದುಕೊಂಡ ಕೇಜ್ರಿವಾಲ್, ಸಿಸೋಡಿಯಾ
Recommended Video
ನವದೆಹಲಿ, ಫೆಬ್ರವರಿ 12: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತೆ ಭರ್ಜರಿ ಗೆಲುವು ಸಾಧಿಸಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಒಂದು ಕುತೂಹಲಕಾರಿ ಲೆಕ್ಕಾಚಾರ ಕೂಡ ಹೊರಬಿದ್ದಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ ಎಲ್ಲಾ ಸಚಿವರು ಹಾಗೂ ಸ್ಪೀಕರ್ ಮರು ಆಯ್ಕೆಯಾಗಿದ್ದಾರೆ. ಆದರೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಮತ ಪ್ರಮಾಣದಲ್ಲಿ ಮಾತ್ರ ಇಳಿಕೆಯಾಗಿದೆ. ಉಳಿದೆಲ್ಲಾ ಸಚಿವರುಗಳು ಹಾಗೂ ಸ್ಪೀಕರ್ ಮರು ಆಯ್ಕೆಯ ಜೊತೆಗೆ ಮತಪ್ರಮಾಣವನ್ನೂ ಕೂಡ ಹೆಚ್ಚಿಸಿಕೊಂಡಿದ್ದಾರೆ.
ಆದರೆ ಇವರಿಬ್ಬರೂ ಅಗ್ರಗಣ್ಯ ನಾಯಕರು ಮಾತ್ರ ತಮ್ಮ ಮತ ಪ್ರಮಾಣವನ್ನು ಕಳೆದುಕೊಂಡಿರುವುದು ಆಶ್ಚರ್ಯ ಮೂಡಿಸಿದೆ. ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಶೇ.4.31 ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶೇ.3.04 ರಷ್ಟು ಮತಗಳನ್ನು ಕಳೆದ 2015ರ ವಿಧಾನಸಭಾ ಚುನಾವಣೆಗಿಂತ ಕಡಿಮೆ ಪಡೆದಿದ್ದಾರೆ.

ಇದಕ್ಕೆ ಪ್ರಮುಖ ಕಾರಣ ತಿಳಿದುಬಂದಿಲ್ಲ. ಆದರೆ ಇದರ ಜೊತೆಗೆ ಇವರ ಗೆಲುವಿನ ಅಂತರ ಕೂಡ ಕಡಿಮೆಯಾಗಿದೆ. ಅರವಿಂದ್ ಕೇಜ್ರಿವಾಲ್ ಮೊದಲ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರೂ ಗೆಲುವಿನ ಅಂತರ ಕಡಿಮೆಯಾಗಿದೆ.
ಇನ್ನೊಂದೆಡೆ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು 11 ನೇ ಹಂತದ ಮತ ಎಣಿಕೆ ವರೆಗೂ ಕೂಡ ಹಿನ್ನಡೆ ಅನುಭವಿಸಿದ್ದರು. ಆದರೆ ನಂತರದ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿಕೊಂಡು 3207 ಮತಗಳಿಂದ ಗೆಲುವ ಸಾಧಿಸಿದ್ದಾರೆ. ಅದೇ 2014ರಲ್ಲಿ 28,791 ಮತಗಳ ಅಂತರದಿಂದ ಸಿಸೋಡಿಯಾ ಗೆಲುವು ಸಾಧಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications