ಡ್ರೆಸ್ ಕೋಡ್ ಹೇಳಿಕೆ ವಿವಾದ: ಯೇಸುದಾಸ್ ವಿರುದ್ಧ ಎಫ್ ಐಆರ್
ನವದೆಹಲಿ, ಅ.5: ಮಹಿಳೆಯರು ಜೀನ್ಸ್ ಬಟ್ಟೆ ಧರಿಸಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿರಿಯ ಗಾಯಕ, ಪದ್ಮವಿಭೂಷಣಾ ಕೆ.ಜೆ ಯೇಸುದಾಸ್(74) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬ ಸುದ್ದಿ ಬಂದಿದೆ. ಮಹಿಳಾ ಆಯೋಗ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಮಹಿಳೆಯರು ಜೀನ್ಸ್ ತೊಡಬಾರದು, ಅದು ನಮ್ಮ ಭಾರತೀಯ ಸಂಸ್ಕೃತಿಗೆ ವಿರುದ್ಧವಾದುದು ಎಂದು ಕಳೆದ ಗುರುವಾರದಂದು ಸಂಗೀತ ದಿಗ್ಗಜ, ಗಾಯಕ ಕೆ.ಜೆ. ಯೇಸುದಾಸ್ ಅವರು ಹೇಳಿಕೆ ನೀಡಿದ್ದರು.
"ಮಹಿಳೆಯರು ಜೀನ್ಸ್ ಧರಿಸಿ ಇತರರಿಗೆ ತೊಂದರೆ ಕೊಡಬಾರದು. ಏನೇನು ಕವರ್ ಆಗಿರಬೇಕೋ ಅದೆಲ್ಲ ಕವರ್ ಆಗಿರಬೇಕು" ಎಂದು ಹೇಳಿರುವುದು ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಲಂ ಕೆಂಗಣ್ಣಿಗೆ ಗುರಿಯಾಗಿದೆ. [ಮಹಿಳೆ ಜೀನ್ಸ್ ತೊಟ್ಟು ತೊಂದರೆ ಕೊಡಬಾರದು]

ಯೇಸುದಾಸ್ರಂಥ ಮೇರು ವ್ಯಕ್ತಿಗಳು ಅಂಥ ಹೇಳಿಕೆ ನೀಡಿದ್ದು ಸರಿಯಲ್ಲ. ಅದು ಅವರ ವೈಯಕ್ತಿಕ ನಿಲುವೇ ಆಗಿರಬಹುದು. ಕಾನೂನು ಬದ್ಧವಾಗಿ ಯೇಸುದಾಸ್ ಹೇಳಿಕೆಯಲ್ಲಿ ಆಕ್ಷೇಪ ಇರದಿದ್ದರೂ ನೈತಿಕವಾಗಿ ಸರಿಯಲ್ಲ ಎಂದು ಲಲಿತಾ ಕುಮಾರಮಂಗಲಂ ಅವರು ಹೇಳಿದ್ದಾರೆ.
ಯೇಸುದಾಸ್ ಅವರ ಹೇಳಿಕೆಯನ್ನು ತಿರುವನಂತಪುರಂನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಹೇಳಿಕೆ ಮಹಿಳಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಬಿಂದು ಕೃಷ್ಣ ಟೀಕಿಸಿದ್ದಾರೆ.
ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳನ್ನು ಗಳಿಸಿರುವ ಕೆಜೆ ಯೇಸುದಾಸ್ ಅವರು ಹಲವಾರು ಪ್ರಮುಖ ಹಿಂದೂ ದೇಗುಲಗಳ ಆಸ್ಥಾನ ಕಲಾವಿದರಾಗಿ ಕೂಡಾ ಸಂಗೀತ ಸೇವೆ ಸಲ್ಲಿಸಿದ್ದಾರೆ. ಜನಪ್ರಿಯ ಗಾಯಕ ಕೆಜೆ ಯೇಸುದಾಸ್ ಅವರಿಗೆ ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇಗುಲಕ್ಕೆ ಪ್ರವೇಶ ನಿರಾಕರಿಸಲಾಗಿತ್ತು. ಯೇಸುದಾಸ್ ದೇಗುಲ ಪ್ರವೇಶ ನಿರಾಕರಿಸುವವರೂ ಕೂಡಾ ಅವರು ಗುರುವಾಯೂರಪ್ಪನ್ ಕುರಿತು ಹಾಡಿದ ಹಾಡುಗಳನ್ನು ಮೆಚ್ಚಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications