ಸಿಂಘು ಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೈತನ ದೇಹ ಪತ್ತೆ

ನವದೆಹಲಿ ನವೆಂಬರ್ 10: ದೆಹಲಿ ಸಮೀಪದ ಸಿಂಘು ಗಡಿಯಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತ ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತರನ್ನು ಪಂಜಾಬ್‌ನ ಫತೇಘರ್ ಸಾಹಿಬ್‌ನ ಅಮ್ರೋಹ್ ಜಿಲ್ಲೆಯ ನಿವಾಸಿ ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ.

ಗುರುಪ್ರೀತ್ ಸಿಂಗ್ ಸಿಧುಪುರದ ಭಾರತೀಯ ಕಿಸಾನ್ ಯೂನಿಯನ್‌ನ ಜಗಜಿತ್ ಸಿಂಗ್ ದಲ್ಲೆವಾಲ್ ಬಣದೊಂದಿಗೆ ಸಂಬಂಧ ಹೊಂದಿದ್ದರು. ಕುಂಡ್ಲಿ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಗುರುಪ್ರೀತ್ ಸಿಂಗ್ ಸಾವಿನ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸಾವಿನ ಹಿಂದಿನ ಕಾರಣವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಕಳೆದ ತಿಂಗಳು, ಲಖ್ಬೀರ್ ಸಿಂಗ್ ಎಂಬ ಕಾರ್ಮಿಕನ ಮೃತದೇಹವು ಸಿಂಘು ಗಡಿಯಲ್ಲಿ ಬ್ಯಾರಿಕೇಡ್‌ಗೆ ಕಟ್ಟಲ್ಪಟ್ಟಿದ್ದು, ಕೈಯನ್ನು ಕತ್ತರಿಸಿದ ಮತ್ತು ಹರಿತವಾದ ಆಯುಧಗಳಿಂದ ಉಂಟಾದ ಅನೇಕ ಗಾಯಗಳೊಂದಿಗೆ ಕಂಡುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ನಿಹಾಂಗ್ ಆದೇಶದ ಇಬ್ಬರು ಸದಸ್ಯರನ್ನು ಬಂಧಿಸಲಾಯಿತು ಮತ್ತು ಇನ್ನಿಬ್ಬರು ಸೋನಿಪತ್ ಪೊಲೀಸರ ಮುಂದೆ ಶರಣಾಗತರಾದರು.

 Farmer found hanging at Singhu border

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ಕಳೆದ ವರ್ಷ ನವೆಂಬರ್ 26 ರಿಂದ ಸಿಂಘು ಮತ್ತು ಟಿಕ್ರಿ ಸೇರಿದಂತೆ ಹಲವು ದೆಹಲಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಅವರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ರೈತರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿರುವ ಕೇಂದ್ರ, ಹೊಸ ಕಾನೂನುಗಳು ರೈತರ ಪರವಾಗಿದೆ ಎಂದು ಸಮರ್ಥಿಸಿಕೊಂಡಿದೆ. ಈವರೆಗೂ ಕೇಂದ್ರ ಸರ್ಕಾರ ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿಲ್ಲ.

ಇನ್ನೂ ರೈತರ ಸಾವಿನ ಸಂಖ್ಯೆಯನ್ನು ಇತ್ತೀಚಿನ ಅಧ್ಯಯನವೊಂದು ವರದಿ ಮಾಡಿದೆ. ಪಟಿಯಾಲದ ಪಂಜಾಬಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನಲ್ಲಿ ಒಟ್ಟಾರೆ ಪ್ರತಿಭಟನೆಯಲ್ಲಿ 600 ರೈತರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕಳೆದ 11 ತಿಂಗಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 600 ರೈತರಲ್ಲಿ 460 ರೈತರ ಡೇಟಾವನ್ನು ಆಧರಿಸಿ ಅಧ್ಯಯನವನ್ನು ಮಾಡಲಾಗಿದೆ. ಅಧ್ಯಯನ ನಡೆಸುವಾಗ ಮೃತರ ಕುಟುಂಬಗಳನ್ನು ಸಂಪರ್ಕಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರು ಸಣ್ಣ ಮತ್ತು ಅತಿ ಸಣ್ಣ ರೈತರು ಮತ್ತು ಭೂರಹಿತ ಕೃಷಿಕರು ಎಂದು ಅಧ್ಯಯನವು ಸೂಚಿಸುತ್ತದೆ.

ಅಧ್ಯಯನದಲ್ಲಿ ಪಂಜಾಬ್‌ನಲ್ಲಿ ಪ್ರದೇಶವಾರು ಭಾಗವಹಿಸುವಿಕೆ ಮತ್ತು ಸಾವುಗಳನ್ನು ಮ್ಯಾಪ್ ಮಾಡಲಾಯಿತು. ಇದರಲ್ಲಿ ಮಾಲ್ವಾ ಪ್ರದೇಶವು ಪ್ರತಿಭಟನೆಗಳಲ್ಲಿ ಗರಿಷ್ಠ ಭಾಗವಹಿಸುವಿಕೆ ಮತ್ತು ಗರಿಷ್ಠ ಸಾವುಗಳನ್ನು ಕಂಡಿದೆ ಎಂದು ಬಹಿರಂಗಪಡಿಸಿದೆ. ಅಧ್ಯಯನದ ಪ್ರಕಾರ, ಸಾವನ್ನಪ್ಪಿದ 80% ರೈತರು ಪಂಜಾಬ್‌ನ ಮಾಲ್ವಾ ಪ್ರದೇಶದವರು. ಇದು ತುಲನಾತ್ಮಕವಾಗಿ ಹೆಚ್ಚಿನ ಸರಾಸರಿ ಕೃಷಿ ಪ್ರದೇಶವನ್ನು ಹೊಂದಿದೆ. ನಂತರ ದೋಬಾ ಮತ್ತು ಮಜಾ ಪ್ರದೇಶಗಳು ಇವೆ. ದೋಬಾ ಮತ್ತು ಮಜಾ ಪ್ರದೇಶದ ಕೃಷಿ ಪ್ರತಿಭಟನೆಯ ಸಾವುಗಳ ಪಾಲು ಕ್ರಮವಾಗಿ 12.83% ಮತ್ತು 7.39%ರಷ್ಟಿದೆ.

ಅಧ್ಯಯನದ ಪ್ರಕಾರ, ನವೆಂಬರ್ 26 ರಂದು ಒಂದು ವರ್ಷವನ್ನು ಪೂರ್ಣಗೊಳಿಸುವ ಕೃಷಿ ಪ್ರತಿಭಟನೆಯ ಸಮಯದಲ್ಲಿ ಹವಾಮಾನ ಪರಿಸ್ಥಿತಿಗಳು ಗರಿಷ್ಠ ಸಂಖ್ಯೆಯ ಸಾವುಗಳಿಗೆ ಕಾರಣವಾಗಿವೆ. ಕಳೆದ ವರ್ಷದ ಅಂತ್ಯದ ವೇಳೆಗೆ ಚಳುವಳಿಯನ್ನು ಪ್ರಾರಂಭಿಸಿದಾಗ ಪ್ರತಿಭಟನಾಕಾರರು ತೀವ್ರವಾದ ಶೀತ ಅಲೆಯನ್ನು ತಡೆದುಕೊಳ್ಳಬೇಕಾಯಿತು. ನಂತರ, ಬೇಸಿಗೆಯಲ್ಲಿ ಸುಡುವ ಶಾಖದ ಅಲೆಯು ದೆಹಲಿಯ ಹೊರಗೆ ತಾತ್ಕಾಲಿಕ ಆಶ್ರಯದಲ್ಲಿ ವಾಸಿಸುವ ರೈತರಿಗೆ ಸಹ ಅಸಹನೀಯವಾಗಿತ್ತು ಎಂದು ಅಧ್ಯಯನವು ಹೇಳಿದೆ.

ಸಾಮಾನ್ಯ ಅಡುಗೆಮನೆಗಳಲ್ಲಿ ತಯಾರಿಸಿದ ಆಹಾರವು ಪೌಷ್ಟಿಕಾಂಶದ ಅವಶ್ಯಕತೆಗಳನ್ನು ಪೂರೈಸುತ್ತದೆ. ಇದು ರೈತರಿಗೆ ರೋಗನಿರೋಧಕ ಶಕ್ತಿಯನ್ನು ಸರಿಯಾದ ಮಟ್ಟದಲ್ಲಿ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಅವರನ್ನು ರೋಗಗಳಿಂದ ರಕ್ಷಿಸುತ್ತದೆ. ಆದರೆ ರೈತರಿಗೆ ಆಹಾರ ತಯಾರಿಸಿಕೊಳ್ಳಲು ಹವಮಾನ ಬದಲಾವಣೆ ಭಾರೀ ತೊಂದರೆ ನೀಡಿದೆ. ಪ್ರತಿಭಟನೆಯ ಸಮಯದಲ್ಲಿ ಭಾರೀ ಮಳೆ, ಸುಡುವ ಬಿಸಲ ಶಾಖ ಮತ್ತು ತೀವ್ರವಾದ ಶೀತ ಅಲೆಗಳಂತಹ ನೈಸರ್ಗಿಕ ಪರಿಸರಕ್ಕೆ ಮಾನವ ದೇಹ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದು ಅವರ ಮೇಲೆ ಪರಿಣಾಮ ಬೀರುವುದು ಸಹಜ. ಪ್ರತಿಭಟನೆಯು ಎರಡನೇ ವರ್ಷಕ್ಕೆ ಪ್ರವೇಶಿಸುವುದರೊಂದಿಗೆ ನೈಸರ್ಗಿಕ ಪರಿಸರಕ್ಕೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ಪ್ರತಿಭಟನಾಕಾರರಲ್ಲಿ ಸಾವಿನ ಪ್ರಮಾಣವು ಮತ್ತಷ್ಟು ಹೆಚ್ಚಾಗಬಹುದು ಎಂದು ಅದು ಹೇಳಿದೆ.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

Recommended Video

      Team India ಹೊಸ ರೂಪ ಪಡೆದುಕೊಂಡಿದೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+