ಯೆಸ್ ಬ್ಯಾಂಕ್ ಕುರಿತು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು
ನವದೆಹಲಿ, ಮಾರ್ಚ್ 6: ಯೆಸ್ ಬ್ಯಾಂಕ್ನಲ್ಲಿರುವ ನಿಮ್ಮ ಹಣ ಸುರಕ್ಷಿತವಾಗಿದೆ ಗ್ರಾಹಕರ್ಯಾರೂ ಕೂಡ ಆತಂಕಗೊಳ್ಳಬೇಕಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಯ ನೀಡಿದ್ದಾರೆ.
ನಿಮ್ಮ ಹಣ ಸುರಕ್ಷಿತವಾಗಿರಲಿದೆ. 50 ಸಾವಿರಕ್ಕಿಂತ ಕಡಿಮೆ ಹಣವನ್ನು ನೀವು ಪಡೆದುಕೊಳ್ಳಲು ಈಗಲೇ ಸೂಚನೆ ನೀಡುತ್ತೇನೆ. ಆರ್ಬಿಐ ಜೊತೆ ನಿತ್ಯ ಸಂಪರ್ಕದಲ್ಲಿದ್ದೇನೆ. ನಿಮ್ಮ ಹಣ ಏನೂ ಆಗುವುದಿಲ್ಲ ಎನ್ನುವ ಭರವಸೆ ನೀಡುತ್ತೇನೆ ಎಂದು ಹೇಳಿದರು.
ಸುಸ್ಥಿ ಸಾಲಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಯೆಸ್ ಬ್ಯಾಂಕ್ ಅನ್ನು ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಸುಪರ್ದಿಗೆ ತೆಗೆದುಕೊಂಡು, ಬ್ಯಾಂಕ್ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಆಗಿ ಮಾಡಿದೆ. ನಗದು ಚಿತ್ ಡ್ರಾ ಮಿತಿಯನ್ನು 50 ಸಾವಿರಕ್ಕೆ ನಿಗದಿಗೊಳಿಸಲಾಗಿದ್ದು, ಸಾವಿರಾರು ಗ್ರಾಹಕರು ಹಣ ತೆಗೆದುಕೊಳ್ಳಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಗುರುವಾರದಂದು ಯೆಸ್ ಬಾಂಕ್ ನಲ್ಲಿ ವಿಥ್ ಡ್ರಾ ಮಿತಿಯನ್ನು 50 ಸಾವಿರಕ್ಕೆ ನಿಗದಿಗೊಳಿಸಿತ್ತು. ದೇಶದ ನಾಲ್ಕನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಯೆಸ್ ಬ್ಯಾಂಕ್ ಗೆ ಹೇಗೆ ನೆರವಾಗಬಹುದು ಎಂಬ ಬಗ್ಗೆ 30 ದಿನದೊಳಗೆ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಆರ್ ಬಿಐ ಮತ್ತು ಸರ್ಕಾರವು ಯೆಸ್ ಬ್ಯಾಂಕ್ ನ ಸಮಸ್ಯೆಯನ್ನು ಕೂಲಂಕಷವಾಗಿ ಗಮನಿಸುತ್ತಿದೆ. ಎಲ್ಲರ ಹಿತಾಸಕ್ತಿಯನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಮುಂದೆ ಏನು ಮಾಡಬೇಕು ಎಂದು ನಿರ್ಧರಿಸಲಾಗುತ್ತದೆ.
ಸದ್ಯಕ್ಕೆ ಯೆಸ್ ಬ್ಯಾಂಕ್ ಗ್ರಾಹಕರು 50 ಸಾವಿರ ರುಪಾಯಿಯೊಳಗಿನ ಮೊತ್ತವನ್ನು ವಿಥ್ ಡ್ರಾ ಮಾಡಲು ಸಾಧ್ಯವಾಗುತ್ತಿದೆಯೇ ಎಂಬುದನ್ನು ಖಾತ್ರಿ ಪಡಿಸುವುದು ಆದ್ಯತೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ವಜಾಗೊಳಿಸಿರುವ ಆರ್ಬಿಐ, ವಿತ್ಡ್ರಾ ಮಿತಿಯನ್ನು ತಕ್ಷಣವೇ ಜಾರಿಗೆ ಬರುವಂತೆ 50 ಸಾವಿರ ರುಪಾಯಿಗೆ ನಿಗದಿ ಮಾಡುವ ಮೂಲಕ ಬ್ಯಾಂಕ್ ಗ್ರಾಹಕರಿಗೆ ಆಘಾತ ನೀಡಿದೆ. ಈ ಮೂಲಕ ಗ್ರಾಹಕರು ಕೇವಲ 50 ಸಾವಿರ ಮಾತ್ರ ವಿತ್ಡ್ರಾ ಮಾಡಿಕೊಳ್ಳಬಹುದು.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications