ದೆಹಲಿಯಲ್ಲಿ ಈ ಬಾರಿ 'ದೇಶಭಕ್ತಿ' ಬಜೆಟ್ ಮಂಡನೆ
ನವದೆಹಲಿ, ಮಾರ್ಚ್ 09: ದೆಹಲಿಯಲ್ಲಿಂದು ಉಪಮುಖ್ಯಮಂತ್ರಿ ಮನೀಷ್ ಸಿಸೊಡಿಯಾ 'ದೇಶಭಕ್ತಿ' ಬಜೆಟ್ ಮಂಡಿಸಿದ್ದಾರೆ.
ಎಂದಿನಂತೆ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿರುವ ಆಪ್ ಸರ್ಕಾರ 75 ವರ್ಷದ ಸ್ವಾತಂತ್ರ್ಯೋತ್ಸವ ಹಾಗೂ ದೇಶಭಕ್ತಿಗೆ ಹೆಚ್ಚಿನ ಮಹತ್ವ ನೀಡಿದೆ.
ದೆಹಲಿ ಜನರಲ್ಲಿ ದೇಶಭಕ್ತಿಯನ್ನು ಮೂಡಿಸುವ ಹಿನ್ನೆಲೆಯಲ್ಲಿ, ಸುಮಾರು 2 ಕಿ.ಮೀ ವ್ಯಾಪ್ತಿಗೆ ರಾಷ್ಟ್ರಧ್ವಜ ಕಾಣಿಸುವಂತೆ ನಗರಾದ್ಯಂತ 500 ಕಡೆಗಳಲ್ಲಿ ತ್ರಿವರ್ಣಧ್ವಜ ಹಾರಿಸಲು 45 ಕೋಟಿ ರೂ.ವನ್ನು ಸರ್ಕಾರ ಮೀಸಲಿರಿಸಿದೆ.

ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಜೀವನಗಾಥೆ ತಿಳಿಸಲು ವಿಶೇಷವಾಗಿ 10 ಕೋಟಿ ರೂ. ಮೀಸಲಿಡಲಾಗಿದೆ. ಮುಂದಿನ 25 ವರ್ಷಗಳನ್ನು ತಲೆಯಲ್ಲಿರಿಸಿಕೊಂಡು ಬಜೆಟ್ ರೂಪಿಸಲಾಗಿದೆ ಎಂದಿರುವ ಸಿಸೊಡಿಯಾ, ಈ ಬಾರಿ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ನ ಶೇ.25ರಷ್ಟು ಹಣವನ್ನು ಮೀಸಲಿರಿಸಿದ್ದಾರೆ.
ಅಂದಹಾಗೆ ಈ ಬಾರಿಯ ಒಟ್ಟು ಬಜೆಟ್ ಗಾತ್ರವು 69 ಸಾವಿರ ಕೋಟಿ ರೂ.ದ್ದಾಗಿದೆ. ಈ ಆರ್ಥಿಕ ವರ್ಷದಲ್ಲಿ 44.1 ಸಾವಿರ ಕೋಟಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ.
ಬಜೆಟ್ ಮುಖ್ಯಾಂಶಗಳು
*ಶಿಕ್ಷಣ ಕ್ಷೇತ್ರಕ್ಕೆ 16,377 ಕೋಟಿ ರೂ. ಹಂಚಿಕೆ
*ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯುವಕರು ಪಾಠ ಮಾಡುವ ವಿನೂತನ ಅವಕಾಶ.
*ವರ್ಚ್ಯುವಲ್ ಶಾಲೆ ಆರಂಭ
*ಡೆಲ್ಲಿ ಲಾ ಯೂನಿವರ್ಸಿಟಿ
*ನರ್ಸರಿಯಿಂದ 8ನೇ ತರಗತಿಯವರೆಗೆ ನೂತನ ಪಠ್ಯಕ್ರಮ
*ಆರೋಗ್ಯ ಕ್ಷೇತ್ರಕ್ಕೆ 9,934 ಕೋಟಿ ರೂ. ಮೀಸಲು
*ದೆಹಲಿಯಲ್ಲಿ ದಿನ 60 ಸಾವಿರ ಮಂದಿಗೆ ಕೊರೊನಾ ಲಸಿಕೆ ನೀಡಲು ಅವಕಾಶ ನಿರ್ಮಾಣ
*100 ಮಹಿಳಾ ಮೊಹೊಲ್ಲಾ ಕ್ಲಿನಿಕ್ ಆರಂಭ
*ಎಲ್ಲಾ ಅನಧಿಕೃತ ಕಾಲೊನಿಗಳಿಗೆ ಪೈಪ್ಲೈನ್ನಲ್ಲಿ ನೀರು ಸರಬರಾಜು
*ಮುಂದಿನ ಮೂರು ವರ್ಷಗಳಲ್ಲಿ ಯಮುನಾ ನದಿ ಸ್ವಚ್ಛತೆ ಕಾರ್ಯ ಪೂರ್ಣ
*ಪ್ರತಿ ಮೂರು ಕಿ.ಮೀಗೆ ಇ-ವಾಹನ ಚಾರ್ಜಿಂಗ್ ಕೇಂದ್ರ
* ಮುಂದಿನ 25 ವರ್ಷಗಳಲ್ಲಿ ಒಲಂಪಿಕ್ ಆತಿಥ್ಯವಹಿಸುವ ನಿಟ್ಟಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ
*ಅಂಗನವಾಡಿ ಕೇಂದ್ರಗಳನ್ನು ಮಧ್ಯಾಹ್ನದ ನಂತರ ಮಹಿಳಾ ಸಮನ್ವಯ ಕೇಂದ್ರವಾಗಿ ಬಳಕೆಗೆ ಪ್ರೋತ್ಸಾಹ, ಇಲ್ಲಿ ಮಹಿಳೆಯರು ತಮ್ಮ ಉದ್ಯಮವನ್ನು ಆರಂಭಿಸಬಹುದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications