ಕೊರೊನಾ ಸೋಂಕಿನಿಂದ ಎನ್ಎಸ್ಜಿ ಅಧಿಕಾರಿ ಸಾವು
ನವದೆಹಲಿ, ಮೇ 05: ಭಯೋತ್ಪಾದನಾ ನಿಗ್ರಹ ಕಮಾಂಡೋ ಪಡೆ ಎನ್ಜಿಸಿಯಲ್ಲಿ ಮೊದಲ ಕೊರೊನಾ ಸಂಬಂಧಿತ ಸಾವು ಸಂಭವಿಸಿದೆ. ನ್ಯಾಷನಲ್ ಸೆಕ್ಯುರಿಟಿ ಗಾರ್ಡ್ (ಎನ್ಎಸ್ ಜಿ)ಯ ಅಧಿಕಾರಿಯೊಬ್ಬರು ಕೋವಿಡ್-19 ನಿಂದ ಮೃತಪಟ್ಟಿದ್ದಾರೆ.
ಗ್ರೂಪ್ ಕಮಾಂಡರ್ (ಕೋ-ಆರ್ಡಿನೇಷನ್) ಬಿ.ಕೆ. ಝಾ (53) ಅವರನ್ನು ಗ್ರೇಟರ್ ನೋಯ್ಡಾದ ಕೇಂದ್ರ ಸೇನಾ ಪೊಲೀಸ್ ಪಡೆಗಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೋನಾ ಸೋಂಕು ತೀವ್ರವಾದ ಪರಿಣಾಮ ಮೇ 05 ರಂದು ಅಧಿಕಾರಿ ಸಾವನ್ನಪ್ಪಿದ್ದಾರೆ ಎಂದು ಎನ್ಎಸ್ ಜಿ ಹೇಳಿದೆ.
ಬಿಎಸ್ಎಫ್ ನಿಂದ 2018 ರಲ್ಲಿ ಅವರನ್ನು ಎನ್ಎಸ್ ಜಿಗೆ ನಿಯುಕ್ತಿಗೊಳಿಸಲಾಗಿತ್ತು. ಇದಕ್ಕೂ ಮುನ್ನ ಝಾ ಅವರು ಬಿಎಸ್ಎಫ್ ಮಹಾನಿರ್ದೇಶಕರ ಪ್ರಧಾನ ಸಿಬ್ಬಂದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಎನ್ ಎಸ್ ಜಿ ವ್ಯಾಪ್ತಿಯಲ್ಲಿ ವರದಿಯಾಗಿರುವ ಮೊದಲ ಸಾವು ಇದಾಗಿದೆ. ಈ ಅಧಿಕಾರಿ ಎನ್ ಎಸ್ ಜಿ ಪಡೆಯ ಆಡಳಿತ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಯಾಚರಣೆಯ ವಿಭಾಗದಲ್ಲಿ ಇರಲಿಲ್ಲ ಎಂದು ಎನ್ಎಸ್ ಜಿ ಸ್ಪಷ್ಟನೆ ನೀಡಿದೆ. ಬಿಹಾರ ಮೂಲದವರಾದ ಝಾ, 1993 ರ ಬ್ಯಾಚ್ ನ ಬಿಎಸ್ಎಫ್ ಕೇಡರ್ ನ ಅಧಿಕಾರಿಯಾಗಿದ್ದರು.
ಎನ್ಎಸ್ ಜಿ ಹಾಗೂ ಎನ್ ಡಿಆರ್ ಎಫ್ ನಲ್ಲಿ ಒಟ್ಟು 66,000 ಕೋವಿಡ್-19 ಪ್ರಕರಾಣಗಳಿದ್ದು, 7,900 ಸಕ್ರಿಯ ಪ್ರಕರಣಗಳಿವೆ. ಕೋವಿಡ್-19 ನಿಂದ ಈ ವರೆಗೂ 248 ಸಾವುಗಳು ಸಂಭವಿಸಿವೆ.
ಎರಡೂ ಪಡೆಗಳೂ ಝಾ ಅವರ ಸಾವಿಗೆ ಸಂತಾಪ ಸೂಚಿಸಿವೆ. ಎನ್ಎಸ್ ಜಿ ಅಂಕಿ-ಅಂಶಗಳ ಪ್ರಕಾರ ತನ್ನ ವ್ಯಾಪ್ತಿಯಲ್ಲಿ ಈ ವರೆಗೂ 430 ಕೋವಿಡ್-19 ಪಾಸಿಟಿವ್ ಪ್ರಕರಣಗಳನ್ನು ಹೊಂದಿತ್ತು ಈ ಪೈಕಿ 59 ಸಕ್ರಿಯ ಪ್ರಕರಣಗಳಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications