Breaking: ದೆಹಲಿಗೆ ಬರುತ್ತಿದ್ದ ರೈತ ಮುಖಂಡ ಟಿಕಾಯತ್ ಪೊಲೀಸ್ ವಶಕ್ಕೆ
ನವದೆಹಲಿ, ಆಗಸ್ಟ್ 21: ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ವಿರುದ್ಧ ರೈತರು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಗೆ ಬರುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಪ್ರವೇಶಿಸುತ್ತಿದ್ದಾಗ ತನ್ನನ್ನು ಬಂಧಿಸಲಾಯಿತು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಟ್ವೀಟ್ ಮಾಡಿದ್ದಾರೆ. ದೆಹಲಿ ಪೊಲೀಸರು ಕೇಂದ್ರ ಸರಕಾರದ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ" ಎಂದು ಆಕ್ರೋಶ ಹೊರಹಾಕಿದ್ದಾರೆ.
"ಸರ್ಕಾರದ ಆದೇಶದ ಮೇರೆಗೆ ಕೆಲಸ ಮಾಡುತ್ತಿರುವ ದೆಹಲಿ ಪೊಲೀಸರು ರೈತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಬಂಧನ ಹೊಸ ಕ್ರಾಂತಿಯನ್ನು ಉಂಡು ಮಾಡಲಿದೆ. ಕೊನೆಯ ಉಸಿರು ಇರುವವರೆಗೂ ಈ ಹೋರಾಟ ಮುಂದುವರಿಯಲಿದೆ. ನಾವು ನಿಲ್ಲುವುದಿಲ್ಲ, ನಾವು ತಲೆಬಾಗುವುದಿಲ್ಲ" ಎಂದು ಟಿಕಾಯತ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಪೊಲೀಸ್ ಠಾಣೆಯಲ್ಲಿನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ದೇಶದಲ್ಲಿ ನಿರುದ್ಯೋಗದ ವಿರುದ್ಧ ರೈತರು ಜಂತರ್ ಮಂತರ್ನಲ್ಲಿ ಸೋಮವಾರ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರ ಆಶಿಶ್ ವಿರುದ್ಧ ಪ್ರತಿಭಟನೆ ನಡೆಸಿದ ಕೆಲವು ದಿನಗಳ ನಂತರ ಸೋಮವಾರ ದೆಹಲಿಯಲ್ಲಿಯೂ ಪ್ರತಿಭಟನೆ ನಡೆಯಲಿದೆ. ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಬರುತ್ತಿದ್ದರು.

ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಗೋಪಾಲ್ ರೈ ಅವರು ಟಿಕಾಯತ್ ಬಂಧನವನ್ನು ಖಂಡಿಸಿ, ಟ್ವಿಟರ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. "ರೈತ ನಾಯಕ ರಾಕೇಶ್ ಟಿಕಾಯತ್ ಅವರು ನಿರುದ್ಯೋಗದ ವಿರುದ್ಧದ ಆಂದೋಲನಕ್ಕೆ ತೆರಳುತ್ತಿದ್ದರು. ಆದರೆ, ಗಡಿಯಲ್ಲಿಯೇ ಪೊಲೀಸರು ಅವರನ್ನು ತಡೆದರು. ಇದು ಅತ್ಯಂತ ಹೇಯ ಕೃತ್ಯವಾಗಿದೆ" ಎಂದು ಖಂಡಿಸಿದ್ದಾರೆ.
ಸೋಮವಾರದಂದು ಜಂತರ್ ಮಂತರ್ನಲ್ಲಿ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಇತರ ಸಂಘಟನೆಗಳು ಮಹಾಪಂಚಾಯತ್ ಆಯೋಜಿಸಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಟಿಕ್ರಿ ಗಡಿ, ಪ್ರಮುಖ ವೃತ್ತಗಳು, ರೈಲ್ವೆ ಹಳಿಗಳು ಮತ್ತು ಮೆಟ್ರೋ ನಿಲ್ದಾಣಗಳ ಬಳಿ ಭದ್ರತೆ ನಿಯೋಜಿಸಲಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications