ದೆಹಲಿಯ ಕೆಂಪು ಕೋಟೆ ಮೇಲೆ ಹಾರಿದ್ದು ಸಿಖ್ಖರ ಧಾರ್ಮಿಕ ಧ್ವಜ
ನವದೆಹಲಿ, ಜನವರಿ 26: ದೇಶದ ರಾಜಧಾನಿಯಲ್ಲಿ ಗಣರಾಜ್ಯೋತ್ಸವದ ಪರೇಡ್ ನಂತರ ನಿಯೋಜನೆಗೊಂಡಿದ್ದ ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ಗಲಭೆ ಉಂಟಾಗಿದ್ದು, ಬ್ಯಾರಿಕೇಡ್ ಗಳನ್ನು ಒಡೆದು ನಗರದ ಒಳನುಗ್ಗಿದ ರೈತರು ಕೆಂಪು ಕೋಟೆಯಲ್ಲಿ ಅಂತಿಮವಾಗಿ ಬಾವುಟ ಹಾರಿಸಿದ್ದರು.
ಆದರೆ ಅವರು ಹಾರಿಸಿದ್ದ ಧ್ವಜ ರಾಷ್ಟ್ರದ ತ್ರಿವರ್ಣ ಧ್ವಜವಲ್ಲದೇ ಬೇರೆಯಾಗಿದ್ದುದು ಆಕ್ರೋಶಕ್ಕೆ ಕಾರಣವಾಗಿತ್ತು. ಇದು ಭಾರತದ ತ್ರಿವರ್ಣ ಧ್ವಜವಲ್ಲ, ಖಲಿಸ್ತಾನಿಗಳ ಧ್ವಜ ಎಂಬ ಆರೋಪವೂ ಕೇಳಿಬಂದಿತ್ತು. ಪ್ರತ್ಯೇಕ ಖಲಿಸ್ತಾನಿ ರಾಜ್ಯಕ್ಕೆ ಬೇಡಿಕೆ ಇಟ್ಟಿದ್ದ ನಿಷೇಧಿತ ಸಂಘಟನೆ ಸಿಖ್ ಫಾರ್ ಜಸ್ಟೀಸ್ (SFJ) ಧ್ವಜ ಇದಾಗಿದ್ದು, ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದ್ದಕ್ಕೆ ಪಂಜಾಬ್ ರೈತನಿಗೆ ಬಹುಮಾನವನ್ನೂ ಘೋಷಿಸಲಾಗಿದೆ ಎಂಬ ಸುದ್ದಿ ಹರಿದಾಡಿತ್ತು.
ಇದೀಗ ಧ್ವಜದ ಬಗ್ಗೆ ಸ್ಪಷ್ಟನೆ ದೊರೆತಿದ್ದು, ಪ್ರತಿಭಟನಾಕಾರರು ಹಾರಿಸಿದ ಈ ಧ್ವಜ ಸಿಖ್ಖರ ಧಾರ್ಮಿಕ ಧ್ವಜ "ನಿಶಾನ್ ಸಾಹಿಬ್" ಎನ್ನಲಾಗಿದೆ.

ಕೆಂಪುಕೋಟೆಯ ಧ್ವಜಸ್ಥಂಭವನ್ನು ಏರಿದ ಕಿಸಾನ್ ಯೂನಿಯನ್ ಸಂಘಟನೆಯ ಪ್ರತಿಭಟನಾಕಾರರು ತಮ್ಮ ಧ್ವಜವನ್ನು ಹಾರಿಸಿದ್ದರು. ರಾಷ್ಟ್ರಧ್ವಜದ ಜೊತೆಗೆ ಕಿಸಾನ್ ಯೂನಿಯನ್ ಮತ್ತು ಇನ್ನೊಂದು ಸಂಘಟನೆಯ ಧ್ವಜವೂ ಹಾರಾಡುತ್ತಿತ್ತು. ಆನಂತರ ರೈತರು ಹಾರಿಸಿದ್ದ ಧ್ವಜದ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿದ್ದವು. ಇದೀಗ ರೈತರು ಹಾರಿಸಿದ್ದ ಈ ಧ್ವಜ, ಸಿಖ್ಖರ ಧಾರ್ಮಿಕ ಧ್ವಜ ಎಂದು ತಿಳಿದುಬಂದಿದೆ.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಕೆಂಪು ಕೋಟೆ ಮೇಲೆ ಹಾರಿಸಿದ ಕೇಸರಿ ಬಣ್ಣದ ಈ ಧ್ವಜ ತ್ರಿಭುಜಾಕೃತಿಯಲ್ಲಿದ್ದು, ಸಿಖ್ಖರಿಗೆ ಪವಿತ್ರ ಎನಿಸಿಕೊಂಡಿದೆ. ಈ ಧ್ವಜ ಎರಡು ಅಂಚಿನ ಕತ್ತಿ, ಚಕ್ರ, ಬಿಲ್ಲೆ ಹಾಗೂ ಎರಡು ಖಡ್ಗದ ಹಿಡಿಗಳನ್ನು ಒಳಗೊಡಿದೆ. ಕೆಂಪು ಕೋಟೆಯಲ್ಲಿ ಹಾರಾಡಿದ ಇನ್ನೊಂದು ಧ್ವಜ ರೈತ ಸಂಘಟನೆಯದ್ದು ಎನ್ನಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications