ಸರ್ಕಾರ ಉಳಿಸಿಕೊಳ್ಳಿ: ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಟಾಸ್ಕ್!
ನವದೆಹಲಿ, ಮೇ 20: ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳಲ್ಲಿ ಕೇಂದ್ರದಲ್ಲಿ ಮತ್ತೆ ಎನ್ ಡಿಎ ಸರ್ಕಾರವೇ ಅಸ್ತಿತ್ವಕ್ಕೆ ಬರುತ್ತದೆ ಎನ್ನಲಾಗಿದ್ದು, ಈ ಕುರಿತು ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ, ಕರ್ನಾಟಕ ರಾಜ್ಯವು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ನ ಶಕ್ತಿ ಕೇಂದ್ರವಾಗಿದೆ. ಆದ್ದರಿಂದ ನಿಮ್ಮ ನಿಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಮರೆತು ಸರ್ಕಾರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಗಾಂಧಿ ಸೂಚನೆ ನೀಡಿದ್ದಾರೆ.
ಎಕ್ಸಿಟ್ ಪೋಲ್ ಸತ್ಯವಾದರೆ ಕರ್ನಾಟಕ ಸರ್ಕಾರದ ಕತೆ ಏನು?
"ಈಗಾಗಲೇ ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಪ್ರಯತ್ನಿಸುತ್ತಿದೆ. ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಸತ್ಯವಾಗುವುದಿಲ್ಲ. ಈ ಬಾರಿಯೂ ಈ ಸಮಿಕ್ಷೆಗಳು ಉಲ್ಟಾ ಹೊಡೆಯಲಿವೆ" ಎಂದು ರಾಹುಲ್ ಗಾಂಧಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.
ಚಿಂತಾಮಣಿ ಎಕ್ಸಿಟ್ ಪೋಲ್: ದಕ್ಷಿಣದಲ್ಲಿ ಕರ್ನಾಟಕ ಬಿಟ್ಟರೆ ಬಿಜೆಪಿಗೆ ನೆಲೆ ಇಲ್ಲ!
ಪಕ್ಷದ ಶಾಸಕರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವುದು ನಿಮ್ಮ ಹೊಣೆ ಎಂದಿರುವ ರಾಹುಲ್ ಗಾಂಧಿ, ಕೇಂದ್ರದಲ್ಲಿ ಮಹಾಘಟಬಂಧನದ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತ' ಎಂದರು.