ನಕಲಿ ನೋಟು ಜಾಲ, ಐವರು ಪೊಲೀಸರ ಅತಿಥಿ
ನವದೆಹಲಿ,ಮಾರ್ಚ್,12: ಕೆಲವು ದಿನಗಳ ಹಿಂದೆ ತಮಿಳುನಾಡು, ಕೇರಳ ರಾಜ್ಯದಲ್ಲಿ ನಕಲಿ ನೋಟು ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ನಕಲಿ ನೋಟಿನ ಜಾಲದಲ್ಲಿ ಭಾಗಿಯಾಗಿದ್ದ ಐದು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ.
ಸುಶಾಂತ್ ಸಾಹು, ಉತ್ತಮ್ ಕುಮಾರ್ ಸಿನ್ಹಾ, ಪುರುಷೋತ್ತಮ್ ಕುಮಾರ್ ಕೇಸರಿ, ನಿಶ್ಫಾಲ್ ಮಾಂಡಲ್, ರಮೇಶ್ವರ್ ಸಾಹು ಇವರು ನಕಲಿ ನೋಟು ದಂಧೆಯಲ್ಲಿ ಸಿಕ್ಕಿ ಬಿದ್ದ ಆರೋಪಿಗಳು. ಇವರು ಉತ್ತರಖಾಂಡ, ಜಾರ್ಖಂಡ್, ಪಶ್ಚಿಮ ಬಂಗಾಳ, ಒರಿಸ್ಸಾ ಮೂಲದವರು ಎಂದು ತಿಳಿದು ಬಂದಿದೆ.[ಥ್ರೆಡ್ ಇಲ್ಲದೇ ಪ್ರಿಂಟ್: 1000 ರೂಪಾಯಿ ನೋಟಿನಲ್ಲಿ ಭಾರೀ ಎಡವಟ್ಟು!]

ಬಂಧಿತರಾದ ಈ ಐದು ಆರೋಪಿಗಳು ನಕಲಿ ನೋಟಿನ ದಂಧೆಯಲ್ಲಿ ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿದ್ದಾರೆ. ಇವರು ಮಹಾರಾಷ್ಟ್ರ ಹಾಗೂ ಗುಜರಾತ್ ಹೀಗೆ ಇನ್ನಿತರ ರಾಜ್ಯಗಳ ಜನರ ಸಹಾಯದಿಂದ ಈ ಕೃತ್ಯ ಎಸಗುತ್ತಿದ್ದಾರೆ ಎಂದು ತನಿಖಾ ದಳ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ.[ಈ ಎರಡು ಕ್ರಮ ಸಂಖ್ಯೆಯ ಸಾವಿರ ರೂಪಾಯಿ ನೋಟನ್ನು ಸ್ವೀಕರಿಸದಿರಿ!]
ನಕಲಿ ನೋಟು ಜಾಲ ಕಂಡು ಹಿಡಿಯಲು ಏನು ಕ್ರಮಗಳನ್ನು ಅನುಸರಿಸಬೇಕು?
* ಹಣಕಾಸು ಸಚಿವಾಲಯ, ಭಾರತೀಯ ರಿಸರ್ವ್ ಬ್ಯಾಂಕ್, ಬ್ಯಾಂಕ್ ಹೀಗೆ ಹಲವು ನಾಗರಿಕ ಸುರಕ್ಷಾ ಸಂಸ್ಥೆಗಳು ರಾಜ್ಯ ಹಾಗು ಕೇಂದ್ರದಲ್ಲಿ ಈ ಕೃತ್ಯದ ಬಗ್ಗೆ ಜಂಟಿಯಾಗಿ ಚರ್ಚೆ ನಡೆಸಿ ಮುಂದಿನ ಕ್ರಮದ ಬಗ್ಗೆ ಚಿಂತನೆ ನಡೆಸಬೇಕು.
* ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಗಡಿ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಿ ನಕಲಿ ನೋಟು ಜಾಲದ ಬಗ್ಗೆ ಪ್ರತಿಯೊಂದು ಕ್ಷಣಗಳಲ್ಲಿ ಕಟ್ಟೆಚ್ಚರ ವಹಿಸಬೇಕು.
* ಈ ನಕಲಿ ನೋಟಿನ ಜಾಲವನ್ನು ತಡೆಗಟ್ಟಲು ಬಾಂಗ್ಲಾದೇಶ ಮತ್ತು ಭಾರತ ನಡುವೆ ಸಹಿ ಒಪ್ಪಂಡ ಏರ್ಪಡಿಸಿಕೊಳ್ಳಬೇಕು.
* ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications