ಕೊನೆಗೂ ಭಾರತಕ್ಕೆ ತೆರೆದುಕೊಂಡ ಪಾಕಿಸ್ತಾನದ ಏರೋಸ್ಪೇಸ್
ನವದೆಹಲಿ, ಜುಲೈ 16: ಬಾಲಕೋಟ್ ಸರ್ಜಿಕಲ್ ಸ್ಟ್ರೈಕ್ ಬಳಿಕ ನಿರ್ಬಂಧಿಸಲಾಗಿದ್ದ ಪಾಕಿಸ್ತಾನ ವೈಮಾನಿಕ ವಲಯ ಬಳಕೆಯನ್ನು ಇಂದು ಬೆಳಗ್ಗೆಯಿಂದ ಮತ್ತೆ ಪುನರಾರಂಭಿಸಲಾಗಿದೆ.
ಪಾಕಿಸ್ತಾನದ ಮೇಲೆ ಭಾರತ ಇನ್ನಷ್ಟು ವೈಮಾನಿಕ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನುವ ನಿರೀಕ್ಷೆಯಿಂದ ಪಾಕಿಸ್ತಾನ ಸರ್ಕಾರವು ಏರೋಸ್ಪೇಸ್ ಬಳಕೆಯನ್ನು ನಿರ್ಬಂಧಿಸಿತ್ತು.
ಇದರಿಂದ ಪಾಕಿಸ್ತಾನ ಹಾಗೂ ಇತರೆ ದೇಶಗಳ ನಾಗರಿಕ ವಿಮಾನಯಾನ ಹಾರಾಟ ಕೂಡ ಪಾಕಿಸ್ತಾನದ ಏರೋಸ್ಪೇಸ್ನಲ್ಲಿ ರದ್ದಾಗಿತ್ತು.

ಸರ್ಜಿಕಲ್ ಸ್ಟ್ರೈಕ್ ನಡೆದ ನಾಲ್ಕು ತಿಂಗಳ ನಂತರ ಪಾಕಿಸ್ತಾನ ಸೇನೆ ಭಯದಿಂದ ಹೊರ ಬಂದಿರುವ ಲಕ್ಷಣ ಗೋಚರಿಸಿದ್ದು ಕೊನೆಗೂ ನಾಗರಿಕ ವಿಮಾನಗಳ ಬಳಕೆಗೆ ತನ್ನ ಏರೋಸ್ಪೇಸನ್ನು ತೆರೆದುಕೊಂಡಿದೆ.
ಭಾರತೀಯ ವಿಮಾನಗಳು ಕೂಡ ಈಗ ಪಾಕಿಸ್ತಾನದ ಏರೋಸ್ಪೇಸ್ನಲ್ಲಿ ಹಾರಾಡಬಹುದಾಗಿದೆ. ಕಳೆದ ತಿಂಗಳು ಕಿರ್ಗಿಸ್ತಾನದಲ್ಲಿ ನಡೆದ ಶಾಂಗೈ ಸರ್ಕಾರ ಒಕ್ಕೂಟ ಸಭೆಯಲ್ಲಿ ಭಾಗವಹಿಸಲು ಮೋದಿ ತೆರಳುವಾಗ ಪಾಕಿಸ್ತಾನ ಬದಲಿಗೆ ಬೇರೆ ಮಾರ್ಗವನ್ನು ಬಳಸಿದ್ದರು.
ಭಾರತ ಮನವಿ ಸಲ್ಲಿಸಿದರೆ ಪ್ರಧಾನಿ ಮೋದಿ ವಿಮಾನ ಹಾರಾಟಕ್ಕೆ ಅವಕಾಶ ಮಾಡಿಕೊಡುವುದಾಗಿ ಪಾಕಿಸ್ತಾನ ಹೇಳಿತ್ತು. ಆದರೆ ಭಾರತ ಯಾವುದೇ ಮನವಿ ಸಲ್ಲಿಸಿರಲಿಲ್ಲ.
ಇದೇ ರೀತಿ ಭಾರತವು ಪಾಕಿಸ್ತಾನದ ವೈಮಾನಿಕ ಹಾರಾಟದ ಮೇಲೆ ಹೇರಿದ್ದ ನಿರ್ಬಂಧವನ್ನು ಮೇ 31ರಂದು ತೆರವುಗೊಳಿಸಿತ್ತು.ಈ ನಿರ್ಬಂಧದಿಂದ ಭಾರತಕ್ಕೆ ಜುಲೈ 2ರವರೆಗೆ 491 ಕೋಟಿ ರೂ ನಷ್ಟ ಉಂಟಾಗಿತ್ತು. ಸ್ಪೈಸ್ಜೆಟ್, ಇಂಡಿಗೋ, ಗೋ ಏರ್ಗೆ 30.73 ಕೋಟಿ , 25.1 ಕೋಟಿ, 2.1ಕೋಟಿ ರೂ ನಷ್ಟವಾಗಿತ್ತು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications