ಇಂದು ಸಂಜೆ 4ಕ್ಕೆ ನಿರ್ಮಲಾ ಸೀತಾರಾಮನ್ 2ನೇ ಸುದ್ದಿಗೋಷ್ಠಿ

ದೆಹಲಿ, ಮೇ 14: ಕೇಂದ್ರ ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಪ್ರಧಾನಿ ಮೋದಿ ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್‌ಗೆ ಸಂಬಂಧಿಸಿದಂತೆ ಎರಡನೇ ಹಂತ ಯೋಜನೆಗಳನ್ನು ಪ್ರಕಟಿಸುವ ಉದ್ದೇಶದಿಂದ ನಿರ್ಮಲಾ ಅವರು ಇಂದು ಪ್ರೆಸ್‌ಮೀಟ್ ಹಮ್ಮಿಕೊಂಡಿದ್ದಾರೆ.

Finance Minister Nirmala Sitharaman to Address Press Conference at 4 PM Today

ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 20 ಲಕ್ಷ ಕೋಟಿ ಪ್ಯಾಕೇಜ್‌ಗೆ ಸಂಬಂಧಿಸಿದಂತೆ ಮೊದಲ ಹಂತದ ಯೋಜನೆಗಳನ್ನು ಘೋಷಣೆ ಮಾಡಿದ್ದರು.

ಮೋದಿ ಘೋಷಣೆ ಮಾಡಿರುವ ಈ ಪ್ಯಾಕೇಜ್ ಆರ್ಥಿಕವಾಗಿ ಚೈತನ್ಯ ತುಂಬಲಿದೆ ಮತ್ತು ವಿವಿಧ ಕ್ಷೇತ್ರಗಳಿಗೆ ನೆರವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.

* ಎಂ.ಎಸ್.ಎಂ.ಇ ಗಳಿಗೆ (ಅತಿ ಸಣ್ಣ, ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕೆ) ಸಂಬಂಧಿಸಿದಂತೆ 6 ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. 3 ಲಕ್ಷ ಬ್ಯಾಂಕ್ ಸಾಲ, ಸಾಲ ಮರುಪಾವಾತಿಗೆ 4 ವರ್ಷ ಕಾಲಾವಕಾಶ, ಗ್ಲೋಬಲ್ ಟೆಂಟರ್‌ನಲ್ಲಿ ಸಣ್ಣ ಕೈಗಾರಿಕೆಗಳಿಗೆ ಆಧ್ಯತೆ ನೀಡುವುದು.

* ನೌಕರರು ಮತ್ತು ಉದ್ಯಮಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ 2500 ಕೋಟಿ ಇ.ಪಿ.ಎಫ್ ಸಪೋರ್ಟ್.
* ಐಟಿ ರಿಟರ್ನ್ಸ್ ಸಲ್ಲಿಕೆಗೆ ನವೆಂಬರ್ 30, 2020 ರವರೆಗೆ ಗಡುವು ವಿಸ್ತರಣೆ ಮಾಡಲಾಗಿದೆ.
* ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ 45 ಸಾವಿರ ಕೋಟಿ ರೂಪಾಯಿ ಸಾಲ.
* ಜನ್ ಧನ್ ಅಕೌಂಟ್ ಹೊಂದಿರುವ 20 ಕೋಟಿ ಮಹಿಳೆಯರಿಗೆ ಮುಂದಿನ ಮೂರು ತಿಂಗಳ ಕಾಲ, ಪ್ರತಿ ತಿಂಗಳು 500 ರೂಪಾಯಿ ಸಿಗಲಿದೆ.
* ಮುಂದಿನ ಮೂರು ತಿಂಗಳು 8 ಕೋಟಿ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+