ಎಫ್ಎಒದ 75ನೇ ವಾರ್ಷಿಕೋತ್ಸವ: 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ ಮೋದಿ
ನವದೆಹಲಿ, ಅಕ್ಟೋಬರ್ 16: ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ)ಯ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 75ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು.
ಭಾರತೀಯ ನಾಗರಿಕ ಸೇವಾ ಅಧಿಕಾರಿ ಡಾ ಬಿನಯ್ ರಂಜನ್ ಸೇನ್ 1956-57ರಲ್ಲಿ ಎಫ್ಎಒದ ಮಹಾ ನಿರ್ದೇಶಕರಾಗಿದ್ದರು. ಪ್ರಸಕ್ತ ವರ್ಷ ನೊಬೆಲ್ ಶಾಂತಿ ಪುರಸ್ಕಾರ ಪಡೆದ ವಿಶ್ವ ಆಹಾರ ಕಾರ್ಯಕ್ರಮವನ್ನು ಅವರ ಸಮಯದಲ್ಲಿಯೇ ಆರಂಭಿಸಲಾಯಿತು.
2016ರಲ್ಲಿ ಅಂತಾರಾಷ್ಟ್ರೀಯ ಧಾನ್ಯಗಳ ವರ್ಷ ಮತ್ತು 2023ರಲ್ಲಿ ಅಂತಾರಾಷ್ಟ್ರೀಯ ನವಣೆ ವರ್ಷ ಎಂದು ಆಚರಿಸಬೇಕೆಂದು ಭಾರತ ಮಾಡಿರುವ ಪ್ರಸ್ತಾವನೆ ಹಿಂದೆ ಎಫ್ಎಒದ ಪಾತ್ರ ಸಾಕಷ್ಟಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೃಷಿ ಮತ್ತು ಪೋಷಣೆಗೆ ಸರ್ಕಾರವು ನೀಡಿದ ಹೆಚ್ಚಿನ ಆದ್ಯತೆಯನ್ನು ಇದು ಸೂಚಿಸುತ್ತದೆ. ಹಸಿವು ಮತ್ತು ಅಪೌಷ್ಟಿಕತೆಯನ್ನು ಸಂಪೂರ್ಣವಾಗಿ ತೊಡೆದುಹಾಕುವ ಸಂಕಲ್ಪದ ಸಾಕ್ಷಿ ಇಂದಿನ ಈ ಕಾರ್ಯಕ್ರಮ.
ಇಂದು ವಿಶ್ವ ಆಹಾರ ದಿನ, ಈ ನಿಟ್ಟಿನಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆ ಕಾರ್ಯಕ್ರಮ ಏರ್ಪಡಿಸಿತ್ತು. ಪ್ರಧಾನ ಮಂತ್ರಿ ಇದೇ ಸಂದರ್ಭದಲ್ಲಿ ದೇಶಕ್ಕೆ ಇತ್ತೀಚೆಗೆ ಅಭಿವೃದ್ಧಿಪಡಿಸಿದ ಜೈವಿಕ ವೈವಿಧ್ಯದ 8 ಪ್ರಬೇಧಗಳನ್ನು ಸಮರ್ಪಿಸಿದರು.
ಆಹಾರ ಮತ್ತು ಕೃಷಿ ಸಂಸ್ಥೆಯ ಪಯಣ ಸಮಾಜದ ಕೆಳಸ್ತರದವರು ಸಹ ಆರ್ಥಿಕವಾಗಿ ಬಲಿಷ್ಠವಾಗಬೇಕು, ಪೌಷ್ಟಿಕಯುಕ್ತ ಆಹಾರ ಸೇವಿಸಬೇಕು, ಹಸಿವಿನಿಂದ ಯಾರೂ ಬಳಲಬಾರದು ಎಂಬುದಾಗಿದೆ.
ಇಂದು ವಿಶ್ವ ಆಹಾರ ದಿನ. ಜೊತೆಗೆ ಜಗತ್ತಿನಾದ್ಯಂತ ಅಚರಿಸಲಾಗುವ ಬಹುಮುಖ್ಯ ದಿನ ಇಂದು. ಅಕ್ಟೋಬರ್ 16ರ ವಿಶ್ವ ಆಹಾರ ದಿನದ ಮಹತ್ವದ ಬಗ್ಗೆ ನಾವೆಲ್ಲರೂ ತಿಳಿದುಕೊಳ್ಳಲೇಬೇಕು. 1945ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಓ) ಅಕ್ಟೋಬರ್ 16ನ್ನು ವಿಶ್ವ ಆಹಾರ ದಿನವನ್ನಾಗಿ ಘೋಷಿಸಿತು.
ಅಂದಿನಿಂದ ಈವರೆಗೆ ಪ್ರತಿವರ್ಷ ಅಕ್ಟೋಬರ್ 16ನ್ನು ಅಂತರಾಷ್ಟ್ರೀಯ ಆಹಾರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತೀ ವರ್ಷ ಇದೇ ದಿನದಂದು ಹೊಸ ಸಂಗತಿಯೊಂದಿಗೆ ಆಹಾರ ದಿನವನ್ನು ಆಚರಿಸಲಾಗುತ್ತದೆ.
ವಿಶ್ವಸಂಸ್ಥೆಯ ಕ್ಯಾಲೆಂಡರ್ನಲ್ಲಿ ಅತೀ ಪ್ರಮುಖ ದಿನವೆನಿಸಿರುವುದು ಅಕ್ಟೋಬರ್ 16 ಅಂದರೆ ವಿಶ್ವ ಆಹಾರ ದಿನ. ಸರ್ಕಾರದ ಹೊಸ-ಹೊಸ ಕಾರ್ಯಕ್ರಮಗಳು, ವ್ಯವಹಾರಗಳು, ಎನ್ಜಿಓಗಳು, ಮಾಧ್ಯಮ, ಸಾರ್ವಜನಿಕರು ಹೀಗೆ ಎಲ್ಲರೂ ಒಟ್ಟುಗೂಡಿ ವಿಶ್ವ ಆಹಾರ ದಿನದಂದು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications